<p><strong>ಮುಂಬೈ:</strong> ಸುಮಾರು ₹400 ಕೋಟಿ ಮೌಲ್ಯದ ₹2 ಸಾವಿರ ಮುಖಬೆಲೆಯ ನೋಟುಗಳ ಸಾಗಣೆ ಹಾಗೂ ವ್ಯಕ್ತಿಯ ಅಪಹರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಈವರೆಗೆ ಆರು ಮಂದಿಯನ್ನು ಬಂಧಿಸಿದೆ. </p>.<p>ಜಯೇಶ್ ಕದಂ, ವಿಶಾಲ್ ನಾಯ್ಡು, ಸುನಿಲ್ ಧುಮಾಲ್, ವಿರಾಟ್ ಗಾಂಧಿ, ಜನಾರ್ದನ್ ದೈಗುಡೆ ಮತ್ತು ಸಯ್ಯದ್ ಅಜರ್ ಬಂಧಿತರು.</p>.<p>ಮಹಾರಾಷ್ಟ್ರ–ಕರ್ನಾಟಕ ಗಡಿಯ ಬೆಳಗಾವಿ ಜಿಲ್ಲೆಯ ಖಾನಾಪುರ ವ್ಯಾಪ್ತಿಯ ಅರಣ್ಯ ಮತ್ತು ಅಪಘಾತ ವಲಯವಾದ ಚೋರ್ಲಾ ಘಾಟ್ ಪ್ರದೇಶದಲ್ಲಿ ಅಪಾರ ಪ್ರಮಾಣದ ಹಣವನ್ನು ಸಾಗಿಸುತ್ತಿದ್ದ ಎರಡು ಕಂಟೇನರ್ಗಳು 2025ರ ಅಕ್ಟೋಬರ್ 16ರಂದು ನಾಪತ್ತೆಯಾಗಿದ್ದವು.</p>.<p>ವರದಿಗಳ ಪ್ರಕಾರ, ಈ ಹಣವನ್ನು ಕರ್ನಾಟಕದಿಂದ ಗುಜರಾತ್ಗೆ ಸಾಗಿಸಿ, ನಂತರ ಬೇರೆ ಬೇರೆ ಮುಖಬೆಲೆಯ ನೋಟುಗಳಾಗಿ ಪರಿವರ್ತಿಸಿ ಮಹಾರಾಷ್ಟ್ರಕ್ಕೆ ಸಾಗಿಸಲು ಉದ್ದೇಶಿಸಲಾಗಿತ್ತು.</p>.<p>‘ಕಂಟೇನರ್ ದರೋಡೆಗೆ ಕಿಶೋರ್ ಶೇಠ್ ಯೋಜನೆ ರೂಪಿಸಿದ್ದರು. ಅವರ ಸಹಚರರು ನನಗೆ ಬಂದೂಕು ತೋರಿಸಿ ಅಪಹರಿಸಿದ್ದರು. ಒಂದು ತಿಂಗಳಿಗೂ ಹೆಚ್ಚು ಕಾಲ ವಶದಲ್ಲಿಟ್ಟುಕೊಂಡು ₹400 ಕೋಟಿ ನೀಡುವಂತೆ ಒತ್ತಾಯಿಸಿ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದರು. ಕೊನೆಗೂ ಅಲ್ಲಿಂದ ತಪ್ಪಿಸಿಕೊಂಡು ಬಂದೆ’ ಎಂದು ಇಗತಪುರಿ ನಿವಾಸಿ ಸಂದೀಪ್ ಪಾಟೀಲ್ ಅವರು ನಾಸಿಕ್ ಗ್ರಾಮೀಣ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಕರ್ನಾಟಕ ಮತ್ತು ಗೋವಾ ಪೊಲೀಸರ ಸಮನ್ವಯದೊಂದಿಗೆ ತನಿಖೆ ನಡೆಸಲಾಗುತ್ತಿದೆ. ಠಾಣೆಯ ಬಿಲ್ಡರ್ ಆಗಿರುವ ವಿರಾಟ್ ಗಾಂಧಿ ಅಹಮದಾಬಾದ್ ಮೂಲದ ಹವಾಲಾ ಆಪರೇಟರ್ ಆಗಿದ್ದಾರೆ’ ಎಂದು ನಾಸಿಕ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ.</p>.<p>ಎಫ್ಐಆರ್ನಲ್ಲಿ ಠಾಣೆಯ ಬಿಲ್ಡರ್ ಒಬ್ಬರ ಹೆಸರಿದ್ದು, ಕಂಟೇನರ್ಗಳು ಉದ್ದೇಶಿತ ಸ್ಥಳಗಳಿಗೆ ತಲುಪಿದ್ದರೆ ಆ ಬಿಲ್ಡರ್ ಪ್ರಮುಖ ಫಲಾನುಭವಿಯಾಗುತ್ತಿದ್ದರು ಎನ್ನಲಾಗಿದೆ.</p>.<p>₹2 ಸಾವಿರ ಮುಖಬೆಲೆಯ ನೋಟುಗಳನ್ನು 2023ರ ಮೇ ತಿಂಗಳಿನಲ್ಲಿ ಚಲಾವಣೆಯಿಂದ ಹಿಂಪಡೆಯಲಾಗಿತ್ತು. ಆದರೂ, ಅವು ಕಾನೂನುಬದ್ಧ ಚಲಾವಣೆಯ ಸ್ಥಾನಮಾನ ಹೊಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಸುಮಾರು ₹400 ಕೋಟಿ ಮೌಲ್ಯದ ₹2 ಸಾವಿರ ಮುಖಬೆಲೆಯ ನೋಟುಗಳ ಸಾಗಣೆ ಹಾಗೂ ವ್ಯಕ್ತಿಯ ಅಪಹರಣ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಐಟಿ) ಈವರೆಗೆ ಆರು ಮಂದಿಯನ್ನು ಬಂಧಿಸಿದೆ. </p>.