<p><strong>ನವದೆಹಲಿ:</strong> ರಾಜ್ಯಸಭೆಯ ಎಂಟು ಸದಸ್ಯರನ್ನು ಅಮಾನತು ಮಾಡಿದ ಬಗ್ಗೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಅಮಾನತಾದವರಲ್ಲಿ ಕಾಂಗ್ರೆಸ್ನ ಮೂವರು ಸದಸ್ಯರು ಇದ್ದಾರೆ.</p>.<p>'ಪ್ರಜಾಸತ್ತಾತ್ಮಕ ಭಾರತದ ದನಿ ಹತ್ತಿಕ್ಕುವ ಕೆಲಸ ಮುಂದುವರಿದಿದೆ. ಸಂಸದರಿಗೆ ಮೊದಲು ಮಾತನಾಡುವ ಅವಕಾಶ ನಿರಾಕರಿಸಲಾಯಿತು. ನಂತರ ಅವರನ್ನು ಅಮಾನತು ಮಾಡಲಾಯಿತು' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಎರಡು ಮಸೂದೆಗಳನ್ನುರಾಜ್ಯಸಭೆಯಲ್ಲಿ ಅಂಗೀಕರಿಸುವ ವೇಳೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಕೆಲ ಅಹಿತಕರ ವಿದ್ಯಮಾನಗಳೂ ಸಂಭವಿಸಿದ್ದವು. ಈ ಬೆಳವಣಿಗೆಯ ನಂತರ ಎಂಟು ಸದಸ್ಯರನ್ನು ಅಮಾನತು ಮಾಡಲಾಯಿತು.</p>.<p>'ಪ್ರಜಾಸತ್ತಾತ್ಮಕ ಭಾರತದ ದನಿ ಅಡಗಿಸುವ ಕೆಲಸ ಮುಂದುವರಿದಿದೆ. ಮೊದಲು ದನಿ ಹತ್ತಿಕ್ಕಲಾಯಿತು, ನಂತರ ಸಂಸದರನ್ನು ಅಮಾನತುಗೊಳಿಸಲಾಯಿತು. ಕೃಷಿಗೆ ಸಂಬಂಧಿಸಿದ ಕೆಟ್ಟ ಕಾನೂನುಗಳ ಬಗ್ಗೆ ಒಲವಿರುವವರು ರೈತರ ಸಂಕಷ್ಟಕ್ಕೆ ಕುರುಡಾಗಿದ್ದಾರೆ' ಎಂದು ರಾಹುಲ್ಗಾಂಧಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>'ಈ 'ಸರ್ವಶಕ್ತ' ಸರ್ಕಾರದ ಕೊನೆಯಿಲ್ಲದ ಉದ್ಧಟತನವು ಇಡೀ ದೇಶಕ್ಕೆ ಆರ್ಥಿಕ ಸಂಕಷ್ಟ ತೊಂದೊಡ್ಡಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, 'ದೇಶದಲ್ಲಿ ಸಂಸದೀಯ ಪದ್ಧತಿ ಅಸ್ತಿತ್ವದಲ್ಲಿದೆಯೇ?' ಎಂದು ಪ್ರಶ್ನಿಸಿದ್ದಾರೆ.</p>.<p>'ಸಂಸತ್ತಿನ ರೈತರ ದನಿ ಎತ್ತುವುದು ಪಾಪಕಾರ್ಯವೇ? ಸರ್ವಾಧಿಕಾರಿಗಳು ಸಂಸತ್ತನ್ನು ಒತ್ತೆಯಿರಿಸಿಕೊಂಡಿದ್ದಾರೆಯೇ?' ಎಂದು ಸುರ್ಜೆವಾಲಾ ಕೇಳಿದ್ದಾರೆ.</p>.<p>#KisaanVirodhiModi ಹ್ಯಾಷ್ಟ್ಯಾಗ್ನೊಂದಿಗೆ ಟ್ವಿಟರ್ನಲ್ಲಿ ಆಕ್ರೋಶ ಹೊರಹಾಕಿರುವ ಸುರ್ಜೆವಾಲಾ, 'ಅಧಿಕಾರದ ಪ್ರಭಾವದಿಂದಾಗಿ ನಿಮಗೆ ಸತ್ಯದ ಶಬ್ದಗಳು ಕೇಳಿಸುತ್ತಿಲ್ಲ. ರೈತರು, ಕಾರ್ಮಿಕರು, ಸಣ್ಣ ಅಂಗಡಿಗಳನ್ನು ನಡೆಸುವವರು, ಸಂಸದರು... ಹೀಗೆಎಷ್ಟು ಜನರ ಧ್ವನಿಯನ್ನು ನೀವು ಹತ್ತಿಕ್ಕುತ್ತೀರಿ?' ಎಂದು ಪ್ರಶ್ನಿಸಿದ್ದಾರೆ.