<p><strong>ಬದೌನ್ (ಉತ್ತರ ಪ್ರದೇಶ):</strong> ಮೊಘಲರ ಕಾಲದಲ್ಲಿ ದೇವಾಲಯಗಳನ್ನು ಕೆಡವಿ ಎಲ್ಲಾ ಮಸೀದಿಗಳನ್ನು ನಿರ್ಮಿಸಲಾಗಿದೆ ಎಂದು ಬಜರಂಗದಳದ ರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.</p><p>ಬಿಲ್ಸಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೊಗಾಡಿಯಾ, ‘ಮೊಘಲರ ಕಾಲದಲ್ಲಿ ನಿರ್ಮಿಸಲಾದ ಎಲ್ಲಾ ಮಸೀದಿಗಳು ದೇವಾಲಯಗಳನ್ನು ಕೆಡವಿ ನಿರ್ಮಿಸಿದವು. ಮಸೀದಿಗಳನ್ನು ನಿರ್ಮಿಸಲು ಕೆಡವಲಾದ 12,000 ದೇವಾಲಗಳ ಪಟ್ಟಿಯನ್ನು ನಾನು ನೋಡಿದ್ದೇನೆ’ ಎಂದು ತಿಳಿಸಿದ್ದಾರೆ.</p><p>ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ತೊಗಾಡಿಯಾ ಕಳವಳ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧದ ಹೋರಾಟವಾಗಿದ್ದರೆ ಹಿಂದೂಗಳನ್ನು ಏಕೆ ಕೊಲ್ಲುತ್ತಿದ್ದರು. ಹಿಂದೂಗಳನ್ನು ರಕ್ಷಿಸುವ ಮತ್ತು ಸೂಕ್ತ ಉತ್ತರ ಕೊಡುವ ಸರ್ಕಾರ ಬೇಕಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದೌನ್ (ಉತ್ತರ ಪ್ರದೇಶ):</strong> ಮೊಘಲರ ಕಾಲದಲ್ಲಿ ದೇವಾಲಯಗಳನ್ನು ಕೆಡವಿ ಎಲ್ಲಾ ಮಸೀದಿಗಳನ್ನು ನಿರ್ಮಿಸಲಾಗಿದೆ ಎಂದು ಬಜರಂಗದಳದ ರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.</p><p>ಬಿಲ್ಸಿ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ತೊಗಾಡಿಯಾ, ‘ಮೊಘಲರ ಕಾಲದಲ್ಲಿ ನಿರ್ಮಿಸಲಾದ ಎಲ್ಲಾ ಮಸೀದಿಗಳು ದೇವಾಲಯಗಳನ್ನು ಕೆಡವಿ ನಿರ್ಮಿಸಿದವು. ಮಸೀದಿಗಳನ್ನು ನಿರ್ಮಿಸಲು ಕೆಡವಲಾದ 12,000 ದೇವಾಲಗಳ ಪಟ್ಟಿಯನ್ನು ನಾನು ನೋಡಿದ್ದೇನೆ’ ಎಂದು ತಿಳಿಸಿದ್ದಾರೆ.</p><p>ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದವರ ಮೇಲೆ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ತೊಗಾಡಿಯಾ ಕಳವಳ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧದ ಹೋರಾಟವಾಗಿದ್ದರೆ ಹಿಂದೂಗಳನ್ನು ಏಕೆ ಕೊಲ್ಲುತ್ತಿದ್ದರು. ಹಿಂದೂಗಳನ್ನು ರಕ್ಷಿಸುವ ಮತ್ತು ಸೂಕ್ತ ಉತ್ತರ ಕೊಡುವ ಸರ್ಕಾರ ಬೇಕಿದೆ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>