<p><strong>ಲಖನೌ:</strong> ಉತ್ತರ ಪ್ರದೇಶದಲ್ಲಿ ಅನರ್ಹಗೊಂಡ ಶಾಸಕರ ಪಟ್ಟಿಗೆ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಮವೂ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿ ಅವರು ಸೇರ್ಪಡೆಯಾಗಿದ್ದಾರೆ.</p>.<p>ದ್ವೇಷ ಭಾಷಣ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾದ ಕಾರಣ ಭೂಗತ ಪಾತಕಿ, ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅವರನ್ನು ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆಯ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.</p>.<p>2022ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅಬ್ಬಾಸ್ ಅನ್ಸಾರಿ ಅವರು ಮೊದಲ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದರು.</p>.<p>ಎಸ್ಬಿಎಸ್ಪಿ ಪಕ್ಷವು ಸದ್ಯ ಆಡಳಿತಾರೂಢ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. </p>.<p><em><strong>ಉತ್ತರ ಪ್ರದೇಶ: 18ನೇ ವಿಧಾನಸಭೆಯಲ್ಲಿ ಅನರ್ಹಗೊಂಡ ಶಾಸಕರು </strong></em></p>.<ul><li><p>ಆಜಂ ಖಾನ್ (ಸಮಾಜವಾದಿ ಪಕ್ಷ </p></li><li><p>ಅಬ್ದುಲ್ಲಾ ಆಜಂ ಖಾನ್ (ಸಮಾಜವಾದಿ ಪಕ್ಷ) </p></li><li><p>ಹಾಜಿ ಇರ್ಫಾನ್ ಸೋಲಂಕಿ (ಸಮಾಜವಾದಿ ಪಕ್ಷ) </p></li><li><p>ವಿಕ್ರಮ್ ಸಿಂಗ್ (ಸಮಾಜವಾದಿ ಪಕ್ಷ) </p></li><li><p>ರಾಮ್ದುಲಾರ್ (ಬಿಜೆಪಿ)</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಉತ್ತರ ಪ್ರದೇಶದಲ್ಲಿ ಅನರ್ಹಗೊಂಡ ಶಾಸಕರ ಪಟ್ಟಿಗೆ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (ಎಸ್ಬಿಎಸ್ಪಿ) ಮವೂ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿ ಅವರು ಸೇರ್ಪಡೆಯಾಗಿದ್ದಾರೆ.</p>.<p>ದ್ವೇಷ ಭಾಷಣ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾದ ಕಾರಣ ಭೂಗತ ಪಾತಕಿ, ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅವರನ್ನು ಉತ್ತರ ಪ್ರದೇಶ ವಿಧಾನಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆಯ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.</p>.<p>2022ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಅಬ್ಬಾಸ್ ಅನ್ಸಾರಿ ಅವರು ಮೊದಲ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದರು.</p>.<p>ಎಸ್ಬಿಎಸ್ಪಿ ಪಕ್ಷವು ಸದ್ಯ ಆಡಳಿತಾರೂಢ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. </p>.<p><em><strong>ಉತ್ತರ ಪ್ರದೇಶ: 18ನೇ ವಿಧಾನಸಭೆಯಲ್ಲಿ ಅನರ್ಹಗೊಂಡ ಶಾಸಕರು </strong></em></p>.<ul><li><p>ಆಜಂ ಖಾನ್ (ಸಮಾಜವಾದಿ ಪಕ್ಷ </p></li><li><p>ಅಬ್ದುಲ್ಲಾ ಆಜಂ ಖಾನ್ (ಸಮಾಜವಾದಿ ಪಕ್ಷ) </p></li><li><p>ಹಾಜಿ ಇರ್ಫಾನ್ ಸೋಲಂಕಿ (ಸಮಾಜವಾದಿ ಪಕ್ಷ) </p></li><li><p>ವಿಕ್ರಮ್ ಸಿಂಗ್ (ಸಮಾಜವಾದಿ ಪಕ್ಷ) </p></li><li><p>ರಾಮ್ದುಲಾರ್ (ಬಿಜೆಪಿ)</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>