<p><strong>ಮುಂಬೈ:</strong>ಬಿಹಾರದ ಮಂಗರ್ನಲ್ಲಿ ನಡೆದ ಗುಂಡಿನ ದಾಳಿಯು ಹಿಂದುತ್ವ ಮೇಲೆ ನಡೆದ ದಾಳಿಯಾಗಿದೆ. ಬಿಹಾರದ ಬಿಜೆಪಿ ರಾಜ್ಯಪಾಲರು ಏಕೆ ಈ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವುತ್ ಶುಕ್ರವಾರ ಪ್ರಶ್ನಿಸಿದರು.</p>.<p>ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಬಿಹಾರದ ಮಂಗರ್ನಲ್ಲಿ ದುರ್ಗಾ ದೇವಿ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ಭುಗಿಲೆದ್ದಿತು. ಇದಾದ ಬಳಿಕ ಪೊಲೀಸರು ಗುಂಡು ಹಾರಿಸಿದರು, ಇದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡರು. ಇದು ಹಿಂದುತ್ವದ ಮೇಲಿನ ದಾಳಿ' ಎಂದುಆರೋಪಿಸಿದರು.</p>.<p>ಒಂದು ವೇಳೆ ಮಹಾರಾಷ್ಟ್ರ ಅಥವಾ ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆ ಸಂಭವಿಸಿದ್ದರೆ ರಾಜ್ಯಪಾಲರು ಮತ್ತು ಬಿಜೆಪಿ ನಾಯಕರು ರಾಷ್ಟ್ರಪತಿಗಳ ಆಡಳಿತಕ್ಕೆ ಒತ್ತಾಯಿಸುತ್ತಿದ್ದರು. ಹಾಗಾದರೆ, ಘಟನೆಯ ಬಗ್ಗೆ ಬಿಹಾರ ರಾಜ್ಯಪಾಲರು ಮತ್ತು ಬಿಜೆಪಿ ನಾಯಕರು ಏಕೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ? ಎಂದು ಕಿಡಿಕಾರಿದರು.</p>.<p>ಮತದಾನ ನಡೆಯುತ್ತಿರುವ ಬಿಹಾರದ ಜಿಲ್ಲೆಯಲ್ಲಿ ನಡೆದ ಗಲಭೆ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮಂಗರ್ ಜಿಲ್ಲಾಧಿಕಾರಿ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ.</p>.<p>ಘಟನೆಯ ಬಗ್ಗೆ ಮಗಧ್ನ ವಿಭಾಗೀಯ ಆಯುಕ್ತ ಅಸಂಗ್ಬಾ ಚುಬಾ ಎಒ ಅವರು ಏಳು ದಿನಗಳೊಂದಿಗೆ ತನಿಖೆ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ. ಹೊಸ ಜಿಲ್ಲಾಧಿಕಾರಿ ಮತ್ತು ಎಸ್ಪಿ ಅವರನ್ನು ಇಂದು ಮಂಗರ್ನಲ್ಲಿ ನೇಮಿಸಲಾಗುವುದು.</p>.<p>ಘಟನೆ ಬಳಿಕ ದುಷ್ಕರ್ಮಿಗಳು ಮಂಗರ್ನ ಉಪ ವಿಭಾಗೀಯ ಅಧಿಕಾರಿ (ಎಸ್ಡಿಒ) ಮತ್ತು ಎಸ್ಪಿ ಕಚೇರಿಗೆ ಹಾನಿ ಮಾಡಿದ್ದು, ಹಲವಾರು ವಾಹನಗಳಿಗೆ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಗುರುವಾರ ಕಚೇರಿಗೂ ಹಾನಿಯಾಗಿದೆ.</p>.<p>ಅಕ್ಟೋಬರ್ 26 ರಂದು ದುರ್ಗಾದೇವಿ ವಿಗ್ರಹದ ವಿಸರ್ಜನಾ ಮೆರವಣಿಗೆ ನಡೆಸುತ್ತಿದ್ದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿ ಮೃತಪಟ್ಟಿದ್ದನ್ನು ಖಂಡಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ಮಂಗರ್ನ ಎಸ್ಪಿ ಮತ್ತು ಎಸ್ಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಬಿಹಾರದ ಮಂಗರ್ನಲ್ಲಿ ನಡೆದ ಗುಂಡಿನ ದಾಳಿಯು ಹಿಂದುತ್ವ ಮೇಲೆ ನಡೆದ ದಾಳಿಯಾಗಿದೆ. ಬಿಹಾರದ ಬಿಜೆಪಿ ರಾಜ್ಯಪಾಲರು ಏಕೆ ಈ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವುತ್ ಶುಕ್ರವಾರ ಪ್ರಶ್ನಿಸಿದರು.