<p><strong>ಮಹಾರಾಷ್ಟ್ರ:</strong>ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರ್ವಜನಿಕ ಸಾರಿಗೆ ಸಂಸ್ಥೆ (ಬೆಸ್ಟ್) ಸಿಬ್ಬಂದಿ ನಡೆಸುತ್ತಿರುವ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ.</p>.<p>ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಅಂಡರ್ಟೇಕಿಂಗ್ (ಬಿಇಎಸ್ಟಿ) ಸಂಸ್ಥೆಯಲ್ಲಿ 32 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಥೆಯ ಮುಂಗಡಪತ್ರವನ್ನು ಬಿಎಂಸಿ (ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್)ನೊಂದಿಗೆ ವಿಲೀನಗೊಳಿಸಬೇಕು, ವೇತನ ಹೆಚ್ಚಳ ಸೇರಿದಂತೆ ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸುತ್ತಿದ್ದಾರೆ.</p>.<p>ಇದರಹಿನ್ನೆಲೆ3200 ಬಸ್ಗಳು ಸೋಮವಾರವೂ ರಸ್ತೆಗಿಳಿದಿಲ್ಲ. ಇದರಿಂದ ಸಾರ್ವಜನಿಕರು ತೊಂದರೆಗೆ ಸಿಲುಕಿದ್ದಾರೆ.</p>.<p>ಸಂಸ್ಥೆಯಲ್ಲಿ 2,610 ಡ್ರೈವರ್ಗಳು ಹಾಗೂ 2,764 ಕಂಡಕ್ಟರ್ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಭಾನುವಾರ ಕೇವಲ ನಾಲ್ವರು ಡ್ರೈವರ್ಗಳು ಮಾತ್ರ ಕೆಲಸಕ್ಕೆ ಹಾಜರಾಗಿದ್ದರು. ಆದರೆ ಮುಷ್ಕರ ಹಿನ್ನಲೆ ಒಂದು ಬಸ್ ಕೂಡ ರಸ್ತೆಗಿಳಿಯಲಿಲ್ಲ.</p>.<p>ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಾಗಿದ್ದ ಬೆಸ್ಟ್ ಆಡಳಿತ ಮಂಡಳಿ, ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಕೋರ್ಟ್, ಮುಷ್ಕರವನ್ನು ನಿರ್ಬಂಧಿಸಿತ್ತು. ಜೊತೆಗೆ, ಒಕ್ಕೂಟದ ಕಾರ್ಯಕರ್ತರೊಂದಿಗೆ ಸಭೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.</p>.<p>ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆ ಆಯುಕ್ತ, ‘ಬೆಸ್ಟ್’ನ ಪ್ರಧಾನ ವ್ಯವಸ್ಥಾಪಕರು, ಒಕ್ಕೂಟದ ಕಾರ್ಯಕರ್ತರು ಹಾಗೂ ನಗರ ಅಭಿವೃದ್ಧಿ ಕಾರ್ಯದರ್ಶಿಗಳ ನಡುವೆ ಶನಿವಾರ ನಡೆದ ಸಂಧಾನ ಸಭೆ ವಿಫಲವಾಗಿತ್ತು.</p>.<p>ನ್ಯಾಯಾಲಯದ ಆದೇಶವನ್ನು ಲೆಕ್ಕಿಸದ ಸಿಬ್ಬಂದಿ ಮುಷ್ಕರವನ್ನು ಮುಂದುವರಿಸಿದ್ದಾರೆ. ಇದರ ಹಿನ್ನೆಲೆ ಖಾಸಗಿ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ.</p>.<p>ಏತನ್ಮಧ್ಯೆ, ‘ಮುಷ್ಕರಕ್ಕೆ ಮಹಾನಗರ ಪಾಲಿಕೆ(ಬಿಎಂಸಿ)ಯೇ ಪ್ರಮುಖ ಕಾರಣ’ ಎಂದು ಸಾರ್ವಜನಿಕ ಸಾರಿಗೆ ಹಾಗೂ ನಾಗರಿಕ ವೇದಿಕೆ ಅಮಿಚಿ ಮುಂಬೈನ ಸಂಚಾಲಕ ವಿದ್ಯಾಧರ್ ಡಾಟೆ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾರಾಷ್ಟ್ರ:</strong>ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರ್ವಜನಿಕ ಸಾರಿಗೆ ಸಂಸ್ಥೆ (ಬೆಸ್ಟ್) ಸಿಬ್ಬಂದಿ ನಡೆಸುತ್ತಿರುವ ಮುಷ್ಕರ ಏಳನೇ ದಿನಕ್ಕೆ ಕಾಲಿಟ್ಟಿದೆ.