ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣತಿಯೇ ಆಗದೆ ಹಿಂದೂ–ಮುಸ್ಲಿಮರ ಪ್ರಮಾಣ ನಿರ್ಧರಿಸಿದ್ದು ಹೇಗೆ?: ತೇಜಸ್ವಿ ಯಾದವ್

Published 9 ಮೇ 2024, 13:34 IST
Last Updated 9 ಮೇ 2024, 13:34 IST
ಅಕ್ಷರ ಗಾತ್ರ

‘ಪ್ರಧಾನಮಂತ್ರಿಯವರಿಗೆ ಆರ್ಥಿಕ ಸಲಹೆ ನೀಡುವ ಮಂಡಳಿಯು ದೇಶದಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಿದೆ ಎಂದು ವರದಿ ನೀಡಿದ್ದನ್ನು ಬಿಜೆಪಿಯು ಚರ್ಚೆಯ ವಿಷಯವನ್ನಾಗಿಸಿದೆ. ಆದರೆ, ದೇಶದಲ್ಲಿ 2011ರ ನಂತರ, ಜನಗಣತಿಯೇ ಆಗಿಲ್ಲ. ಗಣತಿಯೇ ಆಗದೆ ದೇಶದಲ್ಲಿ ಹಿಂದೂ–ಮುಸ್ಲಿಮರ ಜನಸಂಖ್ಯೆ ಬಗ್ಗೆ ಕೇಂದ್ರ ಸರ್ಕಾರ ಹೇಗೆ ತನ್ನ ನಿರ್ಧಾರ ಪ್ರಕಟಿಸುತ್ತೆ’ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಪ್ರಶ್ನಿಸಿದ್ದಾರೆ. ‘ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂಬ ವರದಿ ನೀಡುವ ಮೂಲಕ ಚುನಾವಣೆ ಸಂದರ್ಭದಲ್ಲಿ ಈ ಎರಡು ಸಮುದಾಯಗಳ ನಡುವೆ ಬಿರುಕು ಮೂಡಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ’ ಎಂದು ಅವರು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT