<p><strong>ಲಖನೌ: </strong>ಉತ್ತರ ಪ್ರದೇಶದ ಬಿಜೆಪಿ ಸರ್ಕಾರವುಉದ್ದೇಶಪೂರ್ವಕವಾಗಿ ಮುಸ್ಲಿಮರನ್ನೂ ಗುರಿಯಾಗಿಸಿ, ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಆರೋಪಿಸಿದ್ದಾರೆ.</p>.<p>ರಾಜ್ಯದ ವಿವಿಧೆಡೆ ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳನ್ನು ಹಾಳುಗೆಡವಿರುವ ಪ್ರಕರಣಗಳ ಬಗ್ಗೆ ಪ್ರಸ್ತಾಪಿಸಿರುವ ಅವರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಹಿಂದೆ ರಾಜ್ಯದಲ್ಲಿ ಸಮಾಜವಾದಿ ಪಕ್ಷ ಆಡಳಿತದಲ್ಲಿದ್ದಾಗ, ಬ್ರಾಹ್ಮಣರು ಮತ್ತು ದಲಿತರು ದಬ್ಬಾಳಿಕೆಗೆ ಒಳಗಾಗಿದ್ದರು. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ, ಆ ಎರಡು ಸಮುದಾಯದವರ ಜತೆಗೆ, ಮುಸ್ಲಿಂ ಸಮುದಾಯದವರನ್ನು ಗುರಿಯಾಗಿಸಲಾಗುತ್ತಿದೆ. ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಇದು ದುರಾದೃಷ್ಟಕರ ವಿಚಾರ’ ಎಂದು ಮಾಯಾವತಿ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.</p>.<p>‘ಸಮಾಜವಾದಿ ಪಕ್ಷ ಆಡಳಿತದ ಅವಧಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಧಕ್ಕೆ ಉಂಟು ಮಾಡಲಾಯಿತು ಮತ್ತು ಜಿಲ್ಲೆ ಮತ್ತು ಕೆಲವೊಂದು ಸಂಸ್ಥೆಗಳ ಹೆಸರನ್ನೇ ಬದಲಿಸಿದರು. ಅದೇ ರೀತಿಯ ಕೆಲಸಗಳು ಬಿಜೆಪಿ ಆಡಳಿತದಲ್ಲೂ ಮುಂದುವರಿದಿದೆ’ ಎಂದು ಅವರು ಟೀಕಿಸಿದ್ದಾರೆ.</p>.<p>‘ಮೊದಲು ವಾರಾಣಸಿಯಲ್ಲಿಅಂಬೇಡ್ಕರ್ ಪ್ರತಿಮೆಗೆ ಹಾನಿಮಾಡಲಾಗಿತ್ತು. ಈಗ ಅಂಥದ್ದೇ ಘಟನೆ ಜೌನ್ಪುರದಲ್ಲೂ ನಡೆದಿದೆ. ಇದು ಖಂಡನೀಯ. ಸರ್ಕಾರ ಇಂಥ ಪ್ರಕರಣಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶದ ಬಿಜೆಪಿ ಸರ್ಕಾರವುಉದ್ದೇಶಪೂರ್ವಕವಾಗಿ ಮುಸ್ಲಿಮರನ್ನೂ ಗುರಿಯಾಗಿಸಿ, ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಬಹುಜನ ಸಮಾಜವಾದಿ ಪಕ್ಷದ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಆರೋಪಿಸಿದ್ದಾರೆ.</p>.<p>ರಾಜ್ಯದ ವಿವಿಧೆಡೆ ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳನ್ನು ಹಾಳುಗೆಡವಿರುವ ಪ್ರಕರಣಗಳ ಬಗ್ಗೆ ಪ್ರಸ್ತಾಪಿಸಿರುವ ಅವರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಹಿಂದೆ ರಾಜ್ಯದಲ್ಲಿ ಸಮಾಜವಾದಿ ಪಕ್ಷ ಆಡಳಿತದಲ್ಲಿದ್ದಾಗ, ಬ್ರಾಹ್ಮಣರು ಮತ್ತು ದಲಿತರು ದಬ್ಬಾಳಿಕೆಗೆ ಒಳಗಾಗಿದ್ದರು. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ, ಆ ಎರಡು ಸಮುದಾಯದವರ ಜತೆಗೆ, ಮುಸ್ಲಿಂ ಸಮುದಾಯದವರನ್ನು ಗುರಿಯಾಗಿಸಲಾಗುತ್ತಿದೆ. ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಇದು ದುರಾದೃಷ್ಟಕರ ವಿಚಾರ’ ಎಂದು ಮಾಯಾವತಿ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.</p>.<p>‘ಸಮಾಜವಾದಿ ಪಕ್ಷ ಆಡಳಿತದ ಅವಧಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಧಕ್ಕೆ ಉಂಟು ಮಾಡಲಾಯಿತು ಮತ್ತು ಜಿಲ್ಲೆ ಮತ್ತು ಕೆಲವೊಂದು ಸಂಸ್ಥೆಗಳ ಹೆಸರನ್ನೇ ಬದಲಿಸಿದರು. ಅದೇ ರೀತಿಯ ಕೆಲಸಗಳು ಬಿಜೆಪಿ ಆಡಳಿತದಲ್ಲೂ ಮುಂದುವರಿದಿದೆ’ ಎಂದು ಅವರು ಟೀಕಿಸಿದ್ದಾರೆ.</p>.<p>‘ಮೊದಲು ವಾರಾಣಸಿಯಲ್ಲಿಅಂಬೇಡ್ಕರ್ ಪ್ರತಿಮೆಗೆ ಹಾನಿಮಾಡಲಾಗಿತ್ತು. ಈಗ ಅಂಥದ್ದೇ ಘಟನೆ ಜೌನ್ಪುರದಲ್ಲೂ ನಡೆದಿದೆ. ಇದು ಖಂಡನೀಯ. ಸರ್ಕಾರ ಇಂಥ ಪ್ರಕರಣಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>