<p><strong>ಕೋಲ್ಕತ್ತ:</strong> ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ತೊರೆಯಲಿದ್ದಾರೆ ಎಂಬ ಊಹಾಪೋಹಗಳಿಗೆ ಇತಿ ಶ್ರೀ ಹಾಡಿರುವ ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಹಾಗೂ ಹಿರಿಯ ಮುಖಂಡ ಮುಕುಲ್ ರಾಯ್, ಪಕ್ಷದ ಸೈನಿಕನಾಗಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಹೋರಾಟ ಮುಂದುವರಿಸುವುದಾಗಿ ಶನಿವಾರ ಘೋಷಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಮುಕುಲ್ ರಾಯ್, ಬಂಗಾಳದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಬಿಜೆಪಿಯ ಓರ್ವ ಸೈನಿಕನಾಗಿ ನನ್ನ ಹೋರಾಟ ಮುಂದುವರಿಯಲಿದೆ. ಊಹಾಪೋಹಾಗಳಿಗೆ ವಿರಾಮ ಹಾಕಬೇಕೆಂದು ಎಲ್ಲರಿಗೂ ವಿನಂತಿಸುತ್ತೇನೆ. ನನ್ನ ರಾಜಕೀಯ ಹಾದಿಯಲ್ಲಿ ನಾನು ದೃಢ ನಿಶ್ಚಯದಿಂದ ಇದ್ದೇನೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/west-bengal-cm-mamata-banerjee-accuses-bjp-of-not-accepting-public-mandate-828929.html" itemprop="url">ಪ.ಬಂಗಾಳ ಜನಾದೇಶಕ್ಕೆ ಬಿಜೆಪಿ ಮನ್ನಣೆ ನೀಡುತ್ತಿಲ್ಲ: ಮಮತಾ ಬ್ಯಾನರ್ಜಿ </a></p>.<p>ಹಿಂದೊಮ್ಮೆ ತೃಣಮೂಲ ಕಾಂಗ್ರೆಸ್ನ ಪ್ರಮುಖ ನಾಯಕತ್ವವನ್ನು ವಹಿಸಿದ್ದ ಮುಕುಲ್ ರಾಯ್, ಮಮತಾ ಬ್ಯಾನರ್ಜಿ ಆಪ್ತರಾಗಿ ಗುರುತಿಸಿಕೊಂಡಿದ್ದರು. ಬಳಿಕ 2017ರಲ್ಲಿ ಪಕ್ಷ ತೊರೆದು ಬಿಜೆಪಿಯನ್ನು ಸೇರ್ಪಡೆಗೊಂಡಿದ್ದರು.</p>.<p>ಇತ್ತೀಚೆಗಷ್ಟೇ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮುಕುಲ್ ರಾಯ್ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.</p>.<p>ಮುಕುಲ್ ರಾಯ್ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹ ಶ್ಲಾಘಿಸಿದ್ದಾರೆ. ಅವರ ನಡೆ ಎಲ್ಲ ಬಿಜೆಪಿ ಕಾರ್ಯಕರ್ತರಿಗೂ ಆದರ್ಶಪ್ರಾಯವಾಗಿದ್ದು, ಎಲ್ಲರಿಗೂ ಮಾರ್ಗದರ್ಶನ ನೀಡಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ತೊರೆಯಲಿದ್ದಾರೆ ಎಂಬ ಊಹಾಪೋಹಗಳಿಗೆ ಇತಿ ಶ್ರೀ ಹಾಡಿರುವ ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಹಾಗೂ ಹಿರಿಯ ಮುಖಂಡ ಮುಕುಲ್ ರಾಯ್, ಪಕ್ಷದ ಸೈನಿಕನಾಗಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಹೋರಾಟ ಮುಂದುವರಿಸುವುದಾಗಿ ಶನಿವಾರ ಘೋಷಿಸಿದ್ದಾರೆ.</p>.<p>ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಮುಕುಲ್ ರಾಯ್, ಬಂಗಾಳದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಬಿಜೆಪಿಯ ಓರ್ವ ಸೈನಿಕನಾಗಿ ನನ್ನ ಹೋರಾಟ ಮುಂದುವರಿಯಲಿದೆ. ಊಹಾಪೋಹಾಗಳಿಗೆ ವಿರಾಮ ಹಾಕಬೇಕೆಂದು ಎಲ್ಲರಿಗೂ ವಿನಂತಿಸುತ್ತೇನೆ. ನನ್ನ ರಾಜಕೀಯ ಹಾದಿಯಲ್ಲಿ ನಾನು ದೃಢ ನಿಶ್ಚಯದಿಂದ ಇದ್ದೇನೆ ಎಂದು ಹೇಳಿದ್ದಾರೆ.</p>.<p>ಇದನ್ನೂ ಓದಿ:<a href="https://www.prajavani.net/india-news/west-bengal-cm-mamata-banerjee-accuses-bjp-of-not-accepting-public-mandate-828929.html" itemprop="url">ಪ.ಬಂಗಾಳ ಜನಾದೇಶಕ್ಕೆ ಬಿಜೆಪಿ ಮನ್ನಣೆ ನೀಡುತ್ತಿಲ್ಲ: ಮಮತಾ ಬ್ಯಾನರ್ಜಿ </a></p>.<p>ಹಿಂದೊಮ್ಮೆ ತೃಣಮೂಲ ಕಾಂಗ್ರೆಸ್ನ ಪ್ರಮುಖ ನಾಯಕತ್ವವನ್ನು ವಹಿಸಿದ್ದ ಮುಕುಲ್ ರಾಯ್, ಮಮತಾ ಬ್ಯಾನರ್ಜಿ ಆಪ್ತರಾಗಿ ಗುರುತಿಸಿಕೊಂಡಿದ್ದರು. ಬಳಿಕ 2017ರಲ್ಲಿ ಪಕ್ಷ ತೊರೆದು ಬಿಜೆಪಿಯನ್ನು ಸೇರ್ಪಡೆಗೊಂಡಿದ್ದರು.</p>.<p>ಇತ್ತೀಚೆಗಷ್ಟೇ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮುಕುಲ್ ರಾಯ್ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.</p>.<p>ಮುಕುಲ್ ರಾಯ್ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹ ಶ್ಲಾಘಿಸಿದ್ದಾರೆ. ಅವರ ನಡೆ ಎಲ್ಲ ಬಿಜೆಪಿ ಕಾರ್ಯಕರ್ತರಿಗೂ ಆದರ್ಶಪ್ರಾಯವಾಗಿದ್ದು, ಎಲ್ಲರಿಗೂ ಮಾರ್ಗದರ್ಶನ ನೀಡಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>