<p>ಜಯೇಶ್ ಕದಂ, ವಿಶಾಲ್ ನಾಯ್ಡು, ಸುನಿಲ್ ಧುಮಾಲ್, ವಿರಾಟ್ ಗಾಂಧಿ, ಜನಾರ್ದನ್ ದೈಗುಡೆ ಮತ್ತು ಸಯ್ಯದ್ ಅಜರ್ ಬಂಧಿತರು.</p>.<p>ಮಹಾರಾಷ್ಟ್ರ–ಕರ್ನಾಟಕ ಗಡಿಯ ಬೆಳಗಾವಿ ಜಿಲ್ಲೆಯ ಖಾನಾಪುರ ವ್ಯಾಪ್ತಿಯ ಅರಣ್ಯ ಮತ್ತು ಅಪಘಾತ ವಲಯವಾದ ಚೋರ್ಲಾ ಘಾಟ್ ಪ್ರದೇಶದಲ್ಲಿ ಅಪಾರ ಪ್ರಮಾಣದ ಹಣವನ್ನು ಸಾಗಿಸುತ್ತಿದ್ದ ಎರಡು ಕಂಟೇನರ್ಗಳು 2025ರ ಅಕ್ಟೋಬರ್ 16ರಂದು ನಾಪತ್ತೆಯಾಗಿದ್ದವು.</p>.<p>ವರದಿಗಳ ಪ್ರಕಾರ, ಈ ಹಣವನ್ನು ಕರ್ನಾಟಕದಿಂದ ಗುಜರಾತ್ಗೆ ಸಾಗಿಸಿ, ನಂತರ ಬೇರೆ ಬೇರೆ ಮುಖಬೆಲೆಯ ನೋಟುಗಳಾಗಿ ಪರಿವರ್ತಿಸಿ ಮಹಾರಾಷ್ಟ್ರಕ್ಕೆ ಸಾಗಿಸಲು ಉದ್ದೇಶಿಸಲಾಗಿತ್ತು.</p>.<p>‘ಕಂಟೇನರ್ ದರೋಡೆಗೆ ಕಿಶೋರ್ ಶೇಠ್ ಯೋಜನೆ ರೂಪಿಸಿದ್ದರು. ಅವರ ಸಹಚರರು ನನಗೆ ಬಂದೂಕು ತೋರಿಸಿ ಅಪಹರಿಸಿದ್ದರು. ಒಂದು ತಿಂಗಳಿಗೂ ಹೆಚ್ಚು ಕಾಲ ವಶದಲ್ಲಿಟ್ಟುಕೊಂಡು ₹400 ಕೋಟಿ ನೀಡುವಂತೆ ಒತ್ತಾಯಿಸಿ ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದರು. ಕೊನೆಗೂ ಅಲ್ಲಿಂದ ತಪ್ಪಿಸಿಕೊಂಡು ಬಂದೆ’ ಎಂದು ಇಗತಪುರಿ ನಿವಾಸಿ ಸಂದೀಪ್ ಪಾಟೀಲ್ ಅವರು ನಾಸಿಕ್ ಗ್ರಾಮೀಣ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<p>‘ಕರ್ನಾಟಕ ಮತ್ತು ಗೋವಾ ಪೊಲೀಸರ ಸಮನ್ವಯದೊಂದಿಗೆ ತನಿಖೆ ನಡೆಸಲಾಗುತ್ತಿದೆ. ಠಾಣೆಯ ಬಿಲ್ಡರ್ ಆಗಿರುವ ವಿರಾಟ್ ಗಾಂಧಿ ಅಹಮದಾಬಾದ್ ಮೂಲದ ಹವಾಲಾ ಆಪರೇಟರ್ ಆಗಿದ್ದಾರೆ’ ಎಂದು ನಾಸಿಕ್ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಬಾಳಾಸಾಹೇಬ್ ಪಾಟೀಲ್ ತಿಳಿಸಿದ್ದಾರೆ.</p>.<p>ಎಫ್ಐಆರ್ನಲ್ಲಿ ಠಾಣೆಯ ಬಿಲ್ಡರ್ ಒಬ್ಬರ ಹೆಸರಿದ್ದು, ಕಂಟೇನರ್ಗಳು ಉದ್ದೇಶಿತ ಸ್ಥಳಗಳಿಗೆ ತಲುಪಿದ್ದರೆ ಆ ಬಿಲ್ಡರ್ ಪ್ರಮುಖ ಫಲಾನುಭವಿಯಾಗುತ್ತಿದ್ದರು ಎನ್ನಲಾಗಿದೆ.</p>.<p>₹2 ಸಾವಿರ ಮುಖಬೆಲೆಯ ನೋಟುಗಳನ್ನು 2023ರ ಮೇ ತಿಂಗಳಿನಲ್ಲಿ ಚಲಾವಣೆಯಿಂದ ಹಿಂಪಡೆಯಲಾಗಿತ್ತು. ಆದರೂ, ಅವು ಕಾನೂನುಬದ್ಧ ಚಲಾವಣೆಯ ಸ್ಥಾನಮಾನ ಹೊಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>