<p><strong>ಗೋರಖ್ಪುರ:</strong> ಭಾರತದಲ್ಲಿ ಮತ್ತೊಮ್ಮೆ ಮುಹಮ್ಮದ್ ಅಲಿ ಜಿನ್ನಾ ಅಂತವರು ಹುಟ್ಟದಿರುವಂತೆ ಜನರು ನೋಡಿಕೊಳ್ಳಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೋಮವಾರ ಹೇಳಿದ್ದಾರೆ.</p><p>ಗೋರಖ್ಪುರದಲ್ಲಿ ನಡೆದ ಏಕತಾ ಯಾತ್ರೆಯಲ್ಲಿ ಅವರು ಮಾತನಾಡಿದ್ದಾರೆ.</p><p>ರಾಷ್ಟ್ರಗಾನ ವಂದೇ ಮಾತರಂ ಅನ್ನು ವಿರೋಧಿಸುವವರು ಭಾರತದ ಏಕತೆ ಮತ್ತು ಐಕ್ಯತೆಗೆ ಅಪಮಾನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. </p><p>ಇವತ್ತಿಗೂ ನಾವು ಭಾರತದಲ್ಲಿ ವಾಸಿಸುವವರು ದೇಶಕ್ಕೆ ನಿಷ್ಠರಾಗಿರಬೇಕು ಎಂದು ಆಶಿಸುತ್ತೇವೆ. ಎಲ್ಲರೂ ದೇಶದ ಏಕತೆಯನ್ನು ಕಾಪಾಡಬೇಕು ಎಂದು ಬಯಸುತ್ತೇವೆ ಎಂದು ತಿಳಿಸಿದ್ದಾರೆ. </p><p>ಜಾತಿ, ಧರ್ಮ ಮತ್ತು ಭಾಷೆಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಎಲ್ಲವನ್ನೂ ನಾವು ವಿರೋಧಿಸಬೇಕು, ಅದು ನಮ್ಮ ಕರ್ತವ್ಯ. ಈ ರೀತಿಯ ಬೇರ್ಪಡಿಸುವಿಕೆಯು ಮತ್ತೊಬ್ಬ ಜಿನ್ನಾ ಅಂತವರನ್ನು ಹುಟ್ಟುಹಾಕುವ ಪ್ರಯತ್ನ ಎಂದು ಕಿಡಿಕಾರಿದ್ದಾರೆ. </p><p>ದೇಶ ವಿರೋಧಿ ಚಟುವಟಿಕೆಗಳನ್ನು ಬುಡದಲ್ಲೇ ಕಿತ್ತುಹಾಕಬೇಕು. ಈ ವಿಷಯದಲ್ಲಿ ದೇಶದ ಜನರೆಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದ್ದಾರೆ. </p><p>ಮುಹಮ್ಮದ್ ಅಲಿ ಜಿನ್ನಾ ಅವರು ಅಖಿಲ ಭಾರತ ಮುಸ್ಲಿಂ ಲೀಗ್ ನಾಯಕರಾಗಿದ್ದರು. ಭಾರತ ವಿಭಜನೆಯಾಗಿ ಪಾಕಿಸ್ತಾನ ದೇಶ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೋರಖ್ಪುರ:</strong> ಭಾರತದಲ್ಲಿ ಮತ್ತೊಮ್ಮೆ ಮುಹಮ್ಮದ್ ಅಲಿ ಜಿನ್ನಾ ಅಂತವರು ಹುಟ್ಟದಿರುವಂತೆ ಜನರು ನೋಡಿಕೊಳ್ಳಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೋಮವಾರ ಹೇಳಿದ್ದಾರೆ.</p><p>ಗೋರಖ್ಪುರದಲ್ಲಿ ನಡೆದ ಏಕತಾ ಯಾತ್ರೆಯಲ್ಲಿ ಅವರು ಮಾತನಾಡಿದ್ದಾರೆ.</p><p>ರಾಷ್ಟ್ರಗಾನ ವಂದೇ ಮಾತರಂ ಅನ್ನು ವಿರೋಧಿಸುವವರು ಭಾರತದ ಏಕತೆ ಮತ್ತು ಐಕ್ಯತೆಗೆ ಅಪಮಾನ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. </p><p>ಇವತ್ತಿಗೂ ನಾವು ಭಾರತದಲ್ಲಿ ವಾಸಿಸುವವರು ದೇಶಕ್ಕೆ ನಿಷ್ಠರಾಗಿರಬೇಕು ಎಂದು ಆಶಿಸುತ್ತೇವೆ. ಎಲ್ಲರೂ ದೇಶದ ಏಕತೆಯನ್ನು ಕಾಪಾಡಬೇಕು ಎಂದು ಬಯಸುತ್ತೇವೆ ಎಂದು ತಿಳಿಸಿದ್ದಾರೆ. </p><p>ಜಾತಿ, ಧರ್ಮ ಮತ್ತು ಭಾಷೆಯ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಎಲ್ಲವನ್ನೂ ನಾವು ವಿರೋಧಿಸಬೇಕು, ಅದು ನಮ್ಮ ಕರ್ತವ್ಯ. ಈ ರೀತಿಯ ಬೇರ್ಪಡಿಸುವಿಕೆಯು ಮತ್ತೊಬ್ಬ ಜಿನ್ನಾ ಅಂತವರನ್ನು ಹುಟ್ಟುಹಾಕುವ ಪ್ರಯತ್ನ ಎಂದು ಕಿಡಿಕಾರಿದ್ದಾರೆ. </p><p>ದೇಶ ವಿರೋಧಿ ಚಟುವಟಿಕೆಗಳನ್ನು ಬುಡದಲ್ಲೇ ಕಿತ್ತುಹಾಕಬೇಕು. ಈ ವಿಷಯದಲ್ಲಿ ದೇಶದ ಜನರೆಲ್ಲರೂ ಒಗ್ಗಟ್ಟಿನಿಂದ ಇರಬೇಕು ಎಂದು ಹೇಳಿದ್ದಾರೆ. </p><p>ಮುಹಮ್ಮದ್ ಅಲಿ ಜಿನ್ನಾ ಅವರು ಅಖಿಲ ಭಾರತ ಮುಸ್ಲಿಂ ಲೀಗ್ ನಾಯಕರಾಗಿದ್ದರು. ಭಾರತ ವಿಭಜನೆಯಾಗಿ ಪಾಕಿಸ್ತಾನ ದೇಶ ಸ್ಥಾಪನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>