<p><strong>ಹೈದರಾಬಾದ್</strong>: ಹಿಂದುಳಿದ ವರ್ಗಗಳಿಗೆ ಶೇಕಡ 42ರಷ್ಟು ಮೀಸಲಾತಿಗೆ ಆಗ್ರಹಿಸಿ ತೆಲಂಗಾಣ ಜಾಗೃತಿ ಮುಖ್ಯಸ್ಥೆ ಮತ್ತು ವಿಧಾನ ಪರಿಷತ್ ಸದಸ್ಯೆ ಕೆ.ಕವಿತಾ ಅವರು ಸೋಮವಾರದಿಂದ 72 ಗಂಟೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.</p><p>ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗಗಳೊಂದಿಗೆ ಸೇರ್ಪಡೆ ಮಾಡದೆ ಅವರಿಗೆ ಪ್ರತ್ಯೇಕವಾಗಿ ಶೇ 10ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.</p>.ಉತ್ತರ ಪ್ರದೇಶದ 13 ಜಿಲ್ಲೆಗಳಲ್ಲಿ ಪ್ರವಾಹ: 11 ಸಾವು .ಸ್ಕಾಟ್ಲೆಂಡ್ನಲ್ಲಿ ಬಿರುಗಾಳಿ ಸಹಿತ ಮಳೆ: ರೈಲು ಸಂಚಾರ ರದ್ದು. <p>ಹಿಂದುಳಿದ ವರ್ಗಗಳ ಮೀಸಲಾತಿಗಾಗಿ ‘ತೆಲಂಗಾಣ ಜಾಗೃತಿ’ಯು ಸಾಕಷ್ಟು ಹೋರಾಟ ನಡೆಸಿದೆ. ರಾಜ್ಯ ಸ್ಥಾನಮಾನ ಪಡೆದ ಬಳಿಕ ಸಾಕಷ್ಟು ಸಾಧಿಸಿದ್ದೇವೆ, ಪ್ರತಿಯೊಬ್ಬ ನಾಗರಿಕರಿಗೂ ಅವರ ಪಾಲಿನದ್ದು ಸಿಗಬೇಕು ಎಂದು ಹೇಳಿದರು.</p><p>‘ತೆಲಂಗಾಣ ಜಾಗೃತಿ ಸಮಿತಿ ಹೋರಾಟದ ಫಲವಾಗಿ ಹಿಂದುಳಿದ ವರ್ಗಗಳ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನವನ್ನು ಮಹಿಳಾ ಶಿಕ್ಷಕರ ದಿನ ಎಂದು ಘೋಷಿಸಲಾಗಿದೆ’ ಎಂದರು.</p><p>ಹಿಂದುಳಿದ ವರ್ಗಗಳ (ಬಿ.ಸಿ) ಮೀಸಲಾತಿಯನ್ನು ಶೇ 42ಕ್ಕೆ ಏರಿಸುವ ಮತ್ತು ಪರಿಶಿಷ್ಟ ಜಾತಿಯ (ಎಸ್ಸಿ) ಉಪವರ್ಗೀಕರಣಕ್ಕೆ ಸಂಬಂಧಿಸಿದ ಎರಡು ಮಹತ್ವದ ಮಸೂದೆಗಳಿಗೆ ತೆಲಂಗಾಣ ವಿಧಾನಸಭೆ ಮಾರ್ಚ್ನಲ್ಲಿ ಅಂಗೀಕಾರ ನೀಡಿತ್ತು.</p>.ಮೋದಿ ಸರ್ಕಾರದ ಅವಧಿಯಲ್ಲಿ 17 ಕೋಟಿ ಉದ್ಯೋಗ ಸೃಷ್ಟಿ: ಸಚಿವ ಮಾಂಡವಿಯಾ.Russia Ukraine War | ರಷ್ಯಾ ತೈಲ ಸಂಗ್ರಹಾಗಾರದ ಮೇಲೆ ಉಕ್ರೇನ್ ಡ್ರೋನ್ ದಾಳಿ. <p>ಸರ್ಕಾರ ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಮಸೂದೆಗಳಿಗೆ ರಾಷ್ಟ್ರಪತಿಗಳ ಅನುಮೋದನೆ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ಇತರೆ ಕಾಂಗ್ರೆಸ್ ನಾಯಕರು ಆಗಸ್ಟ್ 6ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ನಡೆಸಲು ಮುಂದಾಗಿದ್ದಾರೆ ಎಂದು ಕವಿತಾ ತಿಳಿಸಿದ್ದಾರೆ. </p>.KRS ಹೆಸರು ಬದಲಿಸಲು ಮಹದೇವಪ್ಪ ನೇತೃತ್ವದಲ್ಲಿ ಹುನ್ನಾರ: ಆರ್. ಅಶೋಕ.ಲೋಕಸಭೆಯಲ್ಲಿ ಟಿಎಂಸಿ ನಾಯಕನಾಗಿ ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನೇಮಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಹಿಂದುಳಿದ ವರ್ಗಗಳಿಗೆ ಶೇಕಡ 42ರಷ್ಟು ಮೀಸಲಾತಿಗೆ ಆಗ್ರಹಿಸಿ ತೆಲಂಗಾಣ ಜಾಗೃತಿ ಮುಖ್ಯಸ್ಥೆ ಮತ್ತು ವಿಧಾನ ಪರಿಷತ್ ಸದಸ್ಯೆ ಕೆ.