</p>.<p>ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಬಿಹಾರದ ಮಂಗರ್ನಲ್ಲಿ ದುರ್ಗಾ ದೇವಿ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ಭುಗಿಲೆದ್ದಿತು. ಇದಾದ ಬಳಿಕ ಪೊಲೀಸರು ಗುಂಡು ಹಾರಿಸಿದರು, ಇದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಮತ್ತು ಅನೇಕರು ಗಾಯಗೊಂಡರು. ಇದು ಹಿಂದುತ್ವದ ಮೇಲಿನ ದಾಳಿ' ಎಂದುಆರೋಪಿಸಿದರು.</p>.<p>ಒಂದು ವೇಳೆ ಮಹಾರಾಷ್ಟ್ರ ಅಥವಾ ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆ ಸಂಭವಿಸಿದ್ದರೆ ರಾಜ್ಯಪಾಲರು ಮತ್ತು ಬಿಜೆಪಿ ನಾಯಕರು ರಾಷ್ಟ್ರಪತಿಗಳ ಆಡಳಿತಕ್ಕೆ ಒತ್ತಾಯಿಸುತ್ತಿದ್ದರು. ಹಾಗಾದರೆ, ಘಟನೆಯ ಬಗ್ಗೆ ಬಿಹಾರ ರಾಜ್ಯಪಾಲರು ಮತ್ತು ಬಿಜೆಪಿ ನಾಯಕರು ಏಕೆ ಪ್ರಶ್ನೆಗಳನ್ನು ಎತ್ತುತ್ತಿಲ್ಲ? ಎಂದು ಕಿಡಿಕಾರಿದರು.</p>.<p>ಮತದಾನ ನಡೆಯುತ್ತಿರುವ ಬಿಹಾರದ ಜಿಲ್ಲೆಯಲ್ಲಿ ನಡೆದ ಗಲಭೆ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಮಂಗರ್ ಜಿಲ್ಲಾಧಿಕಾರಿ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ.</p>.<p>ಘಟನೆಯ ಬಗ್ಗೆ ಮಗಧ್ನ ವಿಭಾಗೀಯ ಆಯುಕ್ತ ಅಸಂಗ್ಬಾ ಚುಬಾ ಎಒ ಅವರು ಏಳು ದಿನಗಳೊಂದಿಗೆ ತನಿಖೆ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ. ಹೊಸ ಜಿಲ್ಲಾಧಿಕಾರಿ ಮತ್ತು ಎಸ್ಪಿ ಅವರನ್ನು ಇಂದು ಮಂಗರ್ನಲ್ಲಿ ನೇಮಿಸಲಾಗುವುದು.</p>.<p>ಘಟನೆ ಬಳಿಕ ದುಷ್ಕರ್ಮಿಗಳು ಮಂಗರ್ನ ಉಪ ವಿಭಾಗೀಯ ಅಧಿಕಾರಿ (ಎಸ್ಡಿಒ) ಮತ್ತು ಎಸ್ಪಿ ಕಚೇರಿಗೆ ಹಾನಿ ಮಾಡಿದ್ದು, ಹಲವಾರು ವಾಹನಗಳಿಗೆ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಗುರುವಾರ ಕಚೇರಿಗೂ ಹಾನಿಯಾಗಿದೆ.</p>.<p>ಅಕ್ಟೋಬರ್ 26 ರಂದು ದುರ್ಗಾದೇವಿ ವಿಗ್ರಹದ ವಿಸರ್ಜನಾ ಮೆರವಣಿಗೆ ನಡೆಸುತ್ತಿದ್ದ ವೇಳೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿ ಮೃತಪಟ್ಟಿದ್ದನ್ನು ಖಂಡಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ಮಂಗರ್ನ ಎಸ್ಪಿ ಮತ್ತು ಎಸ್ಡಿಒ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>