ದಾದರ್ನ ಶಿವಾಜಿ ಪಾರ್ಕ್ನಿಂದ ಪ್ರಭಾದೇವಿ ಪ್ರದೇಶದ ಕಾಮಗಾರ್ ಮೈದಾನದವರೆಗೆ ನಡೆದ ಹಿಂದೂ ಜನ ಆಕ್ರೋಶ ಮೋರ್ಚಾ ರ್ಯಾಲಿಯಲ್ಲಿ ಬಿಜೆಪಿಯ ಮುಂಬೈ ಘಟಕದ ಅಧ್ಯಕ್ಷ ಆಶಿಶ್ ಶೆಲಾರ್ ನೇತೃತ್ವದಲ್ಲಿ ಬಿಜೆಪಿಯ ನಾಯಕರು ಮತ್ತು ಶಿವಸೇನಾದ (ಬಾಳಾಸಾಹೇಬ್ ಬಣ) ಸದಸ್ಯರು ಭಾಗವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ಎಸ್ಎಸ್), ಬಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಕಾರ್ಯಕರ್ತರು ಭಾಗಿಯಾಗಿದ್ದರು.