ಕವಿತಾ ಅವರು ಸೋಮವಾರದಿಂದ 72 ಗಂಟೆ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.</p><p>ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗಗಳೊಂದಿಗೆ ಸೇರ್ಪಡೆ ಮಾಡದೆ ಅವರಿಗೆ ಪ್ರತ್ಯೇಕವಾಗಿ ಶೇ 10ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.</p>.ಉತ್ತರ ಪ್ರದೇಶದ 13 ಜಿಲ್ಲೆಗಳಲ್ಲಿ ಪ್ರವಾಹ: 11 ಸಾವು .ಸ್ಕಾಟ್ಲೆಂಡ್ನಲ್ಲಿ ಬಿರುಗಾಳಿ ಸಹಿತ ಮಳೆ: ರೈಲು ಸಂಚಾರ ರದ್ದು. <p>ಹಿಂದುಳಿದ ವರ್ಗಗಳ ಮೀಸಲಾತಿಗಾಗಿ ‘ತೆಲಂಗಾಣ ಜಾಗೃತಿ’ಯು ಸಾಕಷ್ಟು ಹೋರಾಟ ನಡೆಸಿದೆ. ರಾಜ್ಯ ಸ್ಥಾನಮಾನ ಪಡೆದ ಬಳಿಕ ಸಾಕಷ್ಟು ಸಾಧಿಸಿದ್ದೇವೆ, ಪ್ರತಿಯೊಬ್ಬ ನಾಗರಿಕರಿಗೂ ಅವರ ಪಾಲಿನದ್ದು ಸಿಗಬೇಕು ಎಂದು ಹೇಳಿದರು.</p><p>‘ತೆಲಂಗಾಣ ಜಾಗೃತಿ ಸಮಿತಿ ಹೋರಾಟದ ಫಲವಾಗಿ ಹಿಂದುಳಿದ ವರ್ಗಗಳ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಸಾವಿತ್ರಿ ಬಾಯಿ ಫುಲೆ ಅವರ ಜನ್ಮದಿನವನ್ನು ಮಹಿಳಾ ಶಿಕ್ಷಕರ ದಿನ ಎಂದು ಘೋಷಿಸಲಾಗಿದೆ’ ಎಂದರು.</p><p>ಹಿಂದುಳಿದ ವರ್ಗಗಳ (ಬಿ.ಸಿ) ಮೀಸಲಾತಿಯನ್ನು ಶೇ 42ಕ್ಕೆ ಏರಿಸುವ ಮತ್ತು ಪರಿಶಿಷ್ಟ ಜಾತಿಯ (ಎಸ್ಸಿ) ಉಪವರ್ಗೀಕರಣಕ್ಕೆ ಸಂಬಂಧಿಸಿದ ಎರಡು ಮಹತ್ವದ ಮಸೂದೆಗಳಿಗೆ ತೆಲಂಗಾಣ ವಿಧಾನಸಭೆ ಮಾರ್ಚ್ನಲ್ಲಿ ಅಂಗೀಕಾರ ನೀಡಿತ್ತು.</p>.ಮೋದಿ ಸರ್ಕಾರದ ಅವಧಿಯಲ್ಲಿ 17 ಕೋಟಿ ಉದ್ಯೋಗ ಸೃಷ್ಟಿ: ಸಚಿವ ಮಾಂಡವಿಯಾ.Russia Ukraine War | ರಷ್ಯಾ ತೈಲ ಸಂಗ್ರಹಾಗಾರದ ಮೇಲೆ ಉಕ್ರೇನ್ ಡ್ರೋನ್ ದಾಳಿ. <p>ಸರ್ಕಾರ ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿದೆ. ಹಿಂದುಳಿದ ವರ್ಗಗಳ ಮೀಸಲಾತಿ ಮಸೂದೆಗಳಿಗೆ ರಾಷ್ಟ್ರಪತಿಗಳ ಅನುಮೋದನೆ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ಇತರೆ ಕಾಂಗ್ರೆಸ್ ನಾಯಕರು ಆಗಸ್ಟ್ 6ರಂದು ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ನಡೆಸಲು ಮುಂದಾಗಿದ್ದಾರೆ ಎಂದು ಕವಿತಾ ತಿಳಿಸಿದ್ದಾರೆ. </p>.KRS ಹೆಸರು ಬದಲಿಸಲು ಮಹದೇವಪ್ಪ ನೇತೃತ್ವದಲ್ಲಿ ಹುನ್ನಾರ: ಆರ್. ಅಶೋಕ.ಲೋಕಸಭೆಯಲ್ಲಿ ಟಿಎಂಸಿ ನಾಯಕನಾಗಿ ಮಮತಾ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ನೇಮಕ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>