ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ದಾಳಿ: 12 ವರ್ಷಗಳ ಬಳಿಕ ಮೀನುಗಾರರ ಕುಟುಂಬದವರಿಗೆ ಪರಿಹಾರ ಧನ

Last Updated 1 ಡಿಸೆಂಬರ್ 2020, 10:11 IST
ಅಕ್ಷರ ಗಾತ್ರ

ನವಸಾರಿ, ಗುಜರಾತ್‌: 26/11 ಮುಂಬೈ ಭಯೋತ್ಪಾದನಾ ದಾಳಿಗೂ ಮುನ್ನ ಉಗ್ರರು ಐವರು ಮೀನುಗಾರರನ್ನು ಹತ್ಯೆಗೈದಿದ್ದರು. ಇದೀಗ ಮುಂಬೈ ದಾಳಿ ನಡೆದ 12 ವರ್ಷಗಳ ಬಳಿಕ ಮೂವರು ಮೀನುಗಾರರ ಕುಟುಂಬದವರಿಗೆ ಪರಿಹಾರಧನ ಲಭಿಸಿದೆ. ಗುಜರಾತ್‌ ಸರ್ಕಾರವು ತಲಾ ₹5 ಲಕ್ಷ ಪರಿಹಾರ ಧನ ವಿತರಿಸಿದೆ.

ಕ್ಯಾಪ್ಟನ್‌ ಅಮರ್‌ಸಿಂಗ್ ಸೋಲಂಕಿ ಸೇರಿದಂತೆ ಇಬ್ಬರು ಮೀನುಗಾರರ ಕುಟುಂಬಸ್ಥರಿಗೆ ವಿವಿಧ ಅಧಿಕಾರಿಗಳು ಈಗಾಗಲೇ ಪರಿಹಾರ ಧನ ನೀಡಿದ್ದರು. ಹಾಗಾಗಿ ಈಗ ಮೂವರು ಮೀನುಗಾರರ ಕುಟುಂಬಸ್ಥರಿಗೆ ಪರಿಹಾರ ನೀಡಲಾಗಿದೆ.

ಮೀನುಗಾರರಾದ ನಾತು ರಾಥೋಡ್‌, ಮುಖೇಶ್‌ ರಾಥೋಡ್‌ ಮತ್ತು ಬಲ್ವಂತ್‌ ತಾಂಡೇಲ್‌ ಗುಜರಾತ್‌ನ ಜಲಾಲ್‌ಪುರದ ವ್ಯಾನ್ಸಿ ಗ್ರಾಮದ ನಿವಾಸಿಗಳಾಗಿದ್ದರು.

ಈ ಮೂವರು ಮೀನುಗಾರರ ಕುಟುಂಬ ಸದಸ್ಯರಿಗೆ ನಿಗದಿತ ಠೇವಣಿ ರೂಪದಲ್ಲಿ ಕಳೆದ ವಾರ ತಲಾ ₹5 ಲಕ್ಷ ನೀಡಲಾಗಿದೆ. ಸಂಬಂಧಿಸಿದ ದಾಖಲೆಗಳನ್ನು ಕುಟುಂಸ್ಥರಿಗೆ ಶುಕ್ರವಾರ ಹಸ್ತಾಂತರ ಮಾಡಲಾಯಿತು. ಈ ಹಣವನ್ನು ಮೂರು ವರ್ಷಗಳ ಕಾಲ ನಿಗದಿತ ಠೇವಣಿಯಲ್ಲಿ ಇರಿಸಲಾಗಿದೆ ಎಂದು ನವಸಾರಿ ಜಿಲ್ಲೆಯ ವಿ‍ಪತ್ತು ನಿರ್ವಹಣಾ ಇಲಾಖೆಯ ಕಂದಾಯ ಅಧಿಕಾರಿ ರೋಶ್ನಿ ಪಟೇಲ್ ಅವರು ಹೇಳಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT