<p><strong>ನವದೆಹಲಿ:</strong> ಕರ್ನಾಟಕದ ಮೈಸೂರಿನಲ್ಲಿರುವ ಮಾದಕ ವಸ್ತುಗಳ ರಹಸ್ಯ ಉತ್ಪಾದನಾ ಪ್ರಯೋಗಾಲಯವೊಂದರ ಮೇಲೆ ದಾಳಿ ನಡೆಸಿದ ಮಾದಕವಸ್ತು ನಿಯಂತ್ರಣ ದಳವು ರಾಜಸ್ಥಾನದ ನಾಲ್ವರನ್ನು ಬಂಧಿಸಿ, ₹10 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದೆ.</p>.<p>35 ಕೆ.ಜಿ ಮೆಫೆಡ್ರೋನ್ ಇದ್ದ ವಾಹನವೊಂದನ್ನು ಅಧಿಕಾರಿಗಳು ಜನವರಿ 28ರಂದು ಗುಜರಾತ್ನಲ್ಲಿ ಪತ್ತೆಹಚ್ಚಿದ ಬಳಿಕ ಈ ಬಗ್ಗೆ ತನಿಖೆ ಆರಂಭಗೊಂಡಿತ್ತು. ಮೈಸೂರಿನಲ್ಲಿ ಅವರು ಪ್ರಯೋಗಾಲಯ ನಡೆಸುತ್ತಿರುವುದು ತನಿಖೆಯ ವೇಳೆ ಪತ್ತೆಯಾಗಿತ್ತು.</p>.<p>ಈ ಮಾದಕ ವಸ್ತು ಸಾಗಣೆ ಜಾಲದ ಮಾಸ್ಟರ್ಮೈಂಡ್ ಎನ್ನಲಾದ ಮಹೀಂದ್ರ ಕುಮಾರ್ ವಿಷ್ಣೋಯಿ ಮತ್ತು ಇತರ ಮೂವರನ್ನು ಬಂಧಿಸಲಾಗಿದೆ.</p>.<p>ಸ್ವಚ್ಛತೆಗೆ ಬಳಸುವ ರಾಸಾಯನಿಕ ವಸ್ತುಗಳ ತಯಾರಿಕಾ ಘಟಕದ ಹೆಸರಿನಲ್ಲಿ ಆರೋಪಿಗಳು 2024ರಲ್ಲಿ ಪ್ರಯೋಗಾಲಯವನ್ನು ನಿರ್ಮಿಸಿದ್ದರು. ಆರೋಪಿಗಳಲ್ಲಿ ಒಬ್ಬರಾದ ವಿಷ್ಣೋಯಿ ಸಂಬಂಧಿಯು ಕಟ್ಟಡವನ್ನು ಬಾಡಿಗೆಗೆ ನೀಡಿದ್ದರು ಎಂದು ಎನ್ಸಿಬಿ ಪ್ರಕಟಣೆ ತಿಳಿಸಿದೆ.</p>.<p>‘₹10 ಕೋಟಿ ಮೌಲ್ಯದ ಮಾದಕವಸ್ತು, ₹25.6 ಲಕ್ಷ ನಗದು, ಒಂದು ಎಸ್ಯುವಿ ಮತ್ತು 500 ಕೆ.ಜಿ ರಾಸಾಯನಿಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ</p>.<p>ಹಲವು ಪ್ರಕರಣಗಳಲ್ಲಿ ಅಪರಾಧಿಯಾಗಿರುವ ವಿಷ್ಣೋಯಿ, ರಹಸ್ಯ ಪ್ರಯೋಗಾಲಯಗಳಲ್ಲಿ ಮಾದಕ ವಸ್ತುಗಳನ್ನು ತಯಾರಿಸುವ ಯೋಜನೆಯನ್ನು ಜೈಲಿನಲ್ಲಿ ಇದ್ದಾಗ ರೂಪಿಸಿದ್ದ. ಆತನ ವಿರುದ್ಧ ರಾಜಸ್ಥಾನದಲ್ಲಿ ಮೂರು ಮತ್ತು ಗುಜರಾತ್ ಒಂದು ಪ್ರಕರಣ ದಾಖಲಾಗಿದೆ ಎಂದು ಎನ್ಸಿಬಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕರ್ನಾಟಕದ ಮೈಸೂರಿನಲ್ಲಿರುವ ಮಾದಕ ವಸ್ತುಗಳ ರಹಸ್ಯ ಉತ್ಪಾದನಾ ಪ್ರಯೋಗಾಲಯವೊಂದರ ಮೇಲೆ ದಾಳಿ ನಡೆಸಿದ ಮಾದಕವಸ್ತು ನಿಯಂತ್ರಣ ದಳವು ರಾಜಸ್ಥಾನದ ನಾಲ್ವರನ್ನು ಬಂಧಿಸಿ, ₹10 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಿದೆ.</p>.<p>35 ಕೆ.ಜಿ ಮೆಫೆಡ್ರೋನ್ ಇದ್ದ ವಾಹನವೊಂದನ್ನು ಅಧಿಕಾರಿಗಳು ಜನವರಿ 28ರಂದು ಗುಜರಾತ್ನಲ್ಲಿ ಪತ್ತೆಹಚ್ಚಿದ ಬಳಿಕ ಈ ಬಗ್ಗೆ ತನಿಖೆ ಆರಂಭಗೊಂಡಿತ್ತು. ಮೈಸೂರಿನಲ್ಲಿ ಅವರು ಪ್ರಯೋಗಾಲಯ ನಡೆಸುತ್ತಿರುವುದು ತನಿಖೆಯ ವೇಳೆ ಪತ್ತೆಯಾಗಿತ್ತು.</p>.<p>ಈ ಮಾದಕ ವಸ್ತು ಸಾಗಣೆ ಜಾಲದ ಮಾಸ್ಟರ್ಮೈಂಡ್ ಎನ್ನಲಾದ ಮಹೀಂದ್ರ ಕುಮಾರ್ ವಿಷ್ಣೋಯಿ ಮತ್ತು ಇತರ ಮೂವರನ್ನು ಬಂಧಿಸಲಾಗಿದೆ.</p>.<p>ಸ್ವಚ್ಛತೆಗೆ ಬಳಸುವ ರಾಸಾಯನಿಕ ವಸ್ತುಗಳ ತಯಾರಿಕಾ ಘಟಕದ ಹೆಸರಿನಲ್ಲಿ ಆರೋಪಿಗಳು 2024ರಲ್ಲಿ ಪ್ರಯೋಗಾಲಯವನ್ನು ನಿರ್ಮಿಸಿದ್ದರು. ಆರೋಪಿಗಳಲ್ಲಿ ಒಬ್ಬರಾದ ವಿಷ್ಣೋಯಿ ಸಂಬಂಧಿಯು ಕಟ್ಟಡವನ್ನು ಬಾಡಿಗೆಗೆ ನೀಡಿದ್ದರು ಎಂದು ಎನ್ಸಿಬಿ ಪ್ರಕಟಣೆ ತಿಳಿಸಿದೆ.</p>.<p>‘₹10 ಕೋಟಿ ಮೌಲ್ಯದ ಮಾದಕವಸ್ತು, ₹25.6 ಲಕ್ಷ ನಗದು, ಒಂದು ಎಸ್ಯುವಿ ಮತ್ತು 500 ಕೆ.ಜಿ ರಾಸಾಯನಿಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ</p>.<p>ಹಲವು ಪ್ರಕರಣಗಳಲ್ಲಿ ಅಪರಾಧಿಯಾಗಿರುವ ವಿಷ್ಣೋಯಿ, ರಹಸ್ಯ ಪ್ರಯೋಗಾಲಯಗಳಲ್ಲಿ ಮಾದಕ ವಸ್ತುಗಳನ್ನು ತಯಾರಿಸುವ ಯೋಜನೆಯನ್ನು ಜೈಲಿನಲ್ಲಿ ಇದ್ದಾಗ ರೂಪಿಸಿದ್ದ. ಆತನ ವಿರುದ್ಧ ರಾಜಸ್ಥಾನದಲ್ಲಿ ಮೂರು ಮತ್ತು ಗುಜರಾತ್ ಒಂದು ಪ್ರಕರಣ ದಾಖಲಾಗಿದೆ ಎಂದು ಎನ್ಸಿಬಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>