ಈ ರೀತಿಯ ಸಾರ್ವಜನಿಕ ಮಹತ್ವದ ವಿಷಯಗಳ ಮೇಲೆ ನಿರ್ಬಂಧ ಹೇರುವುದು ಸಲ್ಲದು. ಪ್ರಜಾಪ್ರಭುತ್ವದ ಸ್ತಂಭಗಳಲ್ಲಿ ಒಂದಾದ ಮಾಧ್ಯಮಗಳ ಮೇಲೆ ಇತ್ತೀಚೆಗೆ ನ್ಯಾಯಾಲಯಗಳು ಅಂಕುಶ ಹಾಕುತ್ತಿರುವ ಬೆಳವಣಿಗೆಗಳು ನಡೆಯುತ್ತಿವೆ. ಮಾಧ್ಯಮಗಳ ಸ್ವಾತಂತ್ರ್ಯ ಕಾಪಾಡುವಲ್ಲಿ ಮುಂಚೂಣಿಯಲ್ಲಿರ ಬೇಕಾದ ನ್ಯಾಯಾಲಯಗಳೇ ನಿರ್ಬಂಧ ಹೇರುವ ಮೂಲಕ ದಮನಕಾರಿ ನೀತಿ ಅನುಸರಿಸುವ ಮಾರ್ಗದಲ್ಲಿ ಸಾಗುತ್ತಿವೆ ಎಂದು ವೇದಿಕೆ ಆತಂಕ ವ್ಯಕ್ತಪಡಿಸಿದೆ.