<p><strong>ಮುಂಬೈ:</strong> ಟ್ವಿಟರ್ನಲ್ಲಿ ಪೋಸ್ಟ್ ಪ್ರಕಟಿಸಿ, ಆತ್ಮಹತ್ಯೆಯ ಸೂಚನೆ ನೀಡಿದ್ದ ಕೇರಳದ ಡಿಪ್ಲೊಮಾ ವಿದ್ಯಾರ್ಥಿಯೊಬ್ಬನನ್ನು ಮುಂಬೈನ ದಾದರ್ ಹೋಟೆಲ್ನಲ್ಲಿ ಪೊಲೀಸರು ರಕ್ಷಿಸಿದ್ದಾರೆ.</p>.<p>ಖಿನ್ನತೆಗೊಳಗಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ತನ್ನ ಉದ್ದೇಶದ ಬಗ್ಗೆ ಟ್ವೀಟ್ ಮಾಡಿದ್ದಾನೆ ಎಂದು ಪತ್ರಕರ್ತರೊಬ್ಬರು ಮುಂಬೈ ಕೇಂದ್ರ ಸೈಬರ್ ಪೊಲೀಸ್ ಠಾಣೆಗೆ ವಾಟ್ಸಾಪ್ ಮೂಲಕ ಶನಿವಾರ ಬೆಳಿಗ್ಗೆ ಮಾಹಿತಿ ನೀಡಿದ್ದರು.</p>.<p>‘ಮಾಹಿತಿ ಬಂದ ನಂತರ, ನಾವು ಆ ವ್ಯಕ್ತಿಗಾಗಿ ಹುಡುಕಾಟ ಆರಂಭಿಸಿದೆವು. ಆತ ದಾದರ್ನಲ್ಲಿರುವ ಒಂದು ಐಷಾರಾಮಿ ಹೋಟೆಲ್ನಲ್ಲಿರುವುದಾಗಿ ಪತ್ತೆಯಾಯಿತು. ಇನ್ಸ್ಪೆಕ್ಟರ್ ಸಂಜಯ್ ಗೋವಿಲ್ಕರ್ ಮತ್ತು ಹೋಟೆಲ್ ಮ್ಯಾನೇಜರ್ ನೇತೃತ್ವದ ತಂಡ ಪರ್ಯಾಯ ಕೀಲಿಕೈ ಬಳಸಿ ಕೊಠಡಿ ಪ್ರವೇಶಿಸಿತ್ತು. ಖಿನ್ನತೆಗೊಳಗಾಗಿದ್ದ ವ್ಯಕ್ತಿಯು ಕೊಠಡಿಯಲ್ಲಿ ಚಾಕುವಿನೊಂದಿಗೆ ಪತ್ತೆಯಾಗಿದ್ದಾನೆ,’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಪ್ರೀತಿಸಿದ ಗೆಳತಿ ಮದುವೆಯಾಗದಿರಲು ನಿರ್ಧರಿಸಿದ ಕಾರಣ ವ್ಯಕ್ತಿ ಖಿನ್ನತೆಗೆ ಜಾರಿದ್ದ,‘ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಶುಕ್ರವಾರ ರಾತ್ರಿ ಹೋಟೆಲ್ಗೆ ಬಂದಿದ್ದ ಯುವಕ ಕೊಠಡಿ ಪಡೆದುಕೊಂಡಿದ್ದ. ಆತನನ್ನು ಆಪ್ತಸಮಾಲೋಚಕರ ಬಳಿಗೆ ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಟ್ವಿಟರ್ನಲ್ಲಿ ಪೋಸ್ಟ್ ಪ್ರಕಟಿಸಿ, ಆತ್ಮಹತ್ಯೆಯ ಸೂಚನೆ ನೀಡಿದ್ದ ಕೇರಳದ ಡಿಪ್ಲೊಮಾ ವಿದ್ಯಾರ್ಥಿಯೊಬ್ಬನನ್ನು ಮುಂಬೈನ ದಾದರ್ ಹೋಟೆಲ್ನಲ್ಲಿ ಪೊಲೀಸರು ರಕ್ಷಿಸಿದ್ದಾರೆ.</p>.<p>ಖಿನ್ನತೆಗೊಳಗಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವ ತನ್ನ ಉದ್ದೇಶದ ಬಗ್ಗೆ ಟ್ವೀಟ್ ಮಾಡಿದ್ದಾನೆ ಎಂದು ಪತ್ರಕರ್ತರೊಬ್ಬರು ಮುಂಬೈ ಕೇಂದ್ರ ಸೈಬರ್ ಪೊಲೀಸ್ ಠಾಣೆಗೆ ವಾಟ್ಸಾಪ್ ಮೂಲಕ ಶನಿವಾರ ಬೆಳಿಗ್ಗೆ ಮಾಹಿತಿ ನೀಡಿದ್ದರು.</p>.<p>‘ಮಾಹಿತಿ ಬಂದ ನಂತರ, ನಾವು ಆ ವ್ಯಕ್ತಿಗಾಗಿ ಹುಡುಕಾಟ ಆರಂಭಿಸಿದೆವು. ಆತ ದಾದರ್ನಲ್ಲಿರುವ ಒಂದು ಐಷಾರಾಮಿ ಹೋಟೆಲ್ನಲ್ಲಿರುವುದಾಗಿ ಪತ್ತೆಯಾಯಿತು. ಇನ್ಸ್ಪೆಕ್ಟರ್ ಸಂಜಯ್ ಗೋವಿಲ್ಕರ್ ಮತ್ತು ಹೋಟೆಲ್ ಮ್ಯಾನೇಜರ್ ನೇತೃತ್ವದ ತಂಡ ಪರ್ಯಾಯ ಕೀಲಿಕೈ ಬಳಸಿ ಕೊಠಡಿ ಪ್ರವೇಶಿಸಿತ್ತು. ಖಿನ್ನತೆಗೊಳಗಾಗಿದ್ದ ವ್ಯಕ್ತಿಯು ಕೊಠಡಿಯಲ್ಲಿ ಚಾಕುವಿನೊಂದಿಗೆ ಪತ್ತೆಯಾಗಿದ್ದಾನೆ,’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಪ್ರೀತಿಸಿದ ಗೆಳತಿ ಮದುವೆಯಾಗದಿರಲು ನಿರ್ಧರಿಸಿದ ಕಾರಣ ವ್ಯಕ್ತಿ ಖಿನ್ನತೆಗೆ ಜಾರಿದ್ದ,‘ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>ಶುಕ್ರವಾರ ರಾತ್ರಿ ಹೋಟೆಲ್ಗೆ ಬಂದಿದ್ದ ಯುವಕ ಕೊಠಡಿ ಪಡೆದುಕೊಂಡಿದ್ದ. ಆತನನ್ನು ಆಪ್ತಸಮಾಲೋಚಕರ ಬಳಿಗೆ ಕಳುಹಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>