<p><strong>ಮುಂಬೈ</strong>: 14 ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿ ‘ಪೀಟರ್ ಪ್ಯಾನ್ ಸಿಂಡ್ರೋಮ್’ನಿಂದ ಬಳಲುತ್ತಿರುವ ಕಾರಣ, ಮುಂಬೈ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.</p>.<p>ವಿಶೇಷ ನ್ಯಾಯಧೀಶ ಎಸ್.ಸಿ ಜಾದವ್, ಅವರು ₹ 25,000 ವೈಯಕ್ತಿಕ ಬಾಂಡ್ ಸೇರಿದಂತೆ ಇತರೆ ನಿಯಮಗಳಡಿಯಲ್ಲಿ 23 ವರ್ಷದ ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.</p>.<p>ಸಂತ್ರಸ್ತೆ ಮತ್ತು ಯುವಕ ಒಬ್ಬರಿಗೊಬ್ಬರು ಪರಿಚಿತರು. ಇಬ್ಬರ ನಡುವೆ ಪ್ರೀತಿಯೂ ಇತ್ತು. ಯುವಕನಿಗೆ ‘ಪೀಟರ್ ಪ್ಯಾನ್ ಸಿಂಡ್ರೋಮ್’ ಇದ್ದಿದ್ದರಿಂದ ಸಂತ್ರಸ್ತೆಯ ಕುಟುಂಬದವರು ಈತನನ್ನು ವಿರೋಧಿಸಿದ್ದರು. ಸಂತ್ರಸ್ತೆ ಸ್ವ ಇಚ್ಛೆಯಿಂದ ಯುವಕನೊಂದಿಗೆ ಸಂಬಂಧ ಹೊಂದಿದ್ದಳು ಎಂದು ಆರೋಪಿ ಪರ ವಕೀಲ ಸುನೀಲ್ ಪಾಂಡೆವಾದಿಸಿದರು.</p>.<p>ಇದಕ್ಕೆ ವಿರೋಧ ವ್ಯಕ್ತಪಡಿಸಿದ ವಿಶೇಷ ಸಾರ್ವಜನಿಕ ಅಭಿಯೋಜಕಿ ವೀನಾ ಶೆಲಾರ್ ಅವರು ,‘ಆರೋಪಿಯು ಈ ಕೃತ್ಯದಲ್ಲಿ ಭಾಗಿಯಾಗಿರುವುದಕ್ಕೆ ಸಾಕಷ್ಟು ದಾಖಲೆಗಳಿವೆ. ಒಂದು ವೇಳೆ ಆರೋಪಿಗೆ ಜಾಮೀನು ನೀಡಿದರೆ, ಆತ ಸಾಕ್ಷ್ಯಧಾರಗಳನ್ನು ಹಾಳುಮಾಡುವ ಸಾಧ್ಯತೆಗಳಿವೆ’ ಎಂದು ವಾದ ಮಾಡಿದರು.</p>.<p>ಬಾಲಕಿ ನೀಡಿದ್ದ ಹೇಳಿಕೆಯನ್ನು ಪರಿಶೀಲಿಸಿದರೆ, ಮೇಲ್ನೋಟಕ್ಕೆ ಬಾಲಕಿಯೇ ಸ್ವ ಇಚ್ಛೆಯಿಂದ ಮನೆ ಬಿಟ್ಟು, ಯುವಕನ ಬಳಿ ಹೋಗಿರುವುದು ಗೊತ್ತಾಗುತ್ತದೆ. ಬಾಲಕಿಗೆ ಏನು ನಡೆಯುತ್ತಿದೆ ಎಂಬ ವಿಷಯಗಳ ಬಗ್ಗೆ ಅರಿವಿತ್ತು ಎಂಬುದೂ ಗಮನಕ್ಕೆ ಬಂದಿದೆ ಎಂದು ನ್ಯಾಯಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: 14 ವರ್ಷದ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಆರೋಪಿ ‘ಪೀಟರ್ ಪ್ಯಾನ್ ಸಿಂಡ್ರೋಮ್’ನಿಂದ ಬಳಲುತ್ತಿರುವ ಕಾರಣ, ಮುಂಬೈ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.</p>.<p>ವಿಶೇಷ ನ್ಯಾಯಧೀಶ ಎಸ್.ಸಿ ಜಾದವ್, ಅವರು ₹ 25,000 ವೈಯಕ್ತಿಕ ಬಾಂಡ್ ಸೇರಿದಂತೆ ಇತರೆ ನಿಯಮಗಳಡಿಯಲ್ಲಿ 23 ವರ್ಷದ ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.</p>.<p>ಸಂತ್ರಸ್ತೆ ಮತ್ತು ಯುವಕ ಒಬ್ಬರಿಗೊಬ್ಬರು ಪರಿಚಿತರು. ಇಬ್ಬರ ನಡುವೆ ಪ್ರೀತಿಯೂ ಇತ್ತು. ಯುವಕನಿಗೆ ‘ಪೀಟರ್ ಪ್ಯಾನ್ ಸಿಂಡ್ರೋಮ್’ ಇದ್ದಿದ್ದರಿಂದ ಸಂತ್ರಸ್ತೆಯ ಕುಟುಂಬದವರು ಈತನನ್ನು ವಿರೋಧಿಸಿದ್ದರು. ಸಂತ್ರಸ್ತೆ ಸ್ವ ಇಚ್ಛೆಯಿಂದ ಯುವಕನೊಂದಿಗೆ ಸಂಬಂಧ ಹೊಂದಿದ್ದಳು ಎಂದು ಆರೋಪಿ ಪರ ವಕೀಲ ಸುನೀಲ್ ಪಾಂಡೆವಾದಿಸಿದರು.</p>.<p>ಇದಕ್ಕೆ ವಿರೋಧ ವ್ಯಕ್ತಪಡಿಸಿದ ವಿಶೇಷ ಸಾರ್ವಜನಿಕ ಅಭಿಯೋಜಕಿ ವೀನಾ ಶೆಲಾರ್ ಅವರು ,‘ಆರೋಪಿಯು ಈ ಕೃತ್ಯದಲ್ಲಿ ಭಾಗಿಯಾಗಿರುವುದಕ್ಕೆ ಸಾಕಷ್ಟು ದಾಖಲೆಗಳಿವೆ. ಒಂದು ವೇಳೆ ಆರೋಪಿಗೆ ಜಾಮೀನು ನೀಡಿದರೆ, ಆತ ಸಾಕ್ಷ್ಯಧಾರಗಳನ್ನು ಹಾಳುಮಾಡುವ ಸಾಧ್ಯತೆಗಳಿವೆ’ ಎಂದು ವಾದ ಮಾಡಿದರು.</p>.<p>ಬಾಲಕಿ ನೀಡಿದ್ದ ಹೇಳಿಕೆಯನ್ನು ಪರಿಶೀಲಿಸಿದರೆ, ಮೇಲ್ನೋಟಕ್ಕೆ ಬಾಲಕಿಯೇ ಸ್ವ ಇಚ್ಛೆಯಿಂದ ಮನೆ ಬಿಟ್ಟು, ಯುವಕನ ಬಳಿ ಹೋಗಿರುವುದು ಗೊತ್ತಾಗುತ್ತದೆ. ಬಾಲಕಿಗೆ ಏನು ನಡೆಯುತ್ತಿದೆ ಎಂಬ ವಿಷಯಗಳ ಬಗ್ಗೆ ಅರಿವಿತ್ತು ಎಂಬುದೂ ಗಮನಕ್ಕೆ ಬಂದಿದೆ ಎಂದು ನ್ಯಾಯಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>