<p><strong>ಕೋಲ್ಕತ್ತ:</strong> ಒಡಿಶಾ ಮೂಲದ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿಸುವುದಾಗಿ ಬಿಜೆಪಿಯು ಮೊದಲೇ ಹೇಳಿದಿದ್ದರೆ ಬೆಂಬಲಿಸುವ ಬಗ್ಗೆ ಯೋಚಿಸುತ್ತಿದ್ದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತ್ಯಂತರಗಳು ಮುರ್ಮು ಅವರ ಗೆಲುವಿನ ಸಾಧ್ಯತೆಯನ್ನು ಮತ್ತಷ್ಟು ಸುಲಭವಾಗಿಸಿವೆ. ಎನ್ಡಿಎಯ ಸಂಖ್ಯೆಯು ಹೆಚ್ಚಾಗಿದೆ ಎಂದು ಬ್ಯಾನರ್ಜಿ ಹೇಳಿದರು. ‘ಒಮ್ಮತದ ಅಭ್ಯರ್ಥಿಯು ದೇಶಕ್ಕೆ ಯಾವಾಗಲೂ ಹಿತ’ ಎಂದೂ ಅವರು ಇದೇ ವೇಳೆ ಹೇಳಿದರು.</p>.<p>‘ರಾಷ್ಟ್ರಪತಿ ಸ್ಥಾನಕ್ಕೆ ಮುರ್ಮು ಹೆಸರನ್ನು ಘೋಷಿಸುವ ಮೊದಲು ಬಿಜೆಪಿ ನಮ್ಮ ಸಲಹೆಯನ್ನು ಕೇಳಿದ್ದರೆ, ನಾವು ಅದನ್ನು ಪರಿಗಣಿಸಬಹುದಿತ್ತು. ಈಗ ವಿರೋಧ ಪಕ್ಷಗಳು ಏನು ತೀರ್ಮಾನಿಸುತ್ತವೆಯೋ ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ’ ಎಂದು ಮಮತಾ ಅವರು ತಿಳಿಸಿದರು.</p>.<p>ಕಾಂಗ್ರೆಸ್, ಟಿಎಂಸಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳು ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಘೋಷಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಒಡಿಶಾ ಮೂಲದ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿಸುವುದಾಗಿ ಬಿಜೆಪಿಯು ಮೊದಲೇ ಹೇಳಿದಿದ್ದರೆ ಬೆಂಬಲಿಸುವ ಬಗ್ಗೆ ಯೋಚಿಸುತ್ತಿದ್ದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.</p>.<p>ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತ್ಯಂತರಗಳು ಮುರ್ಮು ಅವರ ಗೆಲುವಿನ ಸಾಧ್ಯತೆಯನ್ನು ಮತ್ತಷ್ಟು ಸುಲಭವಾಗಿಸಿವೆ. ಎನ್ಡಿಎಯ ಸಂಖ್ಯೆಯು ಹೆಚ್ಚಾಗಿದೆ ಎಂದು ಬ್ಯಾನರ್ಜಿ ಹೇಳಿದರು. ‘ಒಮ್ಮತದ ಅಭ್ಯರ್ಥಿಯು ದೇಶಕ್ಕೆ ಯಾವಾಗಲೂ ಹಿತ’ ಎಂದೂ ಅವರು ಇದೇ ವೇಳೆ ಹೇಳಿದರು.</p>.<p>‘ರಾಷ್ಟ್ರಪತಿ ಸ್ಥಾನಕ್ಕೆ ಮುರ್ಮು ಹೆಸರನ್ನು ಘೋಷಿಸುವ ಮೊದಲು ಬಿಜೆಪಿ ನಮ್ಮ ಸಲಹೆಯನ್ನು ಕೇಳಿದ್ದರೆ, ನಾವು ಅದನ್ನು ಪರಿಗಣಿಸಬಹುದಿತ್ತು. ಈಗ ವಿರೋಧ ಪಕ್ಷಗಳು ಏನು ತೀರ್ಮಾನಿಸುತ್ತವೆಯೋ ಅದಕ್ಕೆ ತಕ್ಕಂತೆ ನಡೆದುಕೊಳ್ಳುತ್ತೇನೆ’ ಎಂದು ಮಮತಾ ಅವರು ತಿಳಿಸಿದರು.</p>.<p>ಕಾಂಗ್ರೆಸ್, ಟಿಎಂಸಿ ಸೇರಿದಂತೆ ಬಿಜೆಪಿಯೇತರ ಪಕ್ಷಗಳು ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಚುನಾವಣೆಗೆ ಜಂಟಿ ಅಭ್ಯರ್ಥಿಯಾಗಿ ಘೋಷಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>