<p><strong>ಮುಂಬೈ: </strong>ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೋವಿಡ್-19 ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಹೋರಾಟ ನಡೆಸುತ್ತಲೇ ಇದ್ದು, ಅನೇಕ ಮುಂಬೈಯಿಗರು ಸಂಕಷ್ಟದ ಪರಿಸ್ಥಿತಿಯಲ್ಲಿ ಇತರರಿಗೆ ಸಹಾಯ ಮಾಡಲು ಮುಂದಾಗುತ್ತಿದ್ದಾರೆ.</p>.<p>ನಗರ ಮೂಲದಬಿಲ್ಡರ್ ಒಬ್ಬರು ನೂತನವಾಗಿ ನಿರ್ಮಾಣವಾಗಿರುವ 19 ಅಂತಸ್ತಿನ ಕಟ್ಟಡವನ್ನೇ ಕೋವಿಡ್-19 ಆಸ್ಪತ್ರೆಯನ್ನಾಗಿ ಮಾಡಿಕೊಳ್ಳಲು ಬಿಟ್ಟುಕೊಟ್ಟಿದ್ದಾರೆ. ಕೋವಿಡ್-19 ರೋಗಿಗಳಿಗಾಗಿ ಆಸ್ಪತ್ರೆಯನ್ನಾಗಿ ಮಾಡಿಕೊಳ್ಳಲು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ಗೆ (ಬಿಎಂಸಿ) ಕಟ್ಟಡವನ್ನು ಹಸ್ತಾಂತರಿಸಿದ್ದಾರೆ.</p>.<p>ಶೀಜಿ ಶರಣ್ ಡೆವಲಪರ್ಸ್ನ ಮೆಹುಲ್ ಸಂಘ್ವಿ ಮಾತನಾಡಿ, 'ಬಾಡಿಗೆದಾರರೊಂದಿಗೆ ಚರ್ಚಿಸಿದ ನಂತರ ನಾವು ಇದನ್ನು ಸ್ವ ಇಚ್ಛೆಯಿಂದ ನೀಡಲು ನಿರ್ಧರಿಸಿದ್ದೇವೆ. ಈ ಕಟ್ಟಡವನ್ನು ಕೋವಿಡ್-19 ರೋಗಿಗಳಿಗೆ ಕ್ವಾರಂಟೈನ್ ಕೇಂದ್ರಗಳಾಗಿ ಬಳಸಲಾಗುತ್ತಿದೆ' ಎಂದು ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/telangana-congress-senior-leader-v-hanumantha-rao-tests-positive-for-coronavirus-738418.html" itemprop="url">ತೆಲಂಗಾಣದ ಕಾಂಗ್ರೆಸ್ ಹಿರಿಯ ನಾಯಕ ವಿ. ಹನುಮಂತ ರಾವ್ ಅವರಿಗೆ ಕೋವಿಡ್-19 ದೃಢ </a></p>.<p>ಮಲಾಡ್ನ ಎಸ್ವಿ ರಸ್ತೆಯಲ್ಲಿರುವ ಈ ಕಟ್ಟಡದಲ್ಲಿ 130 ಫ್ಲ್ಯಾಟ್ಗಳಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ ಉದ್ಯೋಗ ಪ್ರಮಾಣಪತ್ರವನ್ನು ಪಡೆದಿದೆ. ವಾಸ್ತವವಾಗಿ ಈ ಕಟ್ಟಡವು ಫ್ಲಾಟ್ ಮಾಲೀಕರಿಗೆ ಹಸ್ತಾಂತರಿಸಲು ಸಿದ್ಧವಾಗಿತ್ತು.</p>.<p>ಇದುವರೆಗೂ 300 ರೋಗಿಗಳನ್ನು ಈ ಕಟ್ಟಡಕ್ಕೆ ವರ್ಗಾಯಿಸಲಾಗಿದ್ದು,ಸದ್ಯ ಕಟ್ಟಡದ ಆವರಣದಲ್ಲಿಯೇ ಸೋಂಕಿತರ ಚಿಕಿತ್ಸೆ ಮುಂದುವರೆದಿದೆ. ಈ ನಡೆಯ ಹಿಂದೆ ಮಲಾಡ್ನ ಸಂಸದ ಗೋಪಾಲ್ ಶೆಟ್ಟಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.</p>.