<p><strong>ಮುಂಬೈ:</strong> ‘ಲಷ್ಕರ್–ಎ–ಜಿಹಾದಿ’ ಸಂಘಟನೆಯ 14 ಭಯೋತ್ಪಾದಕರು ನಗರ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು ಆರ್ಡಿಎಕ್ಸ್ ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.</p><p>‘ಈ ವಾಹನಗಳನ್ನು ಸ್ಫೋಟಿಸುವ ಮೂಲಕ ದೇಶವನ್ನು ಬೆಚ್ಚಿಬೀಳಿಸಲಾಗುವುದು’ ಎಂಬ ಸಂದೇಶವು ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸ್ಆ್ಯಪ್ ಸಹಾಯವಾಣಿಗೆ ಬಂದಿದೆ.</p><p>ಈ ಬೆದರಿಕೆ ಸಂದೇಶ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p><p>ಸಂದೇಶ ಕಳಿಸಿದ ವ್ಯಕ್ತಿಯು ‘ಲಷ್ಕರ್–ಎ–ಜಿಹಾದಿ’ ಸಂಘಟನೆಗೆ ತಾನು ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ಅವರು ವಿವರಿಸಿದರು.</p><p>‘ಸಂದೇಶದ ಮೂಲ ಯಾವುದು ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅದರ ಜತೆಗೆ ಪ್ರಮುಖ ಪ್ರದೇಶಗಳಲ್ಲಿ ಶೋಧ ಕಾರ್ಯವನ್ನೂ ನಡೆಸಲಾಗಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿವಿಧೆಡೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅವರು ಹೇಳಿದರು.</p><p>ಯಾವುದೇ ಸಂಶಯಾಸ್ಪದ ವಸ್ತುಗಳು ಕಂಡುಬಂದರೆ ಕೂಡಲೇ ಮಾಹಿತಿ ನೀಡುವಂತೆ ಹಾಗೂ ವದಂತಿಗಳಿಗೆ ಕಿವಿಗೊಡದಂತೆ ಪೊಲೀಸರು ಮುಂಬೈ ಜನರಲ್ಲಿ ಮನವಿ ಮಾಡಿದ್ದಾರೆ.</p><p>ಗಣೇಶ ಉತ್ಸವದ 10ನೇ ದಿನವಾದ ಅನಂತ ಚತುರ್ಥಿಯಂದು (ಶನಿವಾರ) ಲಕ್ಷಾಂತರ ಜನರು ನಗರದ ರಸ್ತೆಗಳಲ್ಲಿ ಸೇರಲಿದ್ದಾರೆ. ಇದೇ ವೇಳೆ ಬೆದರಿಕೆ ಸಂದೇಶ ಬಂದಿರುವುದರಿಂದ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಲಷ್ಕರ್–ಎ–ಜಿಹಾದಿ’ ಸಂಘಟನೆಯ 14 ಭಯೋತ್ಪಾದಕರು ನಗರ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು ಆರ್ಡಿಎಕ್ಸ್ ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.</p><p>‘ಈ ವಾಹನಗಳನ್ನು ಸ್ಫೋಟಿಸುವ ಮೂಲಕ ದೇಶವನ್ನು ಬೆಚ್ಚಿಬೀಳಿಸಲಾಗುವುದು’ ಎಂಬ ಸಂದೇಶವು ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸ್ಆ್ಯಪ್ ಸಹಾಯವಾಣಿಗೆ ಬಂದಿದೆ.</p><p>ಈ ಬೆದರಿಕೆ ಸಂದೇಶ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.</p><p>ಸಂದೇಶ ಕಳಿಸಿದ ವ್ಯಕ್ತಿಯು ‘ಲಷ್ಕರ್–ಎ–ಜಿಹಾದಿ’ ಸಂಘಟನೆಗೆ ತಾನು ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ಅವರು ವಿವರಿಸಿದರು.</p><p>‘ಸಂದೇಶದ ಮೂಲ ಯಾವುದು ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅದರ ಜತೆಗೆ ಪ್ರಮುಖ ಪ್ರದೇಶಗಳಲ್ಲಿ ಶೋಧ ಕಾರ್ಯವನ್ನೂ ನಡೆಸಲಾಗಿದೆ. ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿವಿಧೆಡೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದು ಅವರು ಹೇಳಿದರು.</p><p>ಯಾವುದೇ ಸಂಶಯಾಸ್ಪದ ವಸ್ತುಗಳು ಕಂಡುಬಂದರೆ ಕೂಡಲೇ ಮಾಹಿತಿ ನೀಡುವಂತೆ ಹಾಗೂ ವದಂತಿಗಳಿಗೆ ಕಿವಿಗೊಡದಂತೆ ಪೊಲೀಸರು ಮುಂಬೈ ಜನರಲ್ಲಿ ಮನವಿ ಮಾಡಿದ್ದಾರೆ.</p><p>ಗಣೇಶ ಉತ್ಸವದ 10ನೇ ದಿನವಾದ ಅನಂತ ಚತುರ್ಥಿಯಂದು (ಶನಿವಾರ) ಲಕ್ಷಾಂತರ ಜನರು ನಗರದ ರಸ್ತೆಗಳಲ್ಲಿ ಸೇರಲಿದ್ದಾರೆ. ಇದೇ ವೇಳೆ ಬೆದರಿಕೆ ಸಂದೇಶ ಬಂದಿರುವುದರಿಂದ ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>