</p>.<p>ರಾಜ್ಯಸಭಾ ಸದಸ್ಯರಾದಡೊಲಾ ಸೇನ್, ಡೆರೆಕ್ ಒ ಬ್ರೇನ್ (ಟಿಎಂಸಿ), ಸಂಜಯ್ ಸಿಂಗ್ (ಎಎಪಿ), ಕೆ.ಕೆ.ರಾಗೇಶ್, ಎಲಮರಂ ಕರೀಂ (ಸಿಪಿಎಂ), ರಾಜೀವ್ ಸತವ್, ರಿಪಿನ್ ಬೊರೆನ್, ಸೈಯದ್ ನಾಜಿರ್ ಹುಸೇನ್ (ಕಾಂಗ್ರೆಸ್) ಅವರ ಅಮಾನತು ಗೊತ್ತುವಳಿಯನ್ನು ಸರ್ಕಾರವು ಸೋಮವಾರ ರಾಜ್ಯಸಭೆಯಲ್ಲಿ ಅಂಗೀಕರಿಸಿತ್ತು.</p>.<p>ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೊತ್ತುವಳಿಯನ್ನು ಧ್ವನಿಮತದಿಂದ ಅಂಗೀಕರಿಸಲಾಯಿತು. ಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡ ಎಂಟೂ ಮಂದಿಗೆ ಸದನದಿಂದ ಹೊರನಡೆಯುವಂತೆ ಸೂಚಿಸಿದ್ದರು. ಅದರೆ ಅಮಾನತಾದ ಸದಸ್ಯರು ಸದನದಲ್ಲಿಯೇ ಉಳಿದು ಅಧ್ಯಕ್ಷರ ರೂಲಿಂಗ್ಗೆ ವಿರೋಧ ವ್ಯಕ್ತಪಡಿಸಿದ್ದರು.</p>.<p>ಸದನವನ್ನು ನಿಯಮಗಳಿಗೆ ಅನುಸಾರವಾಗಿ ನಡೆಸಿಲ್ಲ ಎಂಬ ಕಾರಣ ಮುಂದೊಡ್ಡಿ, ಉಪಸಭಾಧ್ಯಕ್ಷ ಹರಿವಂಶ್ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯನ್ನೂ ಸಭಾಧ್ಯಕ್ಷರು ತಳ್ಳಿಹಾಕಿದ್ದರು.</p>.<p>ಕೃಷಿ ಮಸೂದೆಯನ್ನು ಅಂಗೀಕರಿಸುವ ಸಂದರ್ಭ ಸದನವನ್ನು ಮುನ್ನಡೆಸುತ್ತಿದ್ದ ಉಪಸಭಾಧ್ಯಕ್ಷಹರಿವಂಶ್ ಅವರ ಮೇಲೆ ವಿರೋಧ ಪಕ್ಷಗಳ ಸದಸ್ಯರು ಹರಿಹಾಯ್ದ ರೀತಿ ಮತ್ತು ಅವರಿಗೆ ಬೆದರಿಕೆ ಒಡ್ಡಿದ ವಿಚಾರವನ್ನು ಸಭಾಧ್ಯಕ್ಷ ವೆಂಕಯ್ಯನಾಯ್ಡು ಖಂಡಿಸಿದರು.</p>.<p>ರೈತರ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಮಸೂದೆಗಳನ್ನು ಭಾನುವಾರ ರಾಜ್ಯಸಭೆಯಲ್ಲಿ ಧ್ವನಿಮತದೊಂದಿಗೆ ಅನುಮೋದಿಸಲಾಯಿತು. ಈ ಸಂದರ್ಭ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದವು.</p>.<p>ಈ ಎರಡೂ ಮಸೂದೆಗಳಿಗೆ ಈಗಾಗಲೇ ಲೋಕಸಭೆಯ ಅನುಮೋದನೆ ದೊರೆತಿದೆ. ಸಹಿಗಾಗಿ ರಾಷ್ಟ್ರಪತಿ ಕಚೇರಿಗೆ ಎರಡೂ ಮಸೂದೆಗಳನ್ನು ಸರ್ಕಾರ ಕಳುಹಿಸಿಕೊಡಲಿದೆ. ರಾಷ್ಟ್ರಪತಿ ಸಹಿಯ ನಂತರಈ ಮಸೂದೆಗಳು ಕಾನೂನುಗಳ ಸ್ವರೂಪ ಪಡೆದುಕೊಳ್ಳುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಜ್ಯಸಭೆಯ ಎಂಟು ಸದಸ್ಯರನ್ನು ಅಮಾನತು ಮಾಡಿದ ಬಗ್ಗೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಅಮಾನತಾದವರಲ್ಲಿ ಕಾಂಗ್ರೆಸ್ನ ಮೂವರು ಸದಸ್ಯರು ಇದ್ದಾರೆ.