<p><strong>ತಿರುವನಂತಪುರ</strong>: ಕೆಲವು ವಿಷಯಗಳ ಬಗ್ಗೆ ನನ್ನ ನಿಲುವು ದೇಶದ ಪರ ಹೊರತು ಬಿಜೆಪಿ ಪರವಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.</p><p>ಆದರೆ ನಾನು ದೇಶದ ಪರ ಅಥವಾ ಸರ್ಕಾರದ ಪರ ಮಾತನಾಡಿದರೆ ಅದನ್ನು ಬಿಜೆಪಿ ಪರ ಎಂದು ಬಿಂಬಿಸುತ್ತಾರೆ. ಆದರೆ ವಾಸ್ತವಾಗಿ ನಾನು ದೇಶದ ಪರ ಧ್ವನಿಗೂಡಿಸುತ್ತೇನೆ ಎಂದು ಶಶಿ ತರೂರ್ ಸ್ಪಷ್ಟನೆ ನೀಡಿದ್ದಾರೆ.</p><p>ಕೆಲವು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚಿಸಲು ನನಗೆ ಇಷ್ಟವಾಗುವುದಿಲ್ಲ. ಹೀಗಾಗಿ ನಾನು ದೇಶದಲ್ಲಿ ನಡೆಯುವ ವಿಚಾರಗಳ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.</p>.ಬೆಂಗಳೂರಿನ ಮಾರತಹಳ್ಳಿಯನ್ನು ಮಿನಿ ಆಂಧ್ರ ಎಂದ ತೆಲುಗು ಪಿಲ್ಲಾ.. ಕನ್ನಡಿಗರು ಕೆಂಡ.ಹಂಪಿ: ರಾಷ್ಟ್ರೀಯ ಯೋಜನೆಯಾಗಿ ಘೋಷಣೆ?–ಕೇಂದ್ರ ಬಜೆಟ್ ಮೇಲೆ ನಿರೀಕ್ಷೆ. <p>ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತೀರಾ ಎಂದು ಪ್ರಶ್ನೆಗೆ ಉತ್ತರಿಸಿದ ತರೂರ್, 'ನಾನು ಕಾಂಗ್ರೆಸ್ನಲ್ಲಿಯೇ ಇರುತ್ತೇನೆ. ನಾನು ಎಲ್ಲಿಗೂ ಹೋಗುವುದಿಲ್ಲ. ಕೇರಳದ ಚುನಾವಣಾ ಪ್ರಚಾರದ ಭಾಗವಾಗಿರುತ್ತೇನೆ. ಯುಡಿಎಫ್ನ ಗೆಲುವಿಗಾಗಿ ಕೆಲಸ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.</p><p>'ನಾನು ಯಾವಾಗಲೂ ಸಂಸತ್ತಿನಲ್ಲಿ ಪಕ್ಷದ ಪರವಾಗಿ ನಿಂತಿದ್ದೇನೆ. ಹೀಗಾಗಿ ಚಿಂತಿಸುವ ಅಗತ್ಯವಿಲ್ಲ' ಎಂದೂ ಅವರು ತಿಳಿಸಿದ್ದಾರೆ.</p><p>ಕಳೆದ ವರ್ಷ ಭಾರತ-ಪಾಕಿಸ್ತಾನ ಸಂಘರ್ಷ ಮತ್ತು ಪಹಲ್ಗಾಮ್ ದಾಳಿಯ ಬಳಿಕ ತರೂರ್ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿದ್ದವು. ಅವರ ಹೇಳಿಕೆಗಳು ಕಾಂಗ್ರೆಸ್ ನಿಲುವಿಗೆ ವಿರುದ್ಧವಾಗಿದ್ದವು. ಸ್ವಪಕ್ಷದವರೇ ಅವರ ನೀಡಿದ್ದ ಹೇಳಿಕೆಗಳನ್ನು ಪ್ರಶ್ನಿಸಿ, ಟೀಕಿಸಿದ್ದರು.</p>.ಅಮೃತ ಅಂಜನ್ ಸಿನಿಮಾ ತಂಡಕ್ಕೆ ರಾಕಿಂಗ್ ಸ್ಟಾರ್ ಶುಭ ಹಾರೈಕೆ: ಯಶ್ ಹೇಳಿದ್ದೇನು? .ಮಹಾತ್ಮ ಗಾಂಧಿ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರ ನಮನ.Menopause: ಋತು‘ಬಂಧ’ನದಲ್ಲಿ ಕುಗ್ಗದಿರಲಿ ಮನ.