ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Mumbai Hoarding Crash: ಭವೇಶ್ ಭಿಂಡೆ ಪೊಲೀಸ್ ಕಸ್ಟಡಿ ಮೇ 29ರವರೆಗೆ ವಿಸ್ತರಣೆ

17 ಜನ ಸಾವಿಗೀಡಾದ ಘಟನೆ
Published 26 ಮೇ 2024, 13:20 IST
Last Updated 26 ಮೇ 2024, 13:20 IST
ಅಕ್ಷರ ಗಾತ್ರ

ಮುಂಬೈ: ಮುಂಬೈನ ಛೇಡಾ ನಗರದ ಘಾಟ್ಕೋಪರ್‌ನಲ್ಲಿ ಜಾಹೀರಾತು ಫಲಕ ಕುಸಿದು 17 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಜಾಹೀರಾತು ಸಂಸ್ಥೆಯ ನಿರ್ದೇಶಕ ಭವೇಶ್‌ ಭಿಂಡೆ ಅವರ ಪೊಲೀಸ್‌ ಕಸ್ಟಡಿ ಅವಧಿಯನ್ನು ಮುಂಬೈ ನ್ಯಾಯಾಲಯ ಮೇ 29ರವರೆಗೆ ವಿಸ್ತರಿಸಿ ಭಾನುವಾರ ಆದೇಶಿಸಿದೆ. 

ಭಿಂಡೆ ಅವರ ಇಗೊ ಮಿಡಿಯಾ ಪ್ರೈವೆಟ್ ಲಿಮಿಟೆಡ್‌ ಸಂಸ್ಥೆಯ 120 ಅಡಿ ಅಗಲ ಮತ್ತು 120 ಅಡಿ ಎತ್ತರದ ಬೃಹತ್ ಜಾಹೀರಾತು ಫಲಕವು ಭಾರಿ ಧೂಳು ಸಹಿತ ಬಿರುಗಾಳಿ ಮಳೆಯಿಂದಾಗಿ ಮೇ 13ರಂದು ಪೆಟ್ರೋಲ್‌ ಪಂಪ್‌ ಮೇಲೆ ಕುಸಿದು ಬಿದ್ದಿತ್ತು. ಈ ವೇಳೆ ಅದರ ಅಡಿಯಲ್ಲಿ ಸಿಲುಕಿದ್ದ 17 ಜನರು ಸಾವಿಗೀಡಾಗಿದ್ದರು. 

ಘಟನೆ ಬಳಿಕ ಭಿಂಡೆ ಪರಾರಿಯಾಗಿದ್ದರು. ಪೊಲೀಸರು ಅವರ ಮೇಲೆ ಸೆಕ್ಷನ್‌ 304ರ ಅಡಿ ಪ್ರಕರಣ ದಾಖಲಿಸಿದ್ದರು. ಬಳಿಕ ಮೇ 16ರಂದು ರಾಜಸ್ಥಾನದಲ್ಲಿ ಉದಯಪುರದಲ್ಲಿ ಭಿಂಡೆ ಅವರನ್ನು ಬಂಧಿಸಿ ಕರೆತರಲಾಗಿತ್ತು. 

ನ್ಯಾಯಾಲಯವು ಮೇ 26ರವರೆಗೆ ಭಿಂಡೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ನಗರದಾದ್ಯಂತ ಸಂಸ್ಥೆಯು ಅಳವಡಿಸಿರುವ ಇತರ ಜಾಹೀರಾತು ಫಲಕಗಳ ಕುರಿತೂ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅವರ ಪೊಲೀಸ್‌ ಕಸ್ಟಡಿ ಅವಧಿಯನ್ನು ವಿಸ್ತರಿಸಲಾಗಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT