ಹೋರ್ಡಿಂಗ್ ಬಿದ್ದಿರುವ ಪ್ರಕರಣ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ಮುಂಬೈ ಅಪರಾಧ ವಿಭಾಗ ರಚಿಸಿದೆ. ಆರು ಅಧಿಕಾರಿಗಳನ್ನು ಒಳಗೊಂಡಿರುವ ಎಸ್ಐಟಿ ತಂಡವು ಈ ಘಟನೆಯ ಕುರಿತು ತನಿಖೆ ನಡೆಸುತ್ತಿದೆ.
ಹೋರ್ಡಿಂಗ್ ಹಾಕಿದ್ದ ಕಂಪನಿಯ ಮಾಲೀಕ ಭವೇಶ್ ಭಿಡೆ ಅವರನ್ನು ಮುಂಬೈ ಪೊಲೀಸರು ಕಳೆದ ವಾರ ರಾಜಸ್ಥಾನದ ಉದಯಪುರದಿಂದ ಬಂಧಿಸಿ ಮುಂಬೈಗೆ ಕರೆತಂದಿದ್ದರು.
ಭವೇಶ್ ಭಿಂಡೆ ಅವರು ಹೋರ್ಡಿಂಗ್ ಗುತ್ತಿಗೆಯನ್ನು ಹೇಗೆ ಪಡೆದರು ಮತ್ತು ಇದರಿಂದ ಎಷ್ಟು ಹಣ ಪಡೆದರು ಎಂಬುದರ ಕುರಿತಾಗಿಯೂ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಮೇ 13ರಂದು ಮುಂಬೈಯಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದ್ದ ವೇಳೆ ಘಾಟ್ಕೋಪರ್ನಲ್ಲಿ ಅಕ್ರಮವಾಗಿ ಇರಿಸಲಾಗಿದ್ದ ಬೃಹತ್ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದಿತ್ತು.