</p>.<p>'ಪ್ರಜಾಸತ್ತಾತ್ಮಕ ಭಾರತದ ದನಿ ಹತ್ತಿಕ್ಕುವ ಕೆಲಸ ಮುಂದುವರಿದಿದೆ. ಸಂಸದರಿಗೆ ಮೊದಲು ಮಾತನಾಡುವ ಅವಕಾಶ ನಿರಾಕರಿಸಲಾಯಿತು. ನಂತರ ಅವರನ್ನು ಅಮಾನತು ಮಾಡಲಾಯಿತು' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಎರಡು ಮಸೂದೆಗಳನ್ನುರಾಜ್ಯಸಭೆಯಲ್ಲಿ ಅಂಗೀಕರಿಸುವ ವೇಳೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಕೆಲ ಅಹಿತಕರ ವಿದ್ಯಮಾನಗಳೂ ಸಂಭವಿಸಿದ್ದವು. ಈ ಬೆಳವಣಿಗೆಯ ನಂತರ ಎಂಟು ಸದಸ್ಯರನ್ನು ಅಮಾನತು ಮಾಡಲಾಯಿತು.</p>.<p>'ಪ್ರಜಾಸತ್ತಾತ್ಮಕ ಭಾರತದ ದನಿ ಅಡಗಿಸುವ ಕೆಲಸ ಮುಂದುವರಿದಿದೆ. ಮೊದಲು ದನಿ ಹತ್ತಿಕ್ಕಲಾಯಿತು, ನಂತರ ಸಂಸದರನ್ನು ಅಮಾನತುಗೊಳಿಸಲಾಯಿತು. ಕೃಷಿಗೆ ಸಂಬಂಧಿಸಿದ ಕೆಟ್ಟ ಕಾನೂನುಗಳ ಬಗ್ಗೆ ಒಲವಿರುವವರು ರೈತರ ಸಂಕಷ್ಟಕ್ಕೆ ಕುರುಡಾಗಿದ್ದಾರೆ' ಎಂದು ರಾಹುಲ್ಗಾಂಧಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>'ಈ 'ಸರ್ವಶಕ್ತ' ಸರ್ಕಾರದ ಕೊನೆಯಿಲ್ಲದ ಉದ್ಧಟತನವು ಇಡೀ ದೇಶಕ್ಕೆ ಆರ್ಥಿಕ ಸಂಕಷ್ಟ ತೊಂದೊಡ್ಡಿದೆ' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.</p>.<p>ಬೆಳವಣಿಗೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, 'ದೇಶದಲ್ಲಿ ಸಂಸದೀಯ ಪದ್ಧತಿ ಅಸ್ತಿತ್ವದಲ್ಲಿದೆಯೇ?' ಎಂದು ಪ್ರಶ್ನಿಸಿದ್ದಾರೆ.</p>.<p>'ಸಂಸತ್ತಿನ ರೈತರ ದನಿ ಎತ್ತುವುದು ಪಾಪಕಾರ್ಯವೇ? ಸರ್ವಾಧಿಕಾರಿಗಳು ಸಂಸತ್ತನ್ನು ಒತ್ತೆಯಿರಿಸಿಕೊಂಡಿದ್ದಾರೆಯೇ?' ಎಂದು ಸುರ್ಜೆವಾಲಾ ಕೇಳಿದ್ದಾರೆ.</p>.<p>#KisaanVirodhiModi ಹ್ಯಾಷ್ಟ್ಯಾಗ್ನೊಂದಿಗೆ ಟ್ವಿಟರ್ನಲ್ಲಿ ಆಕ್ರೋಶ ಹೊರಹಾಕಿರುವ ಸುರ್ಜೆವಾಲಾ, 'ಅಧಿಕಾರದ ಪ್ರಭಾವದಿಂದಾಗಿ ನಿಮಗೆ ಸತ್ಯದ ಶಬ್ದಗಳು ಕೇಳಿಸುತ್ತಿಲ್ಲ. ರೈತರು, ಕಾರ್ಮಿಕರು, ಸಣ್ಣ ಅಂಗಡಿಗಳನ್ನು ನಡೆಸುವವರು, ಸಂಸದರು... ಹೀಗೆಎಷ್ಟು ಜನರ ಧ್ವನಿಯನ್ನು ನೀವು ಹತ್ತಿಕ್ಕುತ್ತೀರಿ?' ಎಂದು ಪ್ರಶ್ನಿಸಿದ್ದಾರೆ.</p>.