<p><strong>ಮುಂಬೈ:</strong> ‘ಮರಾಠಿಯು ಮುಂಬೈನ ಭಾಷೆಯಾಗಿದೆ. ಹೊರಗಿನಿಂದ ಬಂದ ಅನ್ಯಭಾಷಿಗರು ಇದನ್ನು ಅರಿಯಬೇಕು’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖಂಡ ಸುರೇಶ್ ಭಯ್ಯಾಜಿ ಜೋಶಿ ಹೇಳಿದ್ದಾರೆ.</p><p>ಮುಂಬೈನ ಘಟ್ಕೋಪರ್ ಪ್ರದೇಶದಲ್ಲಿ ಮಾತನಾಡಿದ ಅವರು, ‘ಮರಾಠಿಯು ನನ್ನ ಮಾತೃಭೂಮಿಯ ಭಾಷೆಯಾಗಿದೆ. ಅದರ ಕುರಿತು ನನಗೆ ಹೆಮ್ಮೆ ಇದೆ’ ಎಂದಿದ್ದಾರೆ.</p><p>‘ಮುಂಬೈನಲ್ಲಿ ನೆಲೆಸಿರುವ ಅನ್ಯಬಾಷಿಗರು ಮರಾಠಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಬಯಸುವುದು ಸಹಜ. ಮುಂಬೈಗೆ ಒಂದು ಭಾಷೆ ಎಂಬುದಿಲ್ಲ. ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿನ ಜನರು ಗುಜರಾತಿ ಭಾಷೆಯನ್ನು ಹೆಚ್ಚು ಮಾತನಾಡುತ್ತಾರೆ. ಆದರೆ ಮರಾಠಿಯನ್ನು ಅರ್ಥ ಮಾಡಿಕೊಳ್ಳುವುದನ್ನು ಕಲಿಯಬೇಕು’ ಎಂದಿದ್ದಾರೆ.</p><p>ಜೋಶಿ ಮಾತನಾಡಿರುವ ಈ ಹೇಳಿಕೆಗೆ ಶಿವಸೇನಾ (ಯುಬಿಟಿ) ಹಾಗೂ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.</p><p>‘ಮರಾಠಿಯು ಮಹಾರಾಷ್ಟ್ರ ಹಾಗೂ ಮುಂಬೈನ ಭಾಷೆಯಾಗಿದೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಹಲವು ಭಾಷಿಗರು ಮುಂಬೈನಲ್ಲಿ ಅತ್ಯಂತ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ’ ಎಂದು ವಿರೋಧ ಪಕ್ಷಗಳ ಮುಖಂಡರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಮರಾಠಿಯು ಮುಂಬೈನ ಭಾಷೆಯಾಗಿದೆ. ಹೊರಗಿನಿಂದ ಬಂದ ಅನ್ಯಭಾಷಿಗರು ಇದನ್ನು ಅರಿಯಬೇಕು’ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖಂಡ ಸುರೇಶ್ ಭಯ್ಯಾಜಿ ಜೋಶಿ ಹೇಳಿದ್ದಾರೆ.</p><p>ಮುಂಬೈನ ಘಟ್ಕೋಪರ್ ಪ್ರದೇಶದಲ್ಲಿ ಮಾತನಾಡಿದ ಅವರು, ‘ಮರಾಠಿಯು ನನ್ನ ಮಾತೃಭೂಮಿಯ ಭಾಷೆಯಾಗಿದೆ. ಅದರ ಕುರಿತು ನನಗೆ ಹೆಮ್ಮೆ ಇದೆ’ ಎಂದಿದ್ದಾರೆ.</p><p>‘ಮುಂಬೈನಲ್ಲಿ ನೆಲೆಸಿರುವ ಅನ್ಯಬಾಷಿಗರು ಮರಾಠಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಬಯಸುವುದು ಸಹಜ. ಮುಂಬೈಗೆ ಒಂದು ಭಾಷೆ ಎಂಬುದಿಲ್ಲ. ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿನ ಜನರು ಗುಜರಾತಿ ಭಾಷೆಯನ್ನು ಹೆಚ್ಚು ಮಾತನಾಡುತ್ತಾರೆ. ಆದರೆ ಮರಾಠಿಯನ್ನು ಅರ್ಥ ಮಾಡಿಕೊಳ್ಳುವುದನ್ನು ಕಲಿಯಬೇಕು’ ಎಂದಿದ್ದಾರೆ.</p><p>ಜೋಶಿ ಮಾತನಾಡಿರುವ ಈ ಹೇಳಿಕೆಗೆ ಶಿವಸೇನಾ (ಯುಬಿಟಿ) ಹಾಗೂ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.</p><p>‘ಮರಾಠಿಯು ಮಹಾರಾಷ್ಟ್ರ ಹಾಗೂ ಮುಂಬೈನ ಭಾಷೆಯಾಗಿದೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಹಲವು ಭಾಷಿಗರು ಮುಂಬೈನಲ್ಲಿ ಅತ್ಯಂತ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ’ ಎಂದು ವಿರೋಧ ಪಕ್ಷಗಳ ಮುಖಂಡರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>