<p>ಉತ್ತರ ಮುಂಬೈ ಶಾಸಕರು ಮಾತನಾಡಿ, ನಾನು ಮೆಹುಲ್ ಸಂಘ್ವಿ ಅವರೊಂದಿಗೆ ಸಂಪರ್ಕದಲ್ಲಿದ್ದೆ ಮತ್ತು ಮಲಾಡ್ನಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಕಟ್ಟಡವನ್ನು ಕೋವಿಡ್-19 ರೋಗಿಗಳಿಗೆ ಒದಗಿಸುವಂತೆ ಮನವರಿಕೆ ಮಾಡಿಕೊಟ್ಟಿದ್ದೆ. ಈ ಸಂಕಷ್ಟದ ಸಮಯದಲ್ಲಿ ನೆರವಾಗಲು ಮೆಹುಲ್ ಸಂಘ್ವಿಯಂತಹ ಜನರು ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟಿರುವುದು ನಮಗೆ ಸಂತೋಷವಾಗಿದೆ. ಇದರಿಂದಾಗಿ ಇತರರು ಕೂಡ ಮುಂದೆ ಸಾಧ್ಯವಾದಷ್ಟು ಜೀವಗಳನ್ನು ಉಳಿಸಲು ನಮಗೆ ಸಹಾಯ ಮಾಡುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.</p>.<p>ಇನ್ನು ಶನಿವಾರವಷ್ಟೇ ಮಹಾರಾಷ್ಟ್ರದಲ್ಲಿ ಒಂದೇ ದಿನ 3,874 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ಮತ್ತು 160 ಜನರು ಮೃತಪಟ್ಟಿದ್ದರೆ, ಒಟ್ಟಾರೆ ಸೋಂಕಿತರ ಸಂಖ್ಯೆಯು 1,28,205ಕ್ಕೆ ಏರಿಕೆಯಾಗಿದೆ. ಈವರೆಗೂ ರಾಜ್ಯದಲ್ಲಿ 5,984 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಈ ಪೈಕಿ ಮುಂಬೈನಲ್ಲೇ 136 ಜನರು ಮೃತಪಟ್ಟಿದ್ದು, 1,197 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆಯು 65,265ಕ್ಕೆ ಏರಿಕೆಯಾಗಿದೆ. 3,559 ಜನರು ಇದುವರೆಗೂ ಮೃತಪಟ್ಟಿರುವುದಾಗಿ ಮಹಾನಗರ ಪಾಲಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕೋವಿಡ್-19 ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಹೋರಾಟ ನಡೆಸುತ್ತಲೇ ಇದ್ದು, ಅನೇಕ ಮುಂಬೈಯಿಗರು ಸಂಕಷ್ಟದ ಪರಿಸ್ಥಿತಿಯಲ್ಲಿ ಇತರರಿಗೆ ಸಹಾಯ ಮಾಡಲು ಮುಂದಾಗುತ್ತಿದ್ದಾರೆ.</p>.<p>ನಗರ ಮೂಲದಬಿಲ್ಡರ್ ಒಬ್ಬರು ನೂತನವಾಗಿ ನಿರ್ಮಾಣವಾಗಿರುವ 19 ಅಂತಸ್ತಿನ ಕಟ್ಟಡವನ್ನೇ ಕೋವಿಡ್-19 ಆಸ್ಪತ್ರೆಯನ್ನಾಗಿ ಮಾಡಿಕೊಳ್ಳಲು ಬಿಟ್ಟುಕೊಟ್ಟಿದ್ದಾರೆ. ಕೋವಿಡ್-19 ರೋಗಿಗಳಿಗಾಗಿ ಆಸ್ಪತ್ರೆಯನ್ನಾಗಿ ಮಾಡಿಕೊಳ್ಳಲು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ಗೆ (ಬಿಎಂಸಿ) ಕಟ್ಟಡವನ್ನು ಹಸ್ತಾಂತರಿಸಿದ್ದಾರೆ.</p>.<p>ಶೀಜಿ ಶರಣ್ ಡೆವಲಪರ್ಸ್ನ ಮೆಹುಲ್ ಸಂಘ್ವಿ ಮಾತನಾಡಿ, 'ಬಾಡಿಗೆದಾರರೊಂದಿಗೆ ಚರ್ಚಿಸಿದ ನಂತರ ನಾವು ಇದನ್ನು ಸ್ವ ಇಚ್ಛೆಯಿಂದ ನೀಡಲು ನಿರ್ಧರಿಸಿದ್ದೇವೆ. ಈ ಕಟ್ಟಡವನ್ನು ಕೋವಿಡ್-19 ರೋಗಿಗಳಿಗೆ ಕ್ವಾರಂಟೈನ್ ಕೇಂದ್ರಗಳಾಗಿ ಬಳಸಲಾಗುತ್ತಿದೆ' ಎಂದು ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/telangana-congress-senior-leader-v-hanumantha-rao-tests-positive-for-coronavirus-738418.html" itemprop="url">ತೆಲಂಗಾಣದ ಕಾಂಗ್ರೆಸ್ ಹಿರಿಯ ನಾಯಕ ವಿ. ಹನುಮಂತ ರಾವ್ ಅವರಿಗೆ ಕೋವಿಡ್-19 ದೃಢ </a></p>.