<p><strong>ನವದೆಹಲಿ</strong>: 2006ರಲ್ಲಿ ಮುಂಬೈ ಲೋಕಲ್ ರೈಲಿನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.</p><p>ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ ಮತ್ತು ಎನ್.ಕೋಟೀಶ್ವರ ಸಿಂಗ್ ಅವರನ್ನು ಒಳಗೊಂಡ ನ್ಯಾಯಪೀಠವು, ಪ್ರಕರಣದ ಎಲ್ಲ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.</p><p>ಹೈಕೋರ್ಟ್ ತೀರ್ಪನ್ನು ಪೂರ್ವ ನಿದರ್ಶನವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p><p>ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಅನಿಲ್ ಕಿಲೋರ್ ಮತ್ತು ಶ್ಯಾಮ್ ಚಂದಕ್ ನೇತೃತ್ವದ ನ್ಯಾಯಪೀಠವು, ‘ಆರೋಪಿಗಳೆಲ್ಲರೂ, ಅಪರಾಧ ಎಸಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂದು ತೀರ್ಮಾನಿಸಿ, ವಿಚಾರಣಾ ನ್ಯಾಯಾಲಯವು 12 ಮಂದಿಗೆವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿತ್ತು.</p><p>2006ರ ಜುಲೈ 11ರಂದು ಮುಂಬೈ ಸ್ಥಳೀಯ ರೈಲುಗಳಲ್ಲಿ ವಿವಿಧೆಡೆ ನಡೆದ ಬಾಂಬ್ ಸ್ಫೋಟಗಳಲ್ಲಿ 180ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2006ರಲ್ಲಿ ಮುಂಬೈ ಲೋಕಲ್ ರೈಲಿನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಎಲ್ಲ 12 ಆರೋಪಿಗಳನ್ನು ಖುಲಾಸೆಗೊಳಿಸಿ ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.</p><p>ನ್ಯಾಯಮೂರ್ತಿ ಎಂ.ಎಂ.ಸುಂದ್ರೇಶ್ ಮತ್ತು ಎನ್.ಕೋಟೀಶ್ವರ ಸಿಂಗ್ ಅವರನ್ನು ಒಳಗೊಂಡ ನ್ಯಾಯಪೀಠವು, ಪ್ರಕರಣದ ಎಲ್ಲ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದೆ. ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಪ್ರತಿವಾದಿಗಳಿಗೆ ಸೂಚಿಸಿದೆ.</p><p>ಹೈಕೋರ್ಟ್ ತೀರ್ಪನ್ನು ಪೂರ್ವ ನಿದರ್ಶನವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.</p><p>ಬಾಂಬೆ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಅನಿಲ್ ಕಿಲೋರ್ ಮತ್ತು ಶ್ಯಾಮ್ ಚಂದಕ್ ನೇತೃತ್ವದ ನ್ಯಾಯಪೀಠವು, ‘ಆರೋಪಿಗಳೆಲ್ಲರೂ, ಅಪರಾಧ ಎಸಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ’ ಎಂದು ತೀರ್ಮಾನಿಸಿ, ವಿಚಾರಣಾ ನ್ಯಾಯಾಲಯವು 12 ಮಂದಿಗೆವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸಿತ್ತು.</p><p>2006ರ ಜುಲೈ 11ರಂದು ಮುಂಬೈ ಸ್ಥಳೀಯ ರೈಲುಗಳಲ್ಲಿ ವಿವಿಧೆಡೆ ನಡೆದ ಬಾಂಬ್ ಸ್ಫೋಟಗಳಲ್ಲಿ 180ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>