<p><strong>ಮುಂಬೈ</strong>: ಆಜಾನ್ ವೇಳೆ ಧ್ವನಿವರ್ಧಕಗಳಿಂದ ಹೊರಡುವ ಶಬ್ದವನ್ನು ಕಡಿಮೆ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಬೇಡಿಕೆ ಇಟ್ಟ ಬೆನ್ನಲ್ಲೇ, ಮುಂಬೈನ ಹಲವಾರು ಮಸೀದಿಗಳು ಧ್ವನಿವರ್ಧಕದ ಶಬ್ದವನ್ನು ಕಡಿಮೆ ಮಾಡಿವೆ.</p>.<p>ಈ ವಿಷಯದಲ್ಲಿ ಪೊಲೀಸರು ಮಧ್ಯಪ್ರವೇಶಿಸಿದ್ದು, ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡುವುದಾಗಿ ಮಸೀದಿಗಳು ತಿಳಿಸಿವೆ ಎಂದು ಮೂಲಗಳು ಹೇಳಿವೆ.</p>.<p>‘ಆಜಾನ್ನ ಶಬ್ದವು ಈಗ ರಾಜಕೀಯ ವಿಷಯವಾಗಿದೆ. ಆದರೆ, ಇದು ಕೋಮು ಬಣ್ಣ ಪಡೆಯುವುದು ನನಗೆ ಇಷ್ಟ ಇಲ್ಲ’ ಎಂದು ನಗರದಲ್ಲಿರುವ ಜುಮಾ ಮಸೀದಿಯ ಮುಖ್ಯ ಬೋಧಕ ಮೊಹಮ್ಮದ್ ಅಶ್ಫಾಕ್ ಕಾಜಿ ಹೇಳಿದ್ದಾರೆ.</p>.<p>‘ಸ್ಥಳೀಯ ಹಿಂದೂ ಮುಖಂಡರೊಬ್ಬರ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, 900ಕ್ಕೂ ಅಧಿಕ ಮಸೀದಿಗಳು ಆಜಾನ್ ಸಮಯದಲ್ಲಿ ಧ್ವನಿವರ್ಧಕದ ಶಬ್ದವನ್ನು ಕಡಿಮೆ ಮಾಡಿವೆ’ ಎಂದು ಪ್ರಭಾವಿ ಇಸ್ಲಾಮಿಕ್ ವಿದ್ವಾಂಸರಲ್ಲೊಬ್ಬರಾಗಿರುವ ಕಾಜಿ ಹೇಳಿದ್ದಾರೆ.</p>.<p>‘ಧ್ವನಿವರ್ಧಕ ಬಳಕೆ ವಿಷಯದಲ್ಲಿ ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ಯಾವುದೇ ಸಂದರ್ಭದಲ್ಲಿಯೂ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿ ವಿ.ಎನ್.ಪಾಟೀಲ ಹೇಳಿದ್ದಾರೆ.</p>.<p>ಮಹಾರಾಷ್ಟ್ರ ನವನಿರ್ಮಾಣ ಸೇನಾದ ಮುಖಂಡ ರಾಜ್ ಠಾಕ್ರೆ ಅವರು, ಮಸೀದಿ ಹಾಗೂ ಇತರ ಸ್ಥಳಗಳಲ್ಲಿನ ಧ್ವನಿವರ್ಧಕಗಳ ಶಬ್ದವು ನಿಯಮಗಳಂತೆ ಮಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಕಳೆದ ಏಪ್ರಿಲ್ನಲ್ಲಿ ಆಗ್ರಹಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಸಂಘಟನೆಯ ಕಾರ್ಯಕರ್ತರು ಮಸೀದಿಗಳ ಮುಂದೆ ಪ್ರತಿಭಟನೆ ರೂಪದಲ್ಲಿ ಹಿಂದೂ ಶ್ಲೋಕಗಳನ್ನು ಪಠಿಸುವುದಾಗಿ ಎಚ್ಚರಿಸಿದ್ದರು.</p>.<p>ಠಾಕ್ರೆ ಅವರ ಮಾತುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಬೆನ್ನಲ್ಲೇ, ಹಿರಿಯ ಪೊಲೀಸ್ ಅಧಿಕಾರಿಗಳು ಕಾಜಿ ಅವರೂ ಸೇರಿದಂತೆ ಧರ್ಮ ಗುರುಗಳ ಸಭೆ ನಡೆಸಿದ್ದರು. ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡುವ ಬಗ್ಗೆ ಅವರೊಂದಿಗೆ ಚರ್ಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಆಜಾನ್ ವೇಳೆ ಧ್ವನಿವರ್ಧಕಗಳಿಂದ ಹೊರಡುವ ಶಬ್ದವನ್ನು ಕಡಿಮೆ ಮಾಡಬೇಕು ಎಂದು ಹಿಂದೂ ಸಂಘಟನೆಗಳು ಬೇಡಿಕೆ ಇಟ್ಟ ಬೆನ್ನಲ್ಲೇ, ಮುಂಬೈನ ಹಲವಾರು ಮಸೀದಿಗಳು ಧ್ವನಿವರ್ಧಕದ ಶಬ್ದವನ್ನು ಕಡಿಮೆ ಮಾಡಿವೆ.</p>.<p>ಈ ವಿಷಯದಲ್ಲಿ ಪೊಲೀಸರು ಮಧ್ಯಪ್ರವೇಶಿಸಿದ್ದು, ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡುವುದಾಗಿ ಮಸೀದಿಗಳು ತಿಳಿಸಿವೆ ಎಂದು ಮೂಲಗಳು ಹೇಳಿವೆ.</p>.<p>‘ಆಜಾನ್ನ ಶಬ್ದವು ಈಗ ರಾಜಕೀಯ ವಿಷಯವಾಗಿದೆ. ಆದರೆ, ಇದು ಕೋಮು ಬಣ್ಣ ಪಡೆಯುವುದು ನನಗೆ ಇಷ್ಟ ಇಲ್ಲ’ ಎಂದು ನಗರದಲ್ಲಿರುವ ಜುಮಾ ಮಸೀದಿಯ ಮುಖ್ಯ ಬೋಧಕ ಮೊಹಮ್ಮದ್ ಅಶ್ಫಾಕ್ ಕಾಜಿ ಹೇಳಿದ್ದಾರೆ.</p>.<p>‘ಸ್ಥಳೀಯ ಹಿಂದೂ ಮುಖಂಡರೊಬ್ಬರ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, 900ಕ್ಕೂ ಅಧಿಕ ಮಸೀದಿಗಳು ಆಜಾನ್ ಸಮಯದಲ್ಲಿ ಧ್ವನಿವರ್ಧಕದ ಶಬ್ದವನ್ನು ಕಡಿಮೆ ಮಾಡಿವೆ’ ಎಂದು ಪ್ರಭಾವಿ ಇಸ್ಲಾಮಿಕ್ ವಿದ್ವಾಂಸರಲ್ಲೊಬ್ಬರಾಗಿರುವ ಕಾಜಿ ಹೇಳಿದ್ದಾರೆ.</p>.<p>‘ಧ್ವನಿವರ್ಧಕ ಬಳಕೆ ವಿಷಯದಲ್ಲಿ ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ಯಾವುದೇ ಸಂದರ್ಭದಲ್ಲಿಯೂ ರಾಜ್ಯದಲ್ಲಿ ಕೋಮು ಸಂಘರ್ಷಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಮುಂಬೈನ ಹಿರಿಯ ಪೊಲೀಸ್ ಅಧಿಕಾರಿ ವಿ.ಎನ್.ಪಾಟೀಲ ಹೇಳಿದ್ದಾರೆ.</p>.<p>ಮಹಾರಾಷ್ಟ್ರ ನವನಿರ್ಮಾಣ ಸೇನಾದ ಮುಖಂಡ ರಾಜ್ ಠಾಕ್ರೆ ಅವರು, ಮಸೀದಿ ಹಾಗೂ ಇತರ ಸ್ಥಳಗಳಲ್ಲಿನ ಧ್ವನಿವರ್ಧಕಗಳ ಶಬ್ದವು ನಿಯಮಗಳಂತೆ ಮಿತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಕಳೆದ ಏಪ್ರಿಲ್ನಲ್ಲಿ ಆಗ್ರಹಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಸಂಘಟನೆಯ ಕಾರ್ಯಕರ್ತರು ಮಸೀದಿಗಳ ಮುಂದೆ ಪ್ರತಿಭಟನೆ ರೂಪದಲ್ಲಿ ಹಿಂದೂ ಶ್ಲೋಕಗಳನ್ನು ಪಠಿಸುವುದಾಗಿ ಎಚ್ಚರಿಸಿದ್ದರು.</p>.<p>ಠಾಕ್ರೆ ಅವರ ಮಾತುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಬೆನ್ನಲ್ಲೇ, ಹಿರಿಯ ಪೊಲೀಸ್ ಅಧಿಕಾರಿಗಳು ಕಾಜಿ ಅವರೂ ಸೇರಿದಂತೆ ಧರ್ಮ ಗುರುಗಳ ಸಭೆ ನಡೆಸಿದ್ದರು. ಧ್ವನಿವರ್ಧಕಗಳ ಶಬ್ದವನ್ನು ಕಡಿಮೆ ಮಾಡುವ ಬಗ್ಗೆ ಅವರೊಂದಿಗೆ ಚರ್ಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>