<p><strong>ಅಮರಾವತಿ</strong>: ರಿಲಯನ್ಸ್ ಇಂಡಸ್ಟ್ರೀಸ್ನ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಇಂದು ಆಂಧ್ರ ಪ್ರದೇಶದಲ್ಲಿರುವ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.</p><p>ನಸುಕಿನ ಮುಂಜಾನೆ ಸುಪ್ರಭಾತ ಸೇವೆ ವೇಳೆಗೆ ದೇವಸ್ಥಾನಕ್ಕೆ ಆಗಮಿಸಿದರು. ಟಿಟಿಡಿ ಅಧಿಕಾರಿಗಳು ಮುಕೇಶ್ ಅವರನ್ನು ಬರಮಾಡಿಕೊಂಡರು. </p><p>ಇದಕ್ಕೂ ಮುನ್ನ ಅಂಬಾನಿ ಅವರು ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. </p><p>ಇಲ್ಲಿ ನಿರ್ಮಾಣ ಮಾಡಲು ಯೋಜಿಸಲಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ದೇವಸ್ಥಾನದ ಆನೆಗಳಿಗೆ ಆಧುನಿಕ ಪಶು ಆಸ್ಪತ್ರೆ ನಿರ್ಮಾಣಕ್ಕಾಗಿ ₹15 ಕೋಟಿ ದೇಣಿಗೆಯನ್ನೂ ನೀಡಿದರು. </p><p>ಮುಕೇಶ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿರುವ ಚಿತ್ರಗಳನ್ನು ಗುರುವಾಯೂರು ದೇವಸ್ವಂ ತನ್ನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದೆ. </p><p>ಹೆಲಿಕಾಪ್ಟರ್ನಲ್ಲಿ ಮುಂಜಾನೆ 7.30ಕ್ಕೆ ಬಂದಿಳಿದ ಮುಕೇಶ್ ಅವರು ನಂತರ ರಸ್ತೆ ಮಾರ್ಗವಾಗಿ ದೇವಸ್ಥಾನಕ್ಕೆ ತೆರಳಿದರು. ಅಲ್ಲಿ ದೇವಸ್ವಂ ಅಧ್ಯಕ್ಷ ಡಾ ವಿ.ಕೆ ವಿಜಯನ್ ಹಾಗೂ ಇತರರು ಅವರನ್ನು ಬರಮಾಡಿಕೊಂಡರು. ಬಳಿಕ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. </p><p>ಆಸ್ಪತ್ರೆಗಳ ನಿರ್ಮಾಣದ ಯೋಜನೆ ಕುರಿತು ದೇವಸ್ವಂ ಅಧಿಕಾರಿಗಳು ಮುಕೇಶ್ ಅವರಿಗೆ ಮಾಹಿತಿ ನೀಡಿದರು. ಎರಡೂ ಯೋಜನೆಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಅವರು, ಮೊದಲ ಹಂತದಲ್ಲಿ ₹15 ಕೋಟಿ ನೀಡಿದ್ದಾರೆ. </p><p>ಗುರುವಾಯೂರು ಆನೆಗಳ ಆರೈಕೆ ಹಾಗೂ ನಿರ್ವಹಣೆಗಾಗಿ, ಗುಜರಾತ್ನಲ್ಲಿರುವ ರಿಲಯನ್ಸ್ ವನ್ಯಜೀವಿ ಸಂರಕ್ಷಣಾ ಕೇಂದ್ರದ ಮಾದರಿಯಲ್ಲಿ ತಾಂತ್ರಿಕ ನೆರವು ನೀಡುವುದಾಗಿಯೂ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ರಿಲಯನ್ಸ್ ಇಂಡಸ್ಟ್ರೀಸ್ನ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಇಂದು ಆಂಧ್ರ ಪ್ರದೇಶದಲ್ಲಿರುವ ತಿರುಮಲ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.</p><p>ನಸುಕಿನ ಮುಂಜಾನೆ ಸುಪ್ರಭಾತ ಸೇವೆ ವೇಳೆಗೆ ದೇವಸ್ಥಾನಕ್ಕೆ ಆಗಮಿಸಿದರು. ಟಿಟಿಡಿ ಅಧಿಕಾರಿಗಳು ಮುಕೇಶ್ ಅವರನ್ನು ಬರಮಾಡಿಕೊಂಡರು. </p><p>ಇದಕ್ಕೂ ಮುನ್ನ ಅಂಬಾನಿ ಅವರು ಕೇರಳದ ಗುರುವಾಯೂರು ಶ್ರೀಕೃಷ್ಣ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. </p><p>ಇಲ್ಲಿ ನಿರ್ಮಾಣ ಮಾಡಲು ಯೋಜಿಸಲಾಗಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ದೇವಸ್ಥಾನದ ಆನೆಗಳಿಗೆ ಆಧುನಿಕ ಪಶು ಆಸ್ಪತ್ರೆ ನಿರ್ಮಾಣಕ್ಕಾಗಿ ₹15 ಕೋಟಿ ದೇಣಿಗೆಯನ್ನೂ ನೀಡಿದರು. </p><p>ಮುಕೇಶ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿರುವ ಚಿತ್ರಗಳನ್ನು ಗುರುವಾಯೂರು ದೇವಸ್ವಂ ತನ್ನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದೆ. </p><p>ಹೆಲಿಕಾಪ್ಟರ್ನಲ್ಲಿ ಮುಂಜಾನೆ 7.30ಕ್ಕೆ ಬಂದಿಳಿದ ಮುಕೇಶ್ ಅವರು ನಂತರ ರಸ್ತೆ ಮಾರ್ಗವಾಗಿ ದೇವಸ್ಥಾನಕ್ಕೆ ತೆರಳಿದರು. ಅಲ್ಲಿ ದೇವಸ್ವಂ ಅಧ್ಯಕ್ಷ ಡಾ ವಿ.ಕೆ ವಿಜಯನ್ ಹಾಗೂ ಇತರರು ಅವರನ್ನು ಬರಮಾಡಿಕೊಂಡರು. ಬಳಿಕ ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. </p><p>ಆಸ್ಪತ್ರೆಗಳ ನಿರ್ಮಾಣದ ಯೋಜನೆ ಕುರಿತು ದೇವಸ್ವಂ ಅಧಿಕಾರಿಗಳು ಮುಕೇಶ್ ಅವರಿಗೆ ಮಾಹಿತಿ ನೀಡಿದರು. ಎರಡೂ ಯೋಜನೆಗಳಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ ಅವರು, ಮೊದಲ ಹಂತದಲ್ಲಿ ₹15 ಕೋಟಿ ನೀಡಿದ್ದಾರೆ. </p><p>ಗುರುವಾಯೂರು ಆನೆಗಳ ಆರೈಕೆ ಹಾಗೂ ನಿರ್ವಹಣೆಗಾಗಿ, ಗುಜರಾತ್ನಲ್ಲಿರುವ ರಿಲಯನ್ಸ್ ವನ್ಯಜೀವಿ ಸಂರಕ್ಷಣಾ ಕೇಂದ್ರದ ಮಾದರಿಯಲ್ಲಿ ತಾಂತ್ರಿಕ ನೆರವು ನೀಡುವುದಾಗಿಯೂ ಹೇಳಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>