ಗುಜರಾತ್ನ ವಡೋದರ ಮೂಲದ ವ್ಯಕ್ತಿ ಬಂಧನಕ್ಕೊಳಗಾದವ.
ಆರ್ಬಿಐ ಕಚೇರಿ, ಎಚ್ಡಿಎಫ್ಸಿ ಹಾಗೂ ಐಸಿಸಿಐ ಬ್ಯಾಂಕ್ ಸೇರಿದಂತೆ ಮುಂಬೈ 11 ಕಡೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಆರ್ಬಿಐಗೆ ಆರೋಪಿ ಇ–ಮೇಲ್ ಮಾಡಿದ್ದ. ಅಲ್ಲದೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು ಎನ್ನುವ ಆಗ್ರಹವೂ ಅದರಲ್ಲಿ ಇತ್ತು.
ಇ–ಮೇಲ್ನಲ್ಲಿದ್ದ 11 ತಾಣಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಅಲ್ಲಿ ಬಾಂಬ್ ಅಥವಾ ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ.