<p class="title"><strong>ನರಸಿಂಗಪುರ</strong>: ಮದ್ಯ ವ್ಯಸನಿ ಗಂಡನ ಕಿರುಕುಳದಿಂದ ತಪ್ಪಿಸಿಕೊಳ್ಳಲು 38 ವರ್ಷದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.<p class="title">ಮಹಿಳೆ ಮತ್ತು 19 ವರ್ಷದ ಮಗ ಹಾಗೂ 16 ವರ್ಷದ ಬಾಲಕಿ ಹಿಂಸೆಯಿಂದ ಬೇಸತ್ತು ಗಡರ್ವಾರಾ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆಕೊಟ್ಟು ಪ್ರಾಣ ಬಿಟ್ಟಿದ್ದಾರೆ. </p>.<p class="title">ಶುಕ್ರವಾರ ರಾತ್ರಿ 10 ಗಂಟೆಗೆ ರೈಲ್ವೆ ಹಳಿ ಮೇಲೆ ಮೃತದೇಹಗಳು ಇರುವ ಮಾಹಿತಿ ಸಿಕ್ಕಿದೆ ಎಂದು ಸ್ಥಳೀಯ ಉಪ ವಿಭಾಗದ ಪೊಲೀಸ್ ಅಧಿಕಾರಿ ಶಶಿ ಪಠಾಕ್ ತಿಳಿಸಿದ್ದಾರೆ.</p>.<p class="title">ಯುವಕನ ಜೇಬಿನಲ್ಲಿ ಪತ್ರ ಸಿಕ್ಕಿದ್ದು, ಅದರಲ್ಲಿ ನಮ್ಮ ತಂದೆ ಕುಡಿದು ತೊಂದರೆ ನೀಡುವರು. ಇದರಿಂದ ಬೇಸತ್ತು ಮೂರು ಮಂದಿ ಪ್ರಾಣ ತೆಗೆದುಕೊಳ್ಳುತ್ತಿದ್ದೇವೆ ಎಂದು ಬರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಯುವಕನ ತಂದೆಯನ್ನು ಬಂಧಿಸಿದ್ದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು ಎಂದು ಪಠಾಕ್ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನರಸಿಂಗಪುರ</strong>: ಮದ್ಯ ವ್ಯಸನಿ ಗಂಡನ ಕಿರುಕುಳದಿಂದ ತಪ್ಪಿಸಿಕೊಳ್ಳಲು 38 ವರ್ಷದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ನರಸಿಂಗಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.</p>.<p class="title">ಮಹಿಳೆ ಮತ್ತು 19 ವರ್ಷದ ಮಗ ಹಾಗೂ 16 ವರ್ಷದ ಬಾಲಕಿ ಹಿಂಸೆಯಿಂದ ಬೇಸತ್ತು ಗಡರ್ವಾರಾ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆಕೊಟ್ಟು ಪ್ರಾಣ ಬಿಟ್ಟಿದ್ದಾರೆ. </p>.<p class="title">ಶುಕ್ರವಾರ ರಾತ್ರಿ 10 ಗಂಟೆಗೆ ರೈಲ್ವೆ ಹಳಿ ಮೇಲೆ ಮೃತದೇಹಗಳು ಇರುವ ಮಾಹಿತಿ ಸಿಕ್ಕಿದೆ ಎಂದು ಸ್ಥಳೀಯ ಉಪ ವಿಭಾಗದ ಪೊಲೀಸ್ ಅಧಿಕಾರಿ ಶಶಿ ಪಠಾಕ್ ತಿಳಿಸಿದ್ದಾರೆ.</p>.<p class="title">ಯುವಕನ ಜೇಬಿನಲ್ಲಿ ಪತ್ರ ಸಿಕ್ಕಿದ್ದು, ಅದರಲ್ಲಿ ನಮ್ಮ ತಂದೆ ಕುಡಿದು ತೊಂದರೆ ನೀಡುವರು. ಇದರಿಂದ ಬೇಸತ್ತು ಮೂರು ಮಂದಿ ಪ್ರಾಣ ತೆಗೆದುಕೊಳ್ಳುತ್ತಿದ್ದೇವೆ ಎಂದು ಬರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಯುವಕನ ತಂದೆಯನ್ನು ಬಂಧಿಸಿದ್ದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು ಎಂದು ಪಠಾಕ್ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>