<p><strong>ತ್ರಿಶೂರು</strong>: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರು ಇಂದು ಬೆಳಿಗ್ಗೆ ಕೇರಳದ ತ್ರಿಶೂರ್ ಜಿಲ್ಲೆಯ ಪ್ರಸಿದ್ಧ ಗುರುವಾಯೂರಿನ ಗುರುವಾಯೂರಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.</p><p>ವಿಶೇಷ ಹೆಲಿಕಾಪ್ಟರ್ ಮೂಲಕ ಅವರು ತ್ರಿಶೂರ್ಗೆ ಆಗಮಿಸಿ ಅಲ್ಲಿಂದ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿದರು.</p><p>ಈ ವೇಳೆ ಗುರುವಾಯೂರು ದೇವಳಂನ ಅಧ್ಯಕ್ಷ ವಿ.ಕೆ. ವಿಜಯನ್ ಅವರು ಅಂಬಾನಿ ಅವರನ್ನು ಸ್ವಾಗತಿಸಿ ಬೆಳಿಗ್ಗೆ 7.30 ಕ್ಕೆ ವಿಶೇಷ ಪೂಜೆಗೆ ವ್ಯವಸ್ಥೆ ಮಾಡಿಕೊಟ್ಟರು.</p><p>ದೇವಳಂ ವತಿಯಿಂದ ಮುಕೇಶ್ ಅಂಬಾನಿ ಅವರನ್ನು ಸನ್ಮಾನಿಸಲಾಯಿತು. ವಿ.ಕೆ. ವಿಜಯನ್ ಅವರು ಗುರುವಾಯೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ಹಾಗೂ ಆಧುನಿಕ ಪಶು ಆಸ್ಪತ್ರೆಯ ಬಗ್ಗೆ ವಿವರಣೆ ನೀಡಿದರು.</p><p>ಈ ವೇಳೆ ಮುಕೇಶ್ ಅಂಬಾನಿ ಅವರು ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ಗೆ ₹15 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಅಲ್ಲದೇ ಪಶು ಆಸ್ಪತ್ರೆಗೆ ತಮ್ಮ ಒಡೆತನದ ವಂಟಾರಾ ಮೂಲಕ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂಬ ಭರವಸೆಯನ್ನು ನೀಡಿದರು.</p><p>ಅಂಬಾನಿ ಅವರು ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿ ಬೆಳಿಗ್ಗೆ 8 ಗಂಟೆಗೆ ವಾಪಸ್ಸಾದರು ಎಂದು ಗುರುವಾಯೂರು ದೇವಳಂ ತಿಳಿಸಿದೆ.</p>.Reliance AGM | ‘ರಿಲಯನ್ಸ್ ಇಂಟೆಲಿಜೆನ್ಸ್’ ಎ.ಐ ಸ್ಥಾಪನೆ: ಮುಕೇಶ್ ಅಂಬಾನಿ.ಜಿಯೊ ನನ್ನ ಜೀವನದ ಅತಿದೊಡ್ಡ ಸವಾಲು: ಮುಕೇಶ್ ಅಂಬಾನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತ್ರಿಶೂರು</strong>: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಹಾಗೂ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಅವರು ಇಂದು ಬೆಳಿಗ್ಗೆ ಕೇರಳದ ತ್ರಿಶೂರ್ ಜಿಲ್ಲೆಯ ಪ್ರಸಿದ್ಧ ಗುರುವಾಯೂರಿನ ಗುರುವಾಯೂರಪ್ಪ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.</p><p>ವಿಶೇಷ ಹೆಲಿಕಾಪ್ಟರ್ ಮೂಲಕ ಅವರು ತ್ರಿಶೂರ್ಗೆ ಆಗಮಿಸಿ ಅಲ್ಲಿಂದ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳಿದರು.</p><p>ಈ ವೇಳೆ ಗುರುವಾಯೂರು ದೇವಳಂನ ಅಧ್ಯಕ್ಷ ವಿ.ಕೆ. ವಿಜಯನ್ ಅವರು ಅಂಬಾನಿ ಅವರನ್ನು ಸ್ವಾಗತಿಸಿ ಬೆಳಿಗ್ಗೆ 7.30 ಕ್ಕೆ ವಿಶೇಷ ಪೂಜೆಗೆ ವ್ಯವಸ್ಥೆ ಮಾಡಿಕೊಟ್ಟರು.</p><p>ದೇವಳಂ ವತಿಯಿಂದ ಮುಕೇಶ್ ಅಂಬಾನಿ ಅವರನ್ನು ಸನ್ಮಾನಿಸಲಾಯಿತು. ವಿ.ಕೆ. ವಿಜಯನ್ ಅವರು ಗುರುವಾಯೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ಹಾಗೂ ಆಧುನಿಕ ಪಶು ಆಸ್ಪತ್ರೆಯ ಬಗ್ಗೆ ವಿವರಣೆ ನೀಡಿದರು.</p><p>ಈ ವೇಳೆ ಮುಕೇಶ್ ಅಂಬಾನಿ ಅವರು ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ಗೆ ₹15 ಕೋಟಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಅಲ್ಲದೇ ಪಶು ಆಸ್ಪತ್ರೆಗೆ ತಮ್ಮ ಒಡೆತನದ ವಂಟಾರಾ ಮೂಲಕ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂಬ ಭರವಸೆಯನ್ನು ನೀಡಿದರು.</p><p>ಅಂಬಾನಿ ಅವರು ದೇವಸ್ಥಾನದಲ್ಲಿ ಪ್ರಸಾದ ಸ್ವೀಕರಿಸಿ ಬೆಳಿಗ್ಗೆ 8 ಗಂಟೆಗೆ ವಾಪಸ್ಸಾದರು ಎಂದು ಗುರುವಾಯೂರು ದೇವಳಂ ತಿಳಿಸಿದೆ.</p>.Reliance AGM | ‘ರಿಲಯನ್ಸ್ ಇಂಟೆಲಿಜೆನ್ಸ್’ ಎ.ಐ ಸ್ಥಾಪನೆ: ಮುಕೇಶ್ ಅಂಬಾನಿ.ಜಿಯೊ ನನ್ನ ಜೀವನದ ಅತಿದೊಡ್ಡ ಸವಾಲು: ಮುಕೇಶ್ ಅಂಬಾನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>