<p><strong>ಹೈದರಾಬಾದ್:</strong> ‘ಕಾಲೇಶ್ವರಂ ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ’ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್, ಇತರರ ವಿರುದ್ಧ ದೂರು ನೀಡಿದ್ದ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ಇದು, ರಾಜಕೀಯ ವಾಕ್ಸಮರಕ್ಕೂ ಆಸ್ಪದವಾಗಿದೆ.</p>.<p>ದೂರು ನೀಡಿದ್ದ ಎನ್.ರಾಜಲಿಂಗಮೂರ್ತಿ (50) ಕೊಲೆಗೀಡಾದವರು. ಜಯಶಂಕರ ಭೂಪಲಪಲ್ಲಿ ಪಟ್ಟಣದಲ್ಲಿ ಬುಧವಾರ ಸಂಜೆ ಬೈಕ್ನಲ್ಲಿ ತೆರಳುತ್ತಿದ್ದ ಇವರನ್ನು ಅಡ್ಡಗಟ್ಟಿದ ಅಪರಿಚಿತರ ಗುಂಪು ಚಾಕುವಿನಿಂದ ಇರಿದು ಕೊಲೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಮೃತನ ಕುಟುಂಬದ ಸದಸ್ಯರು ಮತ್ತು ಆಡಳಿತರೂಢ ಕಾಂಗ್ರೆಸ್ ಪಕ್ಷವು, ಈ ಕೊಲೆಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಪಕ್ಷ ಕಾರಣ ಎಂದು ಆರೋಪಿಸಿವೆ. ಆದರೆ, ಬಿಆರ್ಎಸ್ ಈ ಆರೋಪವನ್ನು ಅಲ್ಲಗಳೆದಿದೆ.</p>.<p class="title">ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೆಲಂಗಾಣದ ಸಚಿವ ಕೋಮಟಿರೆಡ್ಡಿ ವೆಂಕಟರೆಡ್ಡಿ ಅವರು, ಬಿಆರ್ಎಸ್ ಪಕ್ಷವು ಕಳೆದ 10 ವರ್ಷಗಳ ಅವಧಿಯಲ್ಲಿ ಕೊಲೆ, ಅಪರಾಧ ಪ್ರವೃತ್ತಿಗೆ ಉತ್ತೇಜನ ನೀಡಿದೆ ಎಂದು ಆರೋಪಿಸಿದರು.</p>.<p>ಕೊಲೆ ಕೃತ್ಯದಲ್ಲಿ ಮಾಜಿ ಶಾಸಕ ಗಂದ್ರ ವೆಂಕಟರಮಣ ರೆಡ್ಡಿ ಅವರು ಸೇರಿದಂತೆ ಬಿಆರ್ಎಸ್ ನಾಯಕರ ಪಾತ್ರವಿದೆ ಎಂದು ಮೃತನ ಪತ್ನಿ ಹಾಗೂ ಕುಟುಂಬದ ಇತರ ಸದಸ್ಯರು ಆರೋಪಿಸಿದ್ದಾರೆ. ಭೂ ವಿವಾದದ ಸಂಬಂಧ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ‘ಕಾಲೇಶ್ವರಂ ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ’ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್, ಇತರರ ವಿರುದ್ಧ ದೂರು ನೀಡಿದ್ದ ವ್ಯಕ್ತಿಯೊಬ್ಬರ ಕೊಲೆಯಾಗಿದೆ. ಇದು, ರಾಜಕೀಯ ವಾಕ್ಸಮರಕ್ಕೂ ಆಸ್ಪದವಾಗಿದೆ.</p>.<p>ದೂರು ನೀಡಿದ್ದ ಎನ್.ರಾಜಲಿಂಗಮೂರ್ತಿ (50) ಕೊಲೆಗೀಡಾದವರು. ಜಯಶಂಕರ ಭೂಪಲಪಲ್ಲಿ ಪಟ್ಟಣದಲ್ಲಿ ಬುಧವಾರ ಸಂಜೆ ಬೈಕ್ನಲ್ಲಿ ತೆರಳುತ್ತಿದ್ದ ಇವರನ್ನು ಅಡ್ಡಗಟ್ಟಿದ ಅಪರಿಚಿತರ ಗುಂಪು ಚಾಕುವಿನಿಂದ ಇರಿದು ಕೊಲೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ಮೃತನ ಕುಟುಂಬದ ಸದಸ್ಯರು ಮತ್ತು ಆಡಳಿತರೂಢ ಕಾಂಗ್ರೆಸ್ ಪಕ್ಷವು, ಈ ಕೊಲೆಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಪಕ್ಷ ಕಾರಣ ಎಂದು ಆರೋಪಿಸಿವೆ. ಆದರೆ, ಬಿಆರ್ಎಸ್ ಈ ಆರೋಪವನ್ನು ಅಲ್ಲಗಳೆದಿದೆ.</p>.<p class="title">ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತೆಲಂಗಾಣದ ಸಚಿವ ಕೋಮಟಿರೆಡ್ಡಿ ವೆಂಕಟರೆಡ್ಡಿ ಅವರು, ಬಿಆರ್ಎಸ್ ಪಕ್ಷವು ಕಳೆದ 10 ವರ್ಷಗಳ ಅವಧಿಯಲ್ಲಿ ಕೊಲೆ, ಅಪರಾಧ ಪ್ರವೃತ್ತಿಗೆ ಉತ್ತೇಜನ ನೀಡಿದೆ ಎಂದು ಆರೋಪಿಸಿದರು.</p>.<p>ಕೊಲೆ ಕೃತ್ಯದಲ್ಲಿ ಮಾಜಿ ಶಾಸಕ ಗಂದ್ರ ವೆಂಕಟರಮಣ ರೆಡ್ಡಿ ಅವರು ಸೇರಿದಂತೆ ಬಿಆರ್ಎಸ್ ನಾಯಕರ ಪಾತ್ರವಿದೆ ಎಂದು ಮೃತನ ಪತ್ನಿ ಹಾಗೂ ಕುಟುಂಬದ ಇತರ ಸದಸ್ಯರು ಆರೋಪಿಸಿದ್ದಾರೆ. ಭೂ ವಿವಾದದ ಸಂಬಂಧ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>