<p><strong>ನವದೆಹಲಿ</strong>: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಕೊಲೆಗೆ ಸಂಚು ರೂಪಿಸಿದ್ದ ಗೋಲ್ಡಿ ಬ್ರಾರ್ ಗುಂಪಿನ ಇಬ್ಬರು ಸದಸ್ಯರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಇಲ್ಲಿನ ಜೈತ್ಪುರ-ಕಾಳಿಂದಿ ಕುಂಜ್ ರಸ್ತೆಯಲ್ಲಿ ನಡೆದ ಗುಂಡಿನ ಚಕಮಕಿಯ ನಂತರ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಹರಿಯಾಣದ ಪಾಣಿಪತ್ ನಿವಾಸಿ ರಾಹುಲ್ ಮತ್ತು ಭಿವಾನಿಯ ಸಾಹಿಲ್ ಎಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p><p>‘ಈ ಇಬ್ಬರೂ ಆರೋಪಿಗಳು ಫಾರೂಕಿ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. ಇದಕ್ಕಾಗಿ ಗ್ಯಾಂಗ್ಸ್ಟರ್ ರೋಹಿತ್ ಗೋದಾರ ಅವರಿಂದ ಸೂಚನೆಗಳನ್ನು ಪಡೆದುಕೊಳ್ಳುತ್ತಿದ್ದರು’ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.</p><p>ಫಾರೂಕಿ ಅವರ ಚಲನವಲಗಳನ್ನು ಗಮನಿಸಿದ್ದ ಆರೋಪಿಗಳು, ಮುಂಬೈ ಮತ್ತು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>2024ರ ಡಿಸೆಂಬರ್ನಲ್ಲಿ ಹರಿಯಾಣದ ಯಮುನಾನಗರದಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ ರಾಹುಲ್ ಪ್ರಮುಖ ಆರೋಪಿಯಾಗಿದ್ದಾನೆ ಎಂದೂ ಅವರು ತಿಳಿಸಿದ್ದಾರೆ.</p><p>ಹಿಂದಿಯ ಬಿಗ್ ಬಾಸ್ ಶೋನ ವಿಜೇತರಾಗಿರುವ ಫಾರೂಕಿ ಅವರು ಇನ್ಸ್ಟಾಗ್ರಾಂನಲ್ಲಿ 14.2 ಮಿಲಿಯನ್ ಫಾಲೋವರ್ಗಳನ್ನು ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಕೊಲೆಗೆ ಸಂಚು ರೂಪಿಸಿದ್ದ ಗೋಲ್ಡಿ ಬ್ರಾರ್ ಗುಂಪಿನ ಇಬ್ಬರು ಸದಸ್ಯರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಇಲ್ಲಿನ ಜೈತ್ಪುರ-ಕಾಳಿಂದಿ ಕುಂಜ್ ರಸ್ತೆಯಲ್ಲಿ ನಡೆದ ಗುಂಡಿನ ಚಕಮಕಿಯ ನಂತರ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಹರಿಯಾಣದ ಪಾಣಿಪತ್ ನಿವಾಸಿ ರಾಹುಲ್ ಮತ್ತು ಭಿವಾನಿಯ ಸಾಹಿಲ್ ಎಂದು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.</p><p>‘ಈ ಇಬ್ಬರೂ ಆರೋಪಿಗಳು ಫಾರೂಕಿ ಅವರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು. ಇದಕ್ಕಾಗಿ ಗ್ಯಾಂಗ್ಸ್ಟರ್ ರೋಹಿತ್ ಗೋದಾರ ಅವರಿಂದ ಸೂಚನೆಗಳನ್ನು ಪಡೆದುಕೊಳ್ಳುತ್ತಿದ್ದರು’ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.</p><p>ಫಾರೂಕಿ ಅವರ ಚಲನವಲಗಳನ್ನು ಗಮನಿಸಿದ್ದ ಆರೋಪಿಗಳು, ಮುಂಬೈ ಮತ್ತು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p><p>2024ರ ಡಿಸೆಂಬರ್ನಲ್ಲಿ ಹರಿಯಾಣದ ಯಮುನಾನಗರದಲ್ಲಿ ನಡೆದ ತ್ರಿವಳಿ ಕೊಲೆ ಪ್ರಕರಣದಲ್ಲಿ ರಾಹುಲ್ ಪ್ರಮುಖ ಆರೋಪಿಯಾಗಿದ್ದಾನೆ ಎಂದೂ ಅವರು ತಿಳಿಸಿದ್ದಾರೆ.</p><p>ಹಿಂದಿಯ ಬಿಗ್ ಬಾಸ್ ಶೋನ ವಿಜೇತರಾಗಿರುವ ಫಾರೂಕಿ ಅವರು ಇನ್ಸ್ಟಾಗ್ರಾಂನಲ್ಲಿ 14.2 ಮಿಲಿಯನ್ ಫಾಲೋವರ್ಗಳನ್ನು ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>