ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಜಫ್ಫರ್‌ಪುರ ಲೈಂಗಿಕ ದೌರ್ಜನ್ಯ ಪ್ರಕರಣ: ಮಾಧ್ಯಮ ನಿರ್ಬಂಧಕ್ಕೆ ಖಂಡನೆ

Last Updated 25 ಆಗಸ್ಟ್ 2018, 18:24 IST
ಅಕ್ಷರ ಗಾತ್ರ

ನವದೆಹಲಿ: ಮುಜಫ್ಫರ್‌ಪುರ ಬಾಲಿಕಾ ಗೃಹದಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯಗಳ ಪ್ರಕರಣದ ತನಿಖೆ ಕುರಿತು ವರದಿ ಮಾಡದಂತೆ ಪಟ್ನಾ ಹೈಕೋರ್ಟ್ ನೀಡಿರುವ ಆದೇಶವನ್ನು ಭಾರತೀಯ ಸಂಪಾದಕರ ವೇದಿಕೆ ಖಂಡಿಸಿದೆ.

ಈ ಆದೇಶವನ್ನು ಪುನರ್‌ ಪರಿಶೀಲಿಸಬೇಕು ಎಂದು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ವೇದಿಕೆ ಕೋರಿದೆ.

ಈ ರೀತಿಯ ಸಾರ್ವಜನಿಕ ಮಹತ್ವದ ವಿಷಯಗಳ ಮೇಲೆ ನಿರ್ಬಂಧ ಹೇರುವುದು ಸಲ್ಲದು. ಪ್ರಜಾಪ್ರಭುತ್ವದ ಸ್ತಂಭಗಳಲ್ಲಿ ಒಂದಾದ ಮಾಧ್ಯಮಗಳ ಮೇಲೆ ಇತ್ತೀಚೆಗೆ ನ್ಯಾಯಾಲಯಗಳು ಅಂಕುಶ ಹಾಕುತ್ತಿರುವ ಬೆಳವಣಿಗೆಗಳು ನಡೆಯುತ್ತಿವೆ. ಮಾಧ್ಯಮಗಳ ಸ್ವಾತಂತ್ರ್ಯ ಕಾಪಾಡುವಲ್ಲಿ ಮುಂಚೂಣಿಯಲ್ಲಿರ ಬೇಕಾದ ನ್ಯಾಯಾಲಯಗಳೇ ನಿರ್ಬಂಧ ಹೇರುವ ಮೂಲಕ ದಮನಕಾರಿ ನೀತಿ ಅನುಸರಿಸುವ ಮಾರ್ಗದಲ್ಲಿ ಸಾಗುತ್ತಿವೆ ಎಂದು ವೇದಿಕೆ ಆತಂಕ ವ್ಯಕ್ತಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT