<p><strong>ಮಹಾಕುಂಭ ನಗರ:</strong> ರಿಲಾಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಕುಟುಂಬ ಸಮೇತ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಸಂಗಮದಲ್ಲಿ ಮುಳುಗೆದ್ದು ಪುಣ್ಯ ಸ್ನಾನ ಮಾಡಿದ್ದಾರೆ.</p><p>ಕುಂಭ ಮೇಳದ ಭೇಟಿ ವೇಳೆ ಅಂಬಾನಿ ಕುಟುಂಬ ಪರಮತೀರ್ಥ ತ್ರಿವೇಣಿ ಪುಷ್ಪ ಆಶ್ರಮದಲ್ಲಿ ನಡೆದ ಯಜ್ಞದಲ್ಲಿ ಪಾಲ್ಗೊಂಡಿತ್ತು.</p><p>ಈ ಕುರಿತು ಆಶ್ರಮ ಹೇಳಿಕೆ ಬಿಡುಗಡೆ ಮಾಡಿದ್ದು, ಮುಕೇಶ್ ಅಂಬಾನಿ, ಅವರ ತಾಯಿ ಕೊಕಿಲಾ ಬೆನ್ ಅಂಬಾನಿ, ಶ್ಲೋಕ ಅಂಬಾನಿ, ಅನಂತ ಅಂಬಾನಿ ದಂಪತಿ ಆಶ್ರಮಕ್ಕೆ ಭೇಟಿ ನೀಡಿದ್ದರು. ಸ್ವಾಮಿ ಚಿದಾನಂದ ಸರಸ್ವತಿ ಅವರ ನೇತೃತ್ವದಲ್ಲಿ ನಡೆದ ಯಜ್ಞದಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಿದೆ.</p><p>ಇದೇ ವೇಳೆ, ಸ್ವಚ್ಛತಾ ಕೆಲಸ ಮಾಡುವವರಿಗೆ ಮತ್ತು ದೋಣಿ ನಡೆಸುವವರಿಗೆ ಅಂಗವಸ್ತ್ರ, ಸಿಹಿ ತಿಂಡಿ, ಹಣ್ಣು, ಸ್ವಚ್ಛತಾ ಕಿಟ್ ಸೇರಿ ಹಲವು ಉಡುಗೊರೆಗಳನ್ನು ನೀಡಿದ್ದಾರೆ.</p><p>ಆಶ್ರಮದಲ್ಲಿ ಜಗತ್ತಿನ ಶಾಂತಿ ಮತ್ತು ಒಳಿತಿಗಾಗಿ ನಡೆದ ವಿಶ್ವ ಶಾಂತಿ ಯಜ್ಞದಲ್ಲಿ ಮುಕೇಶ್ ಅವರ ಕುಟುಂಬ ಪಾಲ್ಗೊಂಡಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಕುಂಭ ನಗರ:</strong> ರಿಲಾಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಕುಟುಂಬ ಸಮೇತ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ ಸಂಗಮದಲ್ಲಿ ಮುಳುಗೆದ್ದು ಪುಣ್ಯ ಸ್ನಾನ ಮಾಡಿದ್ದಾರೆ.</p><p>ಕುಂಭ ಮೇಳದ ಭೇಟಿ ವೇಳೆ ಅಂಬಾನಿ ಕುಟುಂಬ ಪರಮತೀರ್ಥ ತ್ರಿವೇಣಿ ಪುಷ್ಪ ಆಶ್ರಮದಲ್ಲಿ ನಡೆದ ಯಜ್ಞದಲ್ಲಿ ಪಾಲ್ಗೊಂಡಿತ್ತು.</p><p>ಈ ಕುರಿತು ಆಶ್ರಮ ಹೇಳಿಕೆ ಬಿಡುಗಡೆ ಮಾಡಿದ್ದು, ಮುಕೇಶ್ ಅಂಬಾನಿ, ಅವರ ತಾಯಿ ಕೊಕಿಲಾ ಬೆನ್ ಅಂಬಾನಿ, ಶ್ಲೋಕ ಅಂಬಾನಿ, ಅನಂತ ಅಂಬಾನಿ ದಂಪತಿ ಆಶ್ರಮಕ್ಕೆ ಭೇಟಿ ನೀಡಿದ್ದರು. ಸ್ವಾಮಿ ಚಿದಾನಂದ ಸರಸ್ವತಿ ಅವರ ನೇತೃತ್ವದಲ್ಲಿ ನಡೆದ ಯಜ್ಞದಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಿದೆ.</p><p>ಇದೇ ವೇಳೆ, ಸ್ವಚ್ಛತಾ ಕೆಲಸ ಮಾಡುವವರಿಗೆ ಮತ್ತು ದೋಣಿ ನಡೆಸುವವರಿಗೆ ಅಂಗವಸ್ತ್ರ, ಸಿಹಿ ತಿಂಡಿ, ಹಣ್ಣು, ಸ್ವಚ್ಛತಾ ಕಿಟ್ ಸೇರಿ ಹಲವು ಉಡುಗೊರೆಗಳನ್ನು ನೀಡಿದ್ದಾರೆ.</p><p>ಆಶ್ರಮದಲ್ಲಿ ಜಗತ್ತಿನ ಶಾಂತಿ ಮತ್ತು ಒಳಿತಿಗಾಗಿ ನಡೆದ ವಿಶ್ವ ಶಾಂತಿ ಯಜ್ಞದಲ್ಲಿ ಮುಕೇಶ್ ಅವರ ಕುಟುಂಬ ಪಾಲ್ಗೊಂಡಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>