<p><strong>ತಿರುವನಂತಪುರ</strong>: ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಪ್ಯಾಲೆಸ್ಟೀನ್ ಪರ ಕಾರ್ಯಕ್ರಮದಿಂದ ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಶಶಿ ತರೂರ್ ಅವರನ್ನು ತೆಗೆದುಹಾಕಲು ಮುಸ್ಲಿಂ ಸಂಘಟನೆ ‘ಮಹಲ್ ಎಂಪವರ್ಮೆಂಟ್ ಮಿಷನ್’(ಎಂಇಎಂ) ನಿರ್ಧರಿಸಿದೆ.</p><p>ಅಕ್ಟೋಬರ್ 30ರಂದು ತಿರುವನಂತಪುರದಲ್ಲಿ ಕಾರ್ಯಕ್ರಮ ನಡೆಸಲು ಎಂಇಎಂ ಯೋಜಿಸಿದೆ. </p><p>‘ಈ ಬಗ್ಗೆ ತರೂರ್ ಅವರಲ್ಲಿ ಸಮಾಲೋಚನೆ ನಡೆಸಿದ್ದು, ಕಾರ್ಯಕ್ರಮದಿಂದ ಅವರನ್ನು ತೆಗೆದುಹಾಕಲು ನಿರ್ಧರಿಸಿದ್ದೇವೆ’ ಎಂದು ಎಂಇಎಂ ಸಂಘಟನೆ ತಿಳಿಸಿದೆ.</p><p><strong>ಏನಿದು ವಿವಾದ?</strong></p><p>ಕೋಯಿಕ್ಕೋಡ್ನಲ್ಲಿ ಗುರುವಾರ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಶಶಿ ತರೂರ್, ‘ಹಮಾಸ್ನ ಭಯೋತ್ಪಾದನಾ ದಾಳಿಗೆ ಇಸ್ರೇಲ್ ಪ್ರತಿಕ್ರಿಯೆ ಸೂಕ್ತವಾಗಿಲ್ಲ’ ಎಂದು ಹೇಳಿದ್ದರು. </p><p>ಹೇಳಿಕೆ ಬೆನ್ನಲ್ಲೇ ತರೂರ್ ಅವರು ಹಮಾಸ್ ಸಂಘಟನೆಯನ್ನು ಭಯೋತ್ಪಾದನೆ ಸಂಘಟನೆ ಎಂದು ಕರೆದಿದ್ದಾರೆ ಎಂದು ಸಿಪಿಎಂ ಸೇರಿದಂತೆ ಹಲವು ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. </p><p>ತಮ್ಮ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಿರುವ ತರೂರ್, ‘ನಾನು ಪಾಲೆಸ್ಟೀನ್ ಜನರ ಪರ ನಿಂತಿದ್ದು, ಇಸ್ರೇಲ್ ಅನ್ನು ತಾವು ಬೆಂಬಲಿಸಿದ್ದಾಗಿ ದಾರಿತಪ್ಪಿಸುವಂತಹ ಹೇಳಿಕೆಗಳು ಬಂದಿವೆ. ಇದು ಸರಿಯಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಪ್ಯಾಲೆಸ್ಟೀನ್ ಪರ ಕಾರ್ಯಕ್ರಮದಿಂದ ಹಿರಿಯ ಕಾಂಗ್ರೆಸ್ ನಾಯಕ, ಸಂಸದ ಶಶಿ ತರೂರ್ ಅವರನ್ನು ತೆಗೆದುಹಾಕಲು ಮುಸ್ಲಿಂ ಸಂಘಟನೆ ‘ಮಹಲ್ ಎಂಪವರ್ಮೆಂಟ್ ಮಿಷನ್’(ಎಂಇಎಂ) ನಿರ್ಧರಿಸಿದೆ.</p><p>ಅಕ್ಟೋಬರ್ 30ರಂದು ತಿರುವನಂತಪುರದಲ್ಲಿ ಕಾರ್ಯಕ್ರಮ ನಡೆಸಲು ಎಂಇಎಂ ಯೋಜಿಸಿದೆ. </p><p>‘ಈ ಬಗ್ಗೆ ತರೂರ್ ಅವರಲ್ಲಿ ಸಮಾಲೋಚನೆ ನಡೆಸಿದ್ದು, ಕಾರ್ಯಕ್ರಮದಿಂದ ಅವರನ್ನು ತೆಗೆದುಹಾಕಲು ನಿರ್ಧರಿಸಿದ್ದೇವೆ’ ಎಂದು ಎಂಇಎಂ ಸಂಘಟನೆ ತಿಳಿಸಿದೆ.</p><p><strong>ಏನಿದು ವಿವಾದ?</strong></p><p>ಕೋಯಿಕ್ಕೋಡ್ನಲ್ಲಿ ಗುರುವಾರ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಶಶಿ ತರೂರ್, ‘ಹಮಾಸ್ನ ಭಯೋತ್ಪಾದನಾ ದಾಳಿಗೆ ಇಸ್ರೇಲ್ ಪ್ರತಿಕ್ರಿಯೆ ಸೂಕ್ತವಾಗಿಲ್ಲ’ ಎಂದು ಹೇಳಿದ್ದರು. </p><p>ಹೇಳಿಕೆ ಬೆನ್ನಲ್ಲೇ ತರೂರ್ ಅವರು ಹಮಾಸ್ ಸಂಘಟನೆಯನ್ನು ಭಯೋತ್ಪಾದನೆ ಸಂಘಟನೆ ಎಂದು ಕರೆದಿದ್ದಾರೆ ಎಂದು ಸಿಪಿಎಂ ಸೇರಿದಂತೆ ಹಲವು ಮುಸ್ಲಿಂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. </p><p>ತಮ್ಮ ಹೇಳಿಕೆ ಸಂಬಂಧ ಸ್ಪಷ್ಟನೆ ನೀಡಿರುವ ತರೂರ್, ‘ನಾನು ಪಾಲೆಸ್ಟೀನ್ ಜನರ ಪರ ನಿಂತಿದ್ದು, ಇಸ್ರೇಲ್ ಅನ್ನು ತಾವು ಬೆಂಬಲಿಸಿದ್ದಾಗಿ ದಾರಿತಪ್ಪಿಸುವಂತಹ ಹೇಳಿಕೆಗಳು ಬಂದಿವೆ. ಇದು ಸರಿಯಲ್ಲ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>