<p>ಮೈಸೂರು: ‘ಪಂಚ ರಾಜ್ಯ ಚುನಾವಣೆ ಮುಗಿದ ಬೆನ್ನಲ್ಲೇ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹993 ಏರಿಕೆ ಮಾಡಿ, ಕೇಂದ್ರ ಸರ್ಕಾರ ತನ್ನ ನರಿ ಬುದ್ಧಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರುಣೆಯೇ ಇಲ್ಲ ಎನ್ನುವುದು ಸಾಬೀತಾಗಿದೆ’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಕಿಡಿಕಾರಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಬೆಲೆ ಏರಿಕೆ ಮಾಡಿರುವುದು ತೀವ್ರ ಖಂಡನೀಯ. ಸ್ವಾತಂತ್ರ್ಯ ಬಂದ ಬಳಿಕ ಯಾವ ಸರ್ಕಾರವೂ ಈ ಪ್ರಮಾಣದಲ್ಲಿ ಬೆಲೆ ಏರಿಸಿರಲಿಲ್ಲ. ಜನ ವಿರೋಧಿ ನೀತಿ ಮೂಲಕ ಆರ್ಥಿಕ ಹೊರೆ ಹೆಚ್ಚಿಸಿದೆ’ ಎಂದು ದೂರಿದ್ದಾರೆ.</p>.<p>‘ಚುನಾವಣಾ ಅವಧಿಯಲ್ಲಿ ಮೋದಿ ಸರ್ಕಾರವು ಉದ್ದೇಶಪೂರ್ವಕವಾಗಿ ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆ ತಡೆದಿತ್ತು. ಮೊದಲೇ ಬೆಲೆ ಏರಿಸಿದ್ದರೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದನ್ನು ಅರಿತಿದ್ದ ಸರ್ಕಾರ, ಈಗ ಜಾಸ್ತಿ ಮಾಡಿ ಜನರ ರಕ್ತ ಹೀರುತ್ತಿದೆ’ ಎಂದು ಆರೋಪಿಸಿದ್ದಾರೆ.</p>.<p>‘ಇದು ಅಧಿಕೃತ ಲೂಟಿಯೇ ಹೊರತು ಆಡಳಿತದ ಕ್ರಮವಲ್ಲ. ಈಗಾಗಲೇ ರೋಸಿಹೋಗಿರುವ ದೇಶದ ಜನರು ದಂಗೆ ಏಳುವ ಮುನ್ನವೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು’ ಎಂದು ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-39-337516367</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಪಂಚ ರಾಜ್ಯ ಚುನಾವಣೆ ಮುಗಿದ ಬೆನ್ನಲ್ಲೇ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ₹993 ಏರಿಕೆ ಮಾಡಿ, ಕೇಂದ್ರ ಸರ್ಕಾರ ತನ್ನ ನರಿ ಬುದ್ಧಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರುಣೆಯೇ ಇಲ್ಲ ಎನ್ನುವುದು ಸಾಬೀತಾಗಿದೆ’ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಕಿಡಿಕಾರಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಬೆಲೆ ಏರಿಕೆ ಮಾಡಿರುವುದು ತೀವ್ರ ಖಂಡನೀಯ. ಸ್ವಾತಂತ್ರ್ಯ ಬಂದ ಬಳಿಕ ಯಾವ ಸರ್ಕಾರವೂ ಈ ಪ್ರಮಾಣದಲ್ಲಿ ಬೆಲೆ ಏರಿಸಿರಲಿಲ್ಲ. ಜನ ವಿರೋಧಿ ನೀತಿ ಮೂಲಕ ಆರ್ಥಿಕ ಹೊರೆ ಹೆಚ್ಚಿಸಿದೆ’ ಎಂದು ದೂರಿದ್ದಾರೆ.</p>.<p>‘ಚುನಾವಣಾ ಅವಧಿಯಲ್ಲಿ ಮೋದಿ ಸರ್ಕಾರವು ಉದ್ದೇಶಪೂರ್ವಕವಾಗಿ ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆ ತಡೆದಿತ್ತು. ಮೊದಲೇ ಬೆಲೆ ಏರಿಸಿದ್ದರೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದನ್ನು ಅರಿತಿದ್ದ ಸರ್ಕಾರ, ಈಗ ಜಾಸ್ತಿ ಮಾಡಿ ಜನರ ರಕ್ತ ಹೀರುತ್ತಿದೆ’ ಎಂದು ಆರೋಪಿಸಿದ್ದಾರೆ.</p>.<p>‘ಇದು ಅಧಿಕೃತ ಲೂಟಿಯೇ ಹೊರತು ಆಡಳಿತದ ಕ್ರಮವಲ್ಲ. ಈಗಾಗಲೇ ರೋಸಿಹೋಗಿರುವ ದೇಶದ ಜನರು ದಂಗೆ ಏಳುವ ಮುನ್ನವೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕು’ ಎಂದು ಎಚ್ಚರಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-39-337516367</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>