<p><strong>ನವದೆಹಲಿ:</strong> ಹಿರಿಯರ ಮನೆ ಎಂದೇ ಕರೆಯುವ ರಾಜ್ಯಸಭೆಯಲ್ಲಿ ಸಂಸದರು ಎಂದಿಗೂ ಸಂವಾದ ನಡೆಸುವುದಿಲ್ಲ ಎಂದು ಶುಕ್ರವಾರ ಬೇಸರ ವ್ಯಕ್ತಪಡಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು, ಸಂಸದರು ವೇದಾಂತವನ್ನು ಅಧ್ಯಯಿಸಿದರೆ ಪರಿಣಾಮಕಾರಿಯಾಗಿ ಚರ್ಚೆಗಳಲ್ಲಿ ಭಾಗವಹಿಸಬಹುದು ಎಂದರು.</p>.<p>ಆದರೆ, ಸನಾತನ ಧರ್ಮ ಮತ್ತು ಹಿಂದೂಗಳ ಬಗ್ಗೆ ತಪ್ಪು ತಿಳಿದಿರುವ ಕೆಲವರು ದಿಗ್ಭ್ರಮೆಗೊಳಿಸುವ ರೀತಿಯಲ್ಲಿ ಮಾತನಾಡುತ್ತಾರೆ ಎಂದು ಅವರು ವಿಷಾದಿಸಿದರು.</p>.<p>ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ಆಯೋಜಿಸಲಾಗಿದ್ದ ವೇದಾಂತ ಕುರಿತ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ವೇದಾಂತವು ಸಂವಾದವನ್ನು ಉತ್ತೇಜಿಸುತ್ತದೆ. ಅಲ್ಲದೆ ವಿಭಿನ್ನ ದೃಷ್ಟಿಕೋನಗಳ ಜನರು ಹೇಗೆ ಸಹಬಾಳ್ವೆ ನಡೆಸಬಹುದು ಎಂಬುದನ್ನೂ ಅದು ತೋರಿಸುತ್ತದೆ ಎಂದು ರಾಜ್ಯಸಭಾ ಸಭಾಪತಿಯೂ ಆಗಿರುವ ಅವರು ಹೇಳಿದರು.</p>.<p>‘ಸಂಸದರು ತಮ್ಮ ಕರ್ತವ್ಯ ನಿರ್ವಹಿಸಲು ವಿಫಲರಾದರೆ, ಜನರು ಅವರನ್ನು ಪ್ರಶ್ನಿಸುವ ಮೂಲಕ ಒತ್ತಡ ಹೇರಬೇಕು. ವೈದ್ಯರು, ವಕೀಲರು ಅಥವಾ ಇತರ ಸಾರ್ವಜನಿಕ ಸೇವಕರು ಕರ್ತವ್ಯ ನಿರ್ವಹಿಸದಿದ್ದಾಗ ಹೇಗೆ ಪ್ರಶ್ನಿಸಲಾಗುತ್ತದೆಯೋ ಹಾಗೇ ಇವರನ್ನೂ ಕೇಳಬೇಕು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಿರಿಯರ ಮನೆ ಎಂದೇ ಕರೆಯುವ ರಾಜ್ಯಸಭೆಯಲ್ಲಿ ಸಂಸದರು ಎಂದಿಗೂ ಸಂವಾದ ನಡೆಸುವುದಿಲ್ಲ ಎಂದು ಶುಕ್ರವಾರ ಬೇಸರ ವ್ಯಕ್ತಪಡಿಸಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು, ಸಂಸದರು ವೇದಾಂತವನ್ನು ಅಧ್ಯಯಿಸಿದರೆ ಪರಿಣಾಮಕಾರಿಯಾಗಿ ಚರ್ಚೆಗಳಲ್ಲಿ ಭಾಗವಹಿಸಬಹುದು ಎಂದರು.</p>.<p>ಆದರೆ, ಸನಾತನ ಧರ್ಮ ಮತ್ತು ಹಿಂದೂಗಳ ಬಗ್ಗೆ ತಪ್ಪು ತಿಳಿದಿರುವ ಕೆಲವರು ದಿಗ್ಭ್ರಮೆಗೊಳಿಸುವ ರೀತಿಯಲ್ಲಿ ಮಾತನಾಡುತ್ತಾರೆ ಎಂದು ಅವರು ವಿಷಾದಿಸಿದರು.</p>.<p>ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್ಯು) ಆಯೋಜಿಸಲಾಗಿದ್ದ ವೇದಾಂತ ಕುರಿತ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಅವರು ಮಾತನಾಡಿದರು.</p>.<p>ವೇದಾಂತವು ಸಂವಾದವನ್ನು ಉತ್ತೇಜಿಸುತ್ತದೆ. ಅಲ್ಲದೆ ವಿಭಿನ್ನ ದೃಷ್ಟಿಕೋನಗಳ ಜನರು ಹೇಗೆ ಸಹಬಾಳ್ವೆ ನಡೆಸಬಹುದು ಎಂಬುದನ್ನೂ ಅದು ತೋರಿಸುತ್ತದೆ ಎಂದು ರಾಜ್ಯಸಭಾ ಸಭಾಪತಿಯೂ ಆಗಿರುವ ಅವರು ಹೇಳಿದರು.</p>.<p>‘ಸಂಸದರು ತಮ್ಮ ಕರ್ತವ್ಯ ನಿರ್ವಹಿಸಲು ವಿಫಲರಾದರೆ, ಜನರು ಅವರನ್ನು ಪ್ರಶ್ನಿಸುವ ಮೂಲಕ ಒತ್ತಡ ಹೇರಬೇಕು. ವೈದ್ಯರು, ವಕೀಲರು ಅಥವಾ ಇತರ ಸಾರ್ವಜನಿಕ ಸೇವಕರು ಕರ್ತವ್ಯ ನಿರ್ವಹಿಸದಿದ್ದಾಗ ಹೇಗೆ ಪ್ರಶ್ನಿಸಲಾಗುತ್ತದೆಯೋ ಹಾಗೇ ಇವರನ್ನೂ ಕೇಳಬೇಕು’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>