<p>ಮಲಾಡ್ನ ಎಸ್ವಿ ರಸ್ತೆಯಲ್ಲಿರುವ ಈ ಕಟ್ಟಡದಲ್ಲಿ 130 ಫ್ಲ್ಯಾಟ್ಗಳಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದಿಂದ ಉದ್ಯೋಗ ಪ್ರಮಾಣಪತ್ರವನ್ನು ಪಡೆದಿದೆ. ವಾಸ್ತವವಾಗಿ ಈ ಕಟ್ಟಡವು ಫ್ಲಾಟ್ ಮಾಲೀಕರಿಗೆ ಹಸ್ತಾಂತರಿಸಲು ಸಿದ್ಧವಾಗಿತ್ತು.</p>.<p>ಇದುವರೆಗೂ 300 ರೋಗಿಗಳನ್ನು ಈ ಕಟ್ಟಡಕ್ಕೆ ವರ್ಗಾಯಿಸಲಾಗಿದ್ದು,ಸದ್ಯ ಕಟ್ಟಡದ ಆವರಣದಲ್ಲಿಯೇ ಸೋಂಕಿತರ ಚಿಕಿತ್ಸೆ ಮುಂದುವರೆದಿದೆ. ಈ ನಡೆಯ ಹಿಂದೆ ಮಲಾಡ್ನ ಸಂಸದ ಗೋಪಾಲ್ ಶೆಟ್ಟಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.</p>.<p>ಉತ್ತರ ಮುಂಬೈ ಶಾಸಕರು ಮಾತನಾಡಿ, ನಾನು ಮೆಹುಲ್ ಸಂಘ್ವಿ ಅವರೊಂದಿಗೆ ಸಂಪರ್ಕದಲ್ಲಿದ್ದೆ ಮತ್ತು ಮಲಾಡ್ನಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಕಟ್ಟಡವನ್ನು ಕೋವಿಡ್-19 ರೋಗಿಗಳಿಗೆ ಒದಗಿಸುವಂತೆ ಮನವರಿಕೆ ಮಾಡಿಕೊಟ್ಟಿದ್ದೆ. ಈ ಸಂಕಷ್ಟದ ಸಮಯದಲ್ಲಿ ನೆರವಾಗಲು ಮೆಹುಲ್ ಸಂಘ್ವಿಯಂತಹ ಜನರು ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗಿಟ್ಟಿರುವುದು ನಮಗೆ ಸಂತೋಷವಾಗಿದೆ. ಇದರಿಂದಾಗಿ ಇತರರು ಕೂಡ ಮುಂದೆ ಸಾಧ್ಯವಾದಷ್ಟು ಜೀವಗಳನ್ನು ಉಳಿಸಲು ನಮಗೆ ಸಹಾಯ ಮಾಡುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ.</p>.<p>ಇನ್ನು ಶನಿವಾರವಷ್ಟೇ ಮಹಾರಾಷ್ಟ್ರದಲ್ಲಿ ಒಂದೇ ದಿನ 3,874 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ಮತ್ತು 160 ಜನರು ಮೃತಪಟ್ಟಿದ್ದರೆ, ಒಟ್ಟಾರೆ ಸೋಂಕಿತರ ಸಂಖ್ಯೆಯು 1,28,205ಕ್ಕೆ ಏರಿಕೆಯಾಗಿದೆ. ಈವರೆಗೂ ರಾಜ್ಯದಲ್ಲಿ 5,984 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಈ ಪೈಕಿ ಮುಂಬೈನಲ್ಲೇ 136 ಜನರು ಮೃತಪಟ್ಟಿದ್ದು, 1,197 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆಯು 65,265ಕ್ಕೆ ಏರಿಕೆಯಾಗಿದೆ. 3,559 ಜನರು ಇದುವರೆಗೂ ಮೃತಪಟ್ಟಿರುವುದಾಗಿ ಮಹಾನಗರ ಪಾಲಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>