ನವದೆಹಲಿ: ಮುಂಬೈನಿಂದ ಗುವಾಹಟಿಗೆ ತೆರಳುತ್ತಿದ್ದ ಇಂಡಿಗೊ ವಿಮಾನ ಶನಿವಾರ ಬೆಳಗ್ಗೆ ದಟ್ಟ ಮಂಜಿನಿಂದಾಗಿ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ದಟ್ಟವಾಗಿ ಮಂಜು ಮುಸುಕಿದ್ದರಿಂದ ಗುವಾಹಟಿ ನಿಲ್ದಾಣದಲ್ಲಿ ವಿಮಾನವನ್ನು ಇಳಿಸಲು ಸಾಧ್ಯವಾಗದ ಕಾರಣ ಢಾಕಾದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು ಎಂದು ಮಹಾರಾಷ್ಟ್ರ ಯುವ ಕಾಂಗ್ರೆಸ್ನ ಸೂರಜ್ ಸಿಂಗ್ ಠಾಕೂರ್ ಹೇಳಿದ್ದಾರೆ.
ಈ ಬಗ್ಗೆ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
I took @IndiGo6E flight 6E 5319 from Mumbai to Guwahati. But due to dense fog, the flight couldn't land in Guwahati. Instead, it landed in Dhaka. Now all the passengers are in Bangladesh without their passports, we are inside the plane.✈️
— Suraj Singh Thakur (@SurajThakurINC) January 13, 2024
ನಾನು ಮುಂಬೈನಿಂದ ಗುವಾಹಟಿಗೆ ಇಂಡಿಗೊ6E–5319 ವಿಮಾನದಲ್ಲಿ ತೆರಳುತ್ತಿದ್ದೆ. ದಟ್ಟ ಮಂಜಿನ ಕಾರಣದಿಂದ ಈ ವಿಮಾನ ಗುವಾಹಟಿಯಲ್ಲಿ ಇಳಿಯಲು ಸಾಧ್ಯವಾಗಲಿಲ್ಲ. ಬದಲಾಗಿ, ಅದು ಢಾಕಾದಲ್ಲಿ ಇಳಿಯಿತು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ತಮ್ಮ ಪಾಸ್ಪೋರ್ಟ್ ಇಲ್ಲದೆ ಅಂತರರಾಷ್ಟ್ರೀಯ ಗಡಿ ದಾಟಿದ್ದಾರೆ ಎಂದು ಬರೆದುಕಂಡಿದ್ದಾರೆ.
ನಾವು ಇನ್ನೂ ವಿಮಾನದೊಳಗೆ ಇದ್ದೇವೆ. ಸುಮಾರು 9 ಗಂಟೆಗಳ ಕಾಲ ವಿಮಾನದೊಳಗೆ ಸಿಲುಕಿಕೊಂಡಿದ್ದೇವೆ ಎಂದು ಅವರು ಪೋಸ್ಟ್ ಮಾಡಿದ್ದಾರೆ.
ನಾನು ಭಾರತ್ ಜೋಡೊ ನ್ಯಾಯ್ ಯಾತ್ರೆಗಾಗಿ ಮಣಿಪುರದ ಇಂಫಾಲಕ್ಕೆ ಹೊರಟ್ಟಿದ್ದೆ. ಮೊದಲು ಗುವಾಹಟಿ ತಲುಪಿದ ಬಳಿಕ ಇಂಫಾಲಗೆ ಹೋಗುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ. ಪ್ರತಿಕೂಲ ಹವಾಮಾನದಿಂದಾಗಿ ವಿಮಾನವನ್ನು ಢಾಕದಲ್ಲಿ ಇಳಿಸಬೇಕಾಯಿತು. ಪ್ರಯಾಣಿಕರಿಗೆ ನಮ್ಮ ತಂಡ ಎಲ್ಲಾ ರೀತಿಯ ಸಹಾಯವನ್ನು ಮಾಡುತ್ತಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆ ಟ್ವೀಟ್ ಮಾಡಿದೆ.
Hi, we truly regret the inconvenience caused to you. The flight was diverted due to bad weather which is beyond our control too. Our team is working to assist the passengers to the best of their capabilities. We sincerely look forward to your understanding. ~Ravi
— IndiGo (@IndiGo6E) January 13, 2024
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.