ಪ್ರಶ್ನೋತ್ತರ: ಟಿಡಿಎಸ್ ಮಾಹಿತಿಯನ್ನು ಬಾಡಿಗೆದಾರರಿಂದ ಹೇಗೆ ಪಡೆದುಕೊಳ್ಳಬಹುದು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೆಲವು ವಿಷಯಗಳ ಬಗ್ಗೆ ನನ್ನ ನಿಲುವು ದೇಶದ ಪರ ಹೊರತು ಬಿಜೆಪಿ ಪರವಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.</p><p>ಆದರೆ ನಾನು ದೇಶದ ಪರ ಅಥವಾ ಸರ್ಕಾರದ ಪರ ಮಾತನಾಡಿದರೆ ಅದನ್ನು ಬಿಜೆಪಿ ಪರ ಎಂದು ಬಿಂಬಿಸುತ್ತಾರೆ. ಆದರೆ ವಾಸ್ತವಾಗಿ ನಾನು ದೇಶದ ಪರ ಧ್ವನಿಗೂಡಿಸುತ್ತೇನೆ ಎಂದು ಶಶಿ ತರೂರ್ ಸ್ಪಷ್ಟನೆ ನೀಡಿದ್ದಾರೆ.</p><p>ಕೆಲವು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚಿಸಲು ನನಗೆ ಇಷ್ಟವಾಗುವುದಿಲ್ಲ. ಹೀಗಾಗಿ ನಾನು ದೇಶದಲ್ಲಿ ನಡೆಯುವ ವಿಚಾರಗಳ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.</p>.ಬೆಂಗಳೂರಿನ ಮಾರತಹಳ್ಳಿಯನ್ನು ಮಿನಿ ಆಂಧ್ರ ಎಂದ ತೆಲುಗು ಪಿಲ್ಲಾ.. ಕನ್ನಡಿಗರು ಕೆಂಡ.ಹಂಪಿ: ರಾಷ್ಟ್ರೀಯ ಯೋಜನೆಯಾಗಿ ಘೋಷಣೆ?–ಕೇಂದ್ರ ಬಜೆಟ್ ಮೇಲೆ ನಿರೀಕ್ಷೆ. <p>ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತೀರಾ ಎಂದು ಪ್ರಶ್ನೆಗೆ ಉತ್ತರಿಸಿದ ತರೂರ್, 'ನಾನು ಕಾಂಗ್ರೆಸ್ನಲ್ಲಿಯೇ ಇರುತ್ತೇನೆ. ನಾನು ಎಲ್ಲಿಗೂ ಹೋಗುವುದಿಲ್ಲ. ಕೇರಳದ ಚುನಾವಣಾ ಪ್ರಚಾರದ ಭಾಗವಾಗಿರುತ್ತೇನೆ. ಯುಡಿಎಫ್ನ ಗೆಲುವಿಗಾಗಿ ಕೆಲಸ ಶ್ರಮಿಸುತ್ತೇನೆ ಎಂದು ಹೇಳಿದ್ದಾರೆ.</p><p>'ನಾನು ಯಾವಾಗಲೂ ಸಂಸತ್ತಿನಲ್ಲಿ ಪಕ್ಷದ ಪರವಾಗಿ ನಿಂತಿದ್ದೇನೆ. ಹೀಗಾಗಿ ಚಿಂತಿಸುವ ಅಗತ್ಯವಿಲ್ಲ' ಎಂದೂ ಅವರು ತಿಳಿಸಿದ್ದಾರೆ.</p><p>ಕಳೆದ ವರ್ಷ ಭಾರತ-ಪಾಕಿಸ್ತಾನ ಸಂಘರ್ಷ ಮತ್ತು ಪಹಲ್ಗಾಮ್ ದಾಳಿಯ ಬಳಿಕ ತರೂರ್ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿದ್ದವು. ಅವರ ಹೇಳಿಕೆಗಳು ಕಾಂಗ್ರೆಸ್ ನಿಲುವಿಗೆ ವಿರುದ್ಧವಾಗಿದ್ದವು. ಸ್ವಪಕ್ಷದವರೇ ಅವರ ನೀಡಿದ್ದ ಹೇಳಿಕೆಗಳನ್ನು ಪ್ರಶ್ನಿಸಿ, ಟೀಕಿಸಿದ್ದರು.</p>.ಅಮೃತ ಅಂಜನ್ ಸಿನಿಮಾ ತಂಡಕ್ಕೆ ರಾಕಿಂಗ್ ಸ್ಟಾರ್ ಶುಭ ಹಾರೈಕೆ: ಯಶ್ ಹೇಳಿದ್ದೇನು? .ಮಹಾತ್ಮ ಗಾಂಧಿ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರ ನಮನ.Menopause: ಋತು‘ಬಂಧ’ನದಲ್ಲಿ ಕುಗ್ಗದಿರಲಿ ಮನ.ಪ್ರಶ್ನೋತ್ತರ: ಟಿಡಿಎಸ್ ಮಾಹಿತಿಯನ್ನು ಬಾಡಿಗೆದಾರರಿಂದ ಹೇಗೆ ಪಡೆದುಕೊಳ್ಳಬಹುದು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>