<p><strong>ತಿರುವನಂತಪುರ:</strong> 'ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ಹಾಗೂ ಶಬರಿಮಲೆ ಚಿನ್ನ ಕಳವು ಪ್ರಕರಣವು ಬಿಜೆಪಿಗೆ ಮತವಾಗಿ ಪರಿವರ್ತನೆಯಾಗಲು ನೆರವಾಯಿತು' ಎಂದು ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ. </p><p>ಕೇರಳಂ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದ ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ. </p><p>ಮುರಳೀಧರನ್ ಅವರು ಕಳಕೂಟ್ಟಂ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಗಳಿಸಿದ್ದಾರೆ. ನೇಮಂ ಹಾಗೂ ಚಾತನ್ನೂರ್ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಮೊಳಗಿಸಿದೆ. </p><p>ಕಳಕೂಟ್ಟಂ ಕ್ಷೇತ್ರದಲ್ಲಿ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಮುರಳೀಧರನ್, 'ಕಳೆದ 10 ವರ್ಷಗಳಲ್ಲಿ ಎಲ್ಡಿಎಫ್ ಸರ್ಕಾರ, ಕುಡಿಯುವ ನೀರು ಹಾಗೂ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿಲ್ಲ' ಎಂದು ಆರೋಪಿಸಿದ್ದಾರೆ. </p><p>'ಇಲ್ಲಿ ಟೆಕ್ನೋಪಾರ್ಕ್ ನೆಲೆಗೊಂಡಿರುವುದರಿಂದ ತಿರುವನಂತಪುರ ಅಭಿವೃದ್ಧಿ ಯೋಜನೆಯಲ್ಲಿ ಕಳಕೂಟ್ಟಂ ಸಹ ಸೇರಿಸಬೇಕು. ಆದರೆ ಇಲ್ಲಿಯವರೆಗೆ ಅಂತಹ ಯಾವುದೇ ಪ್ರಯತ್ನಗಳು ನಡೆದಿಲ್ಲ' ಎಂದು ಹೇಳಿದ್ದಾರೆ. </p><p>ಕಡಕಂಪಳ್ಳಿ ಸುರೇಂದ್ರನ್ ಅವರನ್ನು 428 ಮತಗಳ ಅಂತರದಿಂದ ಸೋಲಿಸಿ ಮುರಳೀಧರನ್ ಜಯ ಗಳಿಸಿದರು. 'ಕಡಕಂಪಳ್ಳಿ ದೇವಸ್ವಂ ಸಚಿವರಾಗಿದ್ದಾಗ ನಡೆದ ಶಬರಿಮಲೆ ಚಿನ್ನ ಕಳವು ಪ್ರಕರಣವು ಬಿಜೆಪಿಗೆ ಮತಗಳಾಗಿ ಪರಿವರ್ತನೆಯಾಯಿತು' ಎಂದು ಅವರು ತಿಳಿಸಿದ್ದಾರೆ. </p>.ಕೇರಳಂ: 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು.Election Results: ಕೇರಳಂನಲ್ಲಿ ಜೀವಸೆಲೆ, ಈಶಾನ್ಯದಲ್ಲಿ ಮಂಕಾದ ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> 'ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆ ಹಾಗೂ ಶಬರಿಮಲೆ ಚಿನ್ನ ಕಳವು ಪ್ರಕರಣವು ಬಿಜೆಪಿಗೆ ಮತವಾಗಿ ಪರಿವರ್ತನೆಯಾಗಲು ನೆರವಾಯಿತು' ಎಂದು ಮಾಜಿ ಕೇಂದ್ರ ಸಚಿವ ವಿ. ಮುರಳೀಧರನ್ ಮಂಗಳವಾರ ಪ್ರತಿಕ್ರಿಯಿಸಿದ್ದಾರೆ. </p><p>ಕೇರಳಂ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದ ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ. </p><p>ಮುರಳೀಧರನ್ ಅವರು ಕಳಕೂಟ್ಟಂ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಗಳಿಸಿದ್ದಾರೆ. ನೇಮಂ ಹಾಗೂ ಚಾತನ್ನೂರ್ ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಮೊಳಗಿಸಿದೆ. </p><p>ಕಳಕೂಟ್ಟಂ ಕ್ಷೇತ್ರದಲ್ಲಿ ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ ಮುರಳೀಧರನ್, 'ಕಳೆದ 10 ವರ್ಷಗಳಲ್ಲಿ ಎಲ್ಡಿಎಫ್ ಸರ್ಕಾರ, ಕುಡಿಯುವ ನೀರು ಹಾಗೂ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿಲ್ಲ' ಎಂದು ಆರೋಪಿಸಿದ್ದಾರೆ. </p><p>'ಇಲ್ಲಿ ಟೆಕ್ನೋಪಾರ್ಕ್ ನೆಲೆಗೊಂಡಿರುವುದರಿಂದ ತಿರುವನಂತಪುರ ಅಭಿವೃದ್ಧಿ ಯೋಜನೆಯಲ್ಲಿ ಕಳಕೂಟ್ಟಂ ಸಹ ಸೇರಿಸಬೇಕು. ಆದರೆ ಇಲ್ಲಿಯವರೆಗೆ ಅಂತಹ ಯಾವುದೇ ಪ್ರಯತ್ನಗಳು ನಡೆದಿಲ್ಲ' ಎಂದು ಹೇಳಿದ್ದಾರೆ. </p><p>ಕಡಕಂಪಳ್ಳಿ ಸುರೇಂದ್ರನ್ ಅವರನ್ನು 428 ಮತಗಳ ಅಂತರದಿಂದ ಸೋಲಿಸಿ ಮುರಳೀಧರನ್ ಜಯ ಗಳಿಸಿದರು. 'ಕಡಕಂಪಳ್ಳಿ ದೇವಸ್ವಂ ಸಚಿವರಾಗಿದ್ದಾಗ ನಡೆದ ಶಬರಿಮಲೆ ಚಿನ್ನ ಕಳವು ಪ್ರಕರಣವು ಬಿಜೆಪಿಗೆ ಮತಗಳಾಗಿ ಪರಿವರ್ತನೆಯಾಯಿತು' ಎಂದು ಅವರು ತಿಳಿಸಿದ್ದಾರೆ. </p>.ಕೇರಳಂ: 3 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು.Election Results: ಕೇರಳಂನಲ್ಲಿ ಜೀವಸೆಲೆ, ಈಶಾನ್ಯದಲ್ಲಿ ಮಂಕಾದ ಕಾಂಗ್ರೆಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>