<p class="title">ಮುಂಬೈ (ಪಿಟಿಐ): 25 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿಯು ಮುಂಬೈನಲ್ಲಿ ತನ್ನ ಮೇಯರ್ ನೇಮಿಸಲು ಮುಂದಾಗಿದೆ. ಪಕ್ಷದ ಕಾರ್ಪೊರೇಟರ್ ರಿತು ತಾವ್ಡೆ ಅವರು ಶನಿವಾರ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.</p>.<p class="title">ಮಹಾಯುತಿಯಲ್ಲಿ ಬಿಜೆಪಿಯ ಮಿತ್ರಪಕ್ಷವಾದ ಶಿವಸೇನಾ, ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್ಥಿಯನ್ನಾಗಿ ಸಂಜಯ್ ಘಾಡಿ ಹೆಸರನ್ನು ಘೋಷಿಸಿದೆ. </p>.<p class="title">ಸಚಿವ ಮಂಗಲ್ ಪ್ರಭಾತ್ ಲೋಧಾ, ಮುಂಬೈ ಬಿಜೆಪಿ ಘಟಕದ ಮುಖ್ಯಸ್ಥ ಅಮಿತ್ ಸತಮ್, ಶಿವಸೇನಾ ಮಾಜಿ ಸಂಸದ ರಾಹುಲ್ ಶೇವಾಲೆ ಮತ್ತು ಮಹಾಯುತಿಯ ಇತರ ನಾಯಕರ ಸಮ್ಮುಖದಲ್ಲಿ ತಾವ್ಡೆ ಮತ್ತು ಘಾಡಿ ಅವರು ಪುರಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.</p>.<p class="title">ಮೇಯರ್ ಸ್ಥಾನಕ್ಕೆ ಫೆಬ್ರವರಿ 11ರಂದು ಚುನಾವಣೆ ನಡೆಯಲಿದ್ದು, ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವೂ ಅದೇ ಆಗಿದೆ.</p>.<p class="title">1997ರಿಂದಲೂ ಸತತ 25 ವರ್ಷ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬೃಹನ್ ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಆಡಳಿತದ ಚುಕ್ಕಾಣಿ ಹಿಡಿದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title">ಮುಂಬೈ (ಪಿಟಿಐ): 25 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿಯು ಮುಂಬೈನಲ್ಲಿ ತನ್ನ ಮೇಯರ್ ನೇಮಿಸಲು ಮುಂದಾಗಿದೆ. ಪಕ್ಷದ ಕಾರ್ಪೊರೇಟರ್ ರಿತು ತಾವ್ಡೆ ಅವರು ಶನಿವಾರ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.</p>.<p class="title">ಮಹಾಯುತಿಯಲ್ಲಿ ಬಿಜೆಪಿಯ ಮಿತ್ರಪಕ್ಷವಾದ ಶಿವಸೇನಾ, ಉಪ ಮೇಯರ್ ಹುದ್ದೆಗೆ ತನ್ನ ಅಭ್ಯರ್ಥಿಯನ್ನಾಗಿ ಸಂಜಯ್ ಘಾಡಿ ಹೆಸರನ್ನು ಘೋಷಿಸಿದೆ. </p>.<p class="title">ಸಚಿವ ಮಂಗಲ್ ಪ್ರಭಾತ್ ಲೋಧಾ, ಮುಂಬೈ ಬಿಜೆಪಿ ಘಟಕದ ಮುಖ್ಯಸ್ಥ ಅಮಿತ್ ಸತಮ್, ಶಿವಸೇನಾ ಮಾಜಿ ಸಂಸದ ರಾಹುಲ್ ಶೇವಾಲೆ ಮತ್ತು ಮಹಾಯುತಿಯ ಇತರ ನಾಯಕರ ಸಮ್ಮುಖದಲ್ಲಿ ತಾವ್ಡೆ ಮತ್ತು ಘಾಡಿ ಅವರು ಪುರಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.</p>.<p class="title">ಮೇಯರ್ ಸ್ಥಾನಕ್ಕೆ ಫೆಬ್ರವರಿ 11ರಂದು ಚುನಾವಣೆ ನಡೆಯಲಿದ್ದು, ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವೂ ಅದೇ ಆಗಿದೆ.</p>.<p class="title">1997ರಿಂದಲೂ ಸತತ 25 ವರ್ಷ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ (ಯುಬಿಟಿ) ಬೃಹನ್ ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಆಡಳಿತದ ಚುಕ್ಕಾಣಿ ಹಿಡಿದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>