</p>.<p>ಬೃಹನ್ಮುಂಬೈ ಎಲೆಕ್ಟ್ರಿಕ್ ಸಪ್ಲೈ ಮತ್ತು ಟ್ರಾನ್ಸ್ಪೋರ್ಟ್ ಅಂಡರ್ಟೇಕಿಂಗ್ (ಬಿಇಎಸ್ಟಿ) ಸಂಸ್ಥೆಯಲ್ಲಿ 32 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯನಿರ್ವಹಿಸುತ್ತಿದ್ದು, ಸಂಸ್ಥೆಯ ಮುಂಗಡಪತ್ರವನ್ನು ಬಿಎಂಸಿ (ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್)ನೊಂದಿಗೆ ವಿಲೀನಗೊಳಿಸಬೇಕು, ವೇತನ ಹೆಚ್ಚಳ ಸೇರಿದಂತೆ ಇತರೆ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸುತ್ತಿದ್ದಾರೆ.</p>.<p>ಇದರಹಿನ್ನೆಲೆ3200 ಬಸ್ಗಳು ಸೋಮವಾರವೂ ರಸ್ತೆಗಿಳಿದಿಲ್ಲ. ಇದರಿಂದ ಸಾರ್ವಜನಿಕರು ತೊಂದರೆಗೆ ಸಿಲುಕಿದ್ದಾರೆ.</p>.<p>ಸಂಸ್ಥೆಯಲ್ಲಿ 2,610 ಡ್ರೈವರ್ಗಳು ಹಾಗೂ 2,764 ಕಂಡಕ್ಟರ್ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಭಾನುವಾರ ಕೇವಲ ನಾಲ್ವರು ಡ್ರೈವರ್ಗಳು ಮಾತ್ರ ಕೆಲಸಕ್ಕೆ ಹಾಜರಾಗಿದ್ದರು. ಆದರೆ ಮುಷ್ಕರ ಹಿನ್ನಲೆ ಒಂದು ಬಸ್ ಕೂಡ ರಸ್ತೆಗಿಳಿಯಲಿಲ್ಲ.</p>.<p>ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಾಗಿದ್ದ ಬೆಸ್ಟ್ ಆಡಳಿತ ಮಂಡಳಿ, ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ ನಡೆಸಿದ ಕೋರ್ಟ್, ಮುಷ್ಕರವನ್ನು ನಿರ್ಬಂಧಿಸಿತ್ತು. ಜೊತೆಗೆ, ಒಕ್ಕೂಟದ ಕಾರ್ಯಕರ್ತರೊಂದಿಗೆ ಸಭೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.</p>.<p>ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆ ಆಯುಕ್ತ, ‘ಬೆಸ್ಟ್’ನ ಪ್ರಧಾನ ವ್ಯವಸ್ಥಾಪಕರು, ಒಕ್ಕೂಟದ ಕಾರ್ಯಕರ್ತರು ಹಾಗೂ ನಗರ ಅಭಿವೃದ್ಧಿ ಕಾರ್ಯದರ್ಶಿಗಳ ನಡುವೆ ಶನಿವಾರ ನಡೆದ ಸಂಧಾನ ಸಭೆ ವಿಫಲವಾಗಿತ್ತು.</p>.<p>ನ್ಯಾಯಾಲಯದ ಆದೇಶವನ್ನು ಲೆಕ್ಕಿಸದ ಸಿಬ್ಬಂದಿ ಮುಷ್ಕರವನ್ನು ಮುಂದುವರಿಸಿದ್ದಾರೆ. ಇದರ ಹಿನ್ನೆಲೆ ಖಾಸಗಿ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದೆ.</p>.<p>ಏತನ್ಮಧ್ಯೆ, ‘ಮುಷ್ಕರಕ್ಕೆ ಮಹಾನಗರ ಪಾಲಿಕೆ(ಬಿಎಂಸಿ)ಯೇ ಪ್ರಮುಖ ಕಾರಣ’ ಎಂದು ಸಾರ್ವಜನಿಕ ಸಾರಿಗೆ ಹಾಗೂ ನಾಗರಿಕ ವೇದಿಕೆ ಅಮಿಚಿ ಮುಂಬೈನ ಸಂಚಾಲಕ ವಿದ್ಯಾಧರ್ ಡಾಟೆ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>