<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿದ್ದ ಕೋಮುಗಲಭೆ ಕುರಿತಂತೆ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ‘ಮೂಲಭೂತವಾದಿತನ ಮತ್ತು ತೀವ್ರಗಾಮಿತನ ಎಂಬ ಪಿಡುಗುಗಳು ರಾಜ್ಯವನ್ನು ತೀವ್ರವಾಗಿ ಕಾಡುತ್ತಿವೆ’ ಎಂದು ಉಲ್ಲೇಖಿಸಿದ್ದಾರೆ. </p>.<p>ಕೋಮುಗಲಭೆ ತನಿಖೆಗೆ ಆಯೋಗ ರಚಿಸಬೇಕು, ಬಾಂಗ್ಲಾದ ಗಡಿ ಜಿಲ್ಲೆಗಳಲ್ಲಿ ಕೇಂದ್ರ ಪಡೆಗಳ ಉಪಠಾಣೆ ಸ್ಥಾಪಿಸಬೇಕು ಎಂದು ಸಲಹೆ ಮಾಡಿದ್ದಾರೆ. ಅಲ್ಲದೆ, ‘ಸಂವಿಧಾನದ ವಿಧಿ 356ರ ಜಾರಿ ಆಯ್ಕೆಯೂ ಮುಕ್ತವಾಗಿರಬೇಕು’ ಎಂದಿದ್ದಾರೆ.</p>.<p>ವರದಿಯಲ್ಲಿ ಸಂವಿಧಾನದ ವಿಧಿ 356ರ ಉಲ್ಲೇಖ ಕುರಿತ ಪ್ರಶ್ನೆಗೆ ಅಧಿಕಾರಿಯೊಬ್ಬರು, ‘ವಿಧಿ 356ರ ಪ್ರಕಾರ ಕೇಂದ್ರದ ಕ್ರಮಕ್ಕೆ (ರಾಷ್ಟ್ರಪತಿ ಆಡಳಿತ) ಮುಂದಾಗಬೇಕು ಎಂದು ರಾಜ್ಯಪಾಲರು ಹೇಳಿಲ್ಲ. ಆದರೆ, ರಾಜ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ ಆ ಆಯ್ಕೆಯನ್ನು ಕೇಂದ್ರ ಮುಕ್ತವಾಗಿ ಇರಿಸಿಕೊಂಡಿರಬೇಕು’ ಎಂಬುದು ಇದರ ಉದ್ದೇಶ’ ಎಂದು ಉತ್ತರಿಸಿದ್ದಾರೆ. </p>.<p>ಸಂವಿಧಾನದ ವಿಧಿ 356 ರಾಜ್ಯಗಳಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವುದಕ್ಕೆ ಸಂಬಂಧಿಸಿದ್ದಾಗಿದೆ.</p>.<p>ಮುರ್ಶಿದಾಬಾದ್ನಲ್ಲಿ ಕಂಡುಬಂದ ಗಲಭೆ ಇತರೆ ಜಿಲ್ಲೆಗಳಿಗೂ ಹರಡಿದ್ದಕ್ಕೆ ಕಳವಳ ವ್ಯಕ್ತಪಡಿಸಿರುವ ರಾಜ್ಯಪಾಲರು, ‘ಕಾನೂನು ಸುವ್ಯವಸ್ಥೆ ವಿಷಯದಲ್ಲಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ, ವಸ್ತುಸ್ಥಿತಿಯನ್ನು ಪರಿಶೀಲಿಸುವ ಸಂವಿಧಾನದ ಇತರೆ ಆಯ್ಕೆಗಳನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕು’ ಎಂದು ಶಿಫಾರಸು ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿದ್ದ ಕೋಮುಗಲಭೆ ಕುರಿತಂತೆ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ‘ಮೂಲಭೂತವಾದಿತನ ಮತ್ತು ತೀವ್ರಗಾಮಿತನ ಎಂಬ ಪಿಡುಗುಗಳು ರಾಜ್ಯವನ್ನು ತೀವ್ರವಾಗಿ ಕಾಡುತ್ತಿವೆ’ ಎಂದು ಉಲ್ಲೇಖಿಸಿದ್ದಾರೆ. </p>.<p>ಕೋಮುಗಲಭೆ ತನಿಖೆಗೆ ಆಯೋಗ ರಚಿಸಬೇಕು, ಬಾಂಗ್ಲಾದ ಗಡಿ ಜಿಲ್ಲೆಗಳಲ್ಲಿ ಕೇಂದ್ರ ಪಡೆಗಳ ಉಪಠಾಣೆ ಸ್ಥಾಪಿಸಬೇಕು ಎಂದು ಸಲಹೆ ಮಾಡಿದ್ದಾರೆ. ಅಲ್ಲದೆ, ‘ಸಂವಿಧಾನದ ವಿಧಿ 356ರ ಜಾರಿ ಆಯ್ಕೆಯೂ ಮುಕ್ತವಾಗಿರಬೇಕು’ ಎಂದಿದ್ದಾರೆ.</p>.<p>ವರದಿಯಲ್ಲಿ ಸಂವಿಧಾನದ ವಿಧಿ 356ರ ಉಲ್ಲೇಖ ಕುರಿತ ಪ್ರಶ್ನೆಗೆ ಅಧಿಕಾರಿಯೊಬ್ಬರು, ‘ವಿಧಿ 356ರ ಪ್ರಕಾರ ಕೇಂದ್ರದ ಕ್ರಮಕ್ಕೆ (ರಾಷ್ಟ್ರಪತಿ ಆಡಳಿತ) ಮುಂದಾಗಬೇಕು ಎಂದು ರಾಜ್ಯಪಾಲರು ಹೇಳಿಲ್ಲ. ಆದರೆ, ರಾಜ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟರೆ ಆ ಆಯ್ಕೆಯನ್ನು ಕೇಂದ್ರ ಮುಕ್ತವಾಗಿ ಇರಿಸಿಕೊಂಡಿರಬೇಕು’ ಎಂಬುದು ಇದರ ಉದ್ದೇಶ’ ಎಂದು ಉತ್ತರಿಸಿದ್ದಾರೆ. </p>.<p>ಸಂವಿಧಾನದ ವಿಧಿ 356 ರಾಜ್ಯಗಳಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವುದಕ್ಕೆ ಸಂಬಂಧಿಸಿದ್ದಾಗಿದೆ.</p>.<p>ಮುರ್ಶಿದಾಬಾದ್ನಲ್ಲಿ ಕಂಡುಬಂದ ಗಲಭೆ ಇತರೆ ಜಿಲ್ಲೆಗಳಿಗೂ ಹರಡಿದ್ದಕ್ಕೆ ಕಳವಳ ವ್ಯಕ್ತಪಡಿಸಿರುವ ರಾಜ್ಯಪಾಲರು, ‘ಕಾನೂನು ಸುವ್ಯವಸ್ಥೆ ವಿಷಯದಲ್ಲಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದರ ಜೊತೆಗೆ, ವಸ್ತುಸ್ಥಿತಿಯನ್ನು ಪರಿಶೀಲಿಸುವ ಸಂವಿಧಾನದ ಇತರೆ ಆಯ್ಕೆಗಳನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕು’ ಎಂದು ಶಿಫಾರಸು ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>