<p>ರಾಜ್ಯಸಭಾ ಸದಸ್ಯರಾದಡೊಲಾ ಸೇನ್, ಡೆರೆಕ್ ಒ ಬ್ರೇನ್ (ಟಿಎಂಸಿ), ಸಂಜಯ್ ಸಿಂಗ್ (ಎಎಪಿ), ಕೆ.ಕೆ.ರಾಗೇಶ್, ಎಲಮರಂ ಕರೀಂ (ಸಿಪಿಎಂ), ರಾಜೀವ್ ಸತವ್, ರಿಪಿನ್ ಬೊರೆನ್, ಸೈಯದ್ ನಾಜಿರ್ ಹುಸೇನ್ (ಕಾಂಗ್ರೆಸ್) ಅವರ ಅಮಾನತು ಗೊತ್ತುವಳಿಯನ್ನು ಸರ್ಕಾರವು ಸೋಮವಾರ ರಾಜ್ಯಸಭೆಯಲ್ಲಿ ಅಂಗೀಕರಿಸಿತ್ತು.</p>.<p>ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೊತ್ತುವಳಿಯನ್ನು ಧ್ವನಿಮತದಿಂದ ಅಂಗೀಕರಿಸಲಾಯಿತು. ಸಭಾಧ್ಯಕ್ಷ ಎಂ.ವೆಂಕಯ್ಯ ನಾಯ್ಡ ಎಂಟೂ ಮಂದಿಗೆ ಸದನದಿಂದ ಹೊರನಡೆಯುವಂತೆ ಸೂಚಿಸಿದ್ದರು. ಅದರೆ ಅಮಾನತಾದ ಸದಸ್ಯರು ಸದನದಲ್ಲಿಯೇ ಉಳಿದು ಅಧ್ಯಕ್ಷರ ರೂಲಿಂಗ್ಗೆ ವಿರೋಧ ವ್ಯಕ್ತಪಡಿಸಿದ್ದರು.</p>.<p>ಸದನವನ್ನು ನಿಯಮಗಳಿಗೆ ಅನುಸಾರವಾಗಿ ನಡೆಸಿಲ್ಲ ಎಂಬ ಕಾರಣ ಮುಂದೊಡ್ಡಿ, ಉಪಸಭಾಧ್ಯಕ್ಷ ಹರಿವಂಶ್ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿಯನ್ನೂ ಸಭಾಧ್ಯಕ್ಷರು ತಳ್ಳಿಹಾಕಿದ್ದರು.</p>.<p>ಕೃಷಿ ಮಸೂದೆಯನ್ನು ಅಂಗೀಕರಿಸುವ ಸಂದರ್ಭ ಸದನವನ್ನು ಮುನ್ನಡೆಸುತ್ತಿದ್ದ ಉಪಸಭಾಧ್ಯಕ್ಷಹರಿವಂಶ್ ಅವರ ಮೇಲೆ ವಿರೋಧ ಪಕ್ಷಗಳ ಸದಸ್ಯರು ಹರಿಹಾಯ್ದ ರೀತಿ ಮತ್ತು ಅವರಿಗೆ ಬೆದರಿಕೆ ಒಡ್ಡಿದ ವಿಚಾರವನ್ನು ಸಭಾಧ್ಯಕ್ಷ ವೆಂಕಯ್ಯನಾಯ್ಡು ಖಂಡಿಸಿದರು.</p>.<p>ರೈತರ ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮತ್ತು ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತಂತೆ ರೈತರ ಜತೆ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ ಮಸೂದೆಗಳನ್ನು ಭಾನುವಾರ ರಾಜ್ಯಸಭೆಯಲ್ಲಿ ಧ್ವನಿಮತದೊಂದಿಗೆ ಅನುಮೋದಿಸಲಾಯಿತು. ಈ ಸಂದರ್ಭ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದವು.</p>.<p>ಈ ಎರಡೂ ಮಸೂದೆಗಳಿಗೆ ಈಗಾಗಲೇ ಲೋಕಸಭೆಯ ಅನುಮೋದನೆ ದೊರೆತಿದೆ. ಸಹಿಗಾಗಿ ರಾಷ್ಟ್ರಪತಿ ಕಚೇರಿಗೆ ಎರಡೂ ಮಸೂದೆಗಳನ್ನು ಸರ್ಕಾರ ಕಳುಹಿಸಿಕೊಡಲಿದೆ. ರಾಷ್ಟ್ರಪತಿ ಸಹಿಯ ನಂತರಈ ಮಸೂದೆಗಳು ಕಾನೂನುಗಳ ಸ್ವರೂಪ ಪಡೆದುಕೊಳ್ಳುತ್ತವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>