<p><strong>ಮುಂಬೈ</strong>: ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಒಕ್ಕೂಟವು ‘ಅಸಹಜ ಮೈತ್ರಿ’ಯಾಗಿದೆ ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್ಸಿಪಿ ಮತ್ತು ಕಾಂಗ್ರೆಸ್ನೊಂದಿಗಿನ ಒಕ್ಕೂಟದಿಂದ ಹೊರನಡೆಯುವುದು ನಮ್ಮ ಪಕ್ಷ ಮತ್ತು ಕಾರ್ಯಕರ್ತರಿಗೆ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಬಂಡಾಯ ಬಣದ ಒಬ್ಬ ಶಿವಸೇನೆ ಶಾಸಕ ಬಂದು ತಾನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಸಮರ್ಥನೆಂದು ಹೇಳಿದರೆ ಸಿಎಂ ಸ್ಥಾನ ತ್ಯಜಿಸುವುದಾಗಿ ಎಂದು ಉದ್ಧವ್ ಠಾಕ್ರೆ ಅವರು ಹೇಳಿದ ಬೆನ್ನಲ್ಲೇ ಶಿಂಧೆ ಈ ಹೇಳಿಕೆ ನೀಡಿದ್ದಾರೆ.</p>.<p>ನವೆಂಬರ್ 2019ರಲ್ಲಿ ಮಹಾ ವಿಕಾಸ್ ಅಘಾಡಿ ರಚನೆಯಾದಾಗಿನಿಂದ ಕಾಂಗ್ರೆಸ್ ಮತ್ತು ಎನ್ಸಿಪಿ ಪಕ್ಷಗಳಿಗೆ ಮಾತ್ರ ಅನುಕೂಲವಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಸಾಮಾನ್ಯ ಶಿವಸೈನಿಕರು ತೊಂದರೆಗೆ ಈಡಾಗಿದ್ದಾರೆ. ಶಿವಸೈನಿಕರು ಮತ್ತು ಶಿವಸೇನೆಯ ಹಿತದೃಷ್ಟಿಯಿಂದ ಅಸಹಜ ಮೈತ್ರಿ ಕಡಿದುಕೊಳ್ಳುವುದು ಅವಶ್ಯವಾಗಿದೆ. ರಾಜ್ಯದ ಹಿತದೃಷ್ಟಿಯಿಂದಲೂ ಈ ನಿರ್ಧಾರ ಕೈಗೊಳ್ಳುವುದು ಮುಖ್ಯವಾಗಿದೆ ಎಂದು ಬಂಡಾಯ ಶಾಸಕರ ಜೊತೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿಂಧೆ ಟ್ವೀಟ್ ಮಾಡಿದ್ದಾರೆ.</p>.<p>#Hindutvaforever ಎಂಬ ಹ್ಯಾಷ್ ಟ್ಯಾಗ್ ಬಳಸಿ ಮರಾಠಿಯಲ್ಲಿ ಶಿಂಧೆ ಟ್ವೀಟ್ ಮಾಡಿದ್ದಾರೆ.</p>.<p>ಎಂವಿಎ ಒಕ್ಕೂಟದಲ್ಲಿ ಕಾಂಗ್ರೆಸ್ ಮತ್ತು ಎನ್ಸಿಪಿ ಬಲವಾಗುತ್ತಿದ್ದರೆ, ಶಿವಸೇನೆ ದುರ್ಬಲವಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ(ಎಂವಿಎ) ಒಕ್ಕೂಟವು ‘ಅಸಹಜ ಮೈತ್ರಿ’ಯಾಗಿದೆ ಎಂದು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್ಸಿಪಿ ಮತ್ತು ಕಾಂಗ್ರೆಸ್ನೊಂದಿಗಿನ ಒಕ್ಕೂಟದಿಂದ ಹೊರನಡೆಯುವುದು ನಮ್ಮ ಪಕ್ಷ ಮತ್ತು ಕಾರ್ಯಕರ್ತರಿಗೆ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.</p>.<p>ಬಂಡಾಯ ಬಣದ ಒಬ್ಬ ಶಿವಸೇನೆ ಶಾಸಕ ಬಂದು ತಾನು ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಸಮರ್ಥನೆಂದು ಹೇಳಿದರೆ ಸಿಎಂ ಸ್ಥಾನ ತ್ಯಜಿಸುವುದಾಗಿ ಎಂದು ಉದ್ಧವ್ ಠಾಕ್ರೆ ಅವರು ಹೇಳಿದ ಬೆನ್ನಲ್ಲೇ ಶಿಂಧೆ ಈ ಹೇಳಿಕೆ ನೀಡಿದ್ದಾರೆ.</p>.<p>ನವೆಂಬರ್ 2019ರಲ್ಲಿ ಮಹಾ ವಿಕಾಸ್ ಅಘಾಡಿ ರಚನೆಯಾದಾಗಿನಿಂದ ಕಾಂಗ್ರೆಸ್ ಮತ್ತು ಎನ್ಸಿಪಿ ಪಕ್ಷಗಳಿಗೆ ಮಾತ್ರ ಅನುಕೂಲವಾಗಿದೆ. ಕಳೆದ ಎರಡೂವರೆ ವರ್ಷಗಳಿಂದ ಸಾಮಾನ್ಯ ಶಿವಸೈನಿಕರು ತೊಂದರೆಗೆ ಈಡಾಗಿದ್ದಾರೆ. ಶಿವಸೈನಿಕರು ಮತ್ತು ಶಿವಸೇನೆಯ ಹಿತದೃಷ್ಟಿಯಿಂದ ಅಸಹಜ ಮೈತ್ರಿ ಕಡಿದುಕೊಳ್ಳುವುದು ಅವಶ್ಯವಾಗಿದೆ. ರಾಜ್ಯದ ಹಿತದೃಷ್ಟಿಯಿಂದಲೂ ಈ ನಿರ್ಧಾರ ಕೈಗೊಳ್ಳುವುದು ಮುಖ್ಯವಾಗಿದೆ ಎಂದು ಬಂಡಾಯ ಶಾಸಕರ ಜೊತೆ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಶಿಂಧೆ ಟ್ವೀಟ್ ಮಾಡಿದ್ದಾರೆ.</p>.<p>#Hindutvaforever ಎಂಬ ಹ್ಯಾಷ್ ಟ್ಯಾಗ್ ಬಳಸಿ ಮರಾಠಿಯಲ್ಲಿ ಶಿಂಧೆ ಟ್ವೀಟ್ ಮಾಡಿದ್ದಾರೆ.</p>.<p>ಎಂವಿಎ ಒಕ್ಕೂಟದಲ್ಲಿ ಕಾಂಗ್ರೆಸ್ ಮತ್ತು ಎನ್ಸಿಪಿ ಬಲವಾಗುತ್ತಿದ್ದರೆ, ಶಿವಸೇನೆ ದುರ್ಬಲವಾಗುತ್ತಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>