<p>ಮೈಸೂರು: ‘ಮಹಿಳಾ ಮೀಸಲು ಮಸೂದೆಗೆ ಸೋಲುಂಟಾಗಲು ಕೇಂದ್ರ ಸರ್ಕಾರವೇ ನೇರ ಕಾರಣವಾಗಿದ್ದು, ಬಿಜೆಪಿಯ ಹುನ್ನಾರಕ್ಕೆ ಜಯ ಸಿಗಲಿಲ್ಲ’ ಎಂದು ಕಾಂಗ್ರೆಸ್ ಮುಖಂಡ ಕೆ.ವಿ. ಮಲ್ಲೇಶ್ ಆರೋಪಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಮಹಿಳಾ ಮೀಸಲು ಮಸೂದೆ ಜೊತೆಗೆ ಕ್ಷೇತ್ರ ಪುನರ್ ವಿಂಗಡಣೆಯ ಮಸೂದೆಯನ್ನೂ ಕೇಂದ್ರ ತಂದಿತ್ತು. ಈ ಮೂಲಕ ತನ್ನ ಕಾರ್ಯಸೂಚಿ ಜಾರಿಗೆ ಹುನ್ನಾರ ನಡೆಸಿತ್ತು. ಕೇಂದ್ರದ ಈ ಕುತಂತ್ರದ ಬಲೆಯೊಳಗೆ ಸಿಲುಕಿದ ವಿರೋಧ ಪಕ್ಷಗಳು ಮಹಿಳಾ ಮೀಸಲು ಪರವಾಗಿದ್ದರೂ ಮತ ಚಲಾಯಿಸದಂತೆ ಆಯಿತು. ಆ ಮೂಲಕ ಬಿಜೆಪಿ ತನ್ನ ಕುತಂತ್ರ ಬುದ್ಧಿಯಲ್ಲಿ ಯಶ ಸಾಧಿಸಿತು’ ಎಂದು ಟೀಕಿಸಿದ್ದಾರೆ.</p>.<p>‘ಕೇಂದ್ರಕ್ಕೆ ನಿಜಕ್ಕೂ ಮಹಿಳಾ ಮೀಸಲು ಜಾರಿಯ ಸದುದ್ದೇಶವಿದ್ದರೆ ತಿದ್ದುಪಡಿ ಮಸೂದೆಯನ್ನು ಪ್ರತ್ಯೇಕವಾಗಿ ಮಂಡಿಸಬೇಕಿತ್ತು. ಎರಡು ಪ್ರಮುಖ ರಾಜ್ಯಗಳ ಚುನಾವಣೆ ವೇಳೆ ವಿಶೇಷ ಅಧಿವೇಶನ ಕರೆದು ಮಸೂದೆ ಮಂಡಿಸುವ ತುರ್ತು ಏನಿತ್ತು? ಇದು ನೀತಿಸಂಹಿತೆ ಉಲ್ಲಂಘನೆ ಆಗುವುದಿಲ್ಲವೇ?’ ಎಂದು ಕೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-39-409868081</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಮಹಿಳಾ ಮೀಸಲು ಮಸೂದೆಗೆ ಸೋಲುಂಟಾಗಲು ಕೇಂದ್ರ ಸರ್ಕಾರವೇ ನೇರ ಕಾರಣವಾಗಿದ್ದು, ಬಿಜೆಪಿಯ ಹುನ್ನಾರಕ್ಕೆ ಜಯ ಸಿಗಲಿಲ್ಲ’ ಎಂದು ಕಾಂಗ್ರೆಸ್ ಮುಖಂಡ ಕೆ.ವಿ. ಮಲ್ಲೇಶ್ ಆರೋಪಿಸಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಮಹಿಳಾ ಮೀಸಲು ಮಸೂದೆ ಜೊತೆಗೆ ಕ್ಷೇತ್ರ ಪುನರ್ ವಿಂಗಡಣೆಯ ಮಸೂದೆಯನ್ನೂ ಕೇಂದ್ರ ತಂದಿತ್ತು. ಈ ಮೂಲಕ ತನ್ನ ಕಾರ್ಯಸೂಚಿ ಜಾರಿಗೆ ಹುನ್ನಾರ ನಡೆಸಿತ್ತು. ಕೇಂದ್ರದ ಈ ಕುತಂತ್ರದ ಬಲೆಯೊಳಗೆ ಸಿಲುಕಿದ ವಿರೋಧ ಪಕ್ಷಗಳು ಮಹಿಳಾ ಮೀಸಲು ಪರವಾಗಿದ್ದರೂ ಮತ ಚಲಾಯಿಸದಂತೆ ಆಯಿತು. ಆ ಮೂಲಕ ಬಿಜೆಪಿ ತನ್ನ ಕುತಂತ್ರ ಬುದ್ಧಿಯಲ್ಲಿ ಯಶ ಸಾಧಿಸಿತು’ ಎಂದು ಟೀಕಿಸಿದ್ದಾರೆ.</p>.<p>‘ಕೇಂದ್ರಕ್ಕೆ ನಿಜಕ್ಕೂ ಮಹಿಳಾ ಮೀಸಲು ಜಾರಿಯ ಸದುದ್ದೇಶವಿದ್ದರೆ ತಿದ್ದುಪಡಿ ಮಸೂದೆಯನ್ನು ಪ್ರತ್ಯೇಕವಾಗಿ ಮಂಡಿಸಬೇಕಿತ್ತು. ಎರಡು ಪ್ರಮುಖ ರಾಜ್ಯಗಳ ಚುನಾವಣೆ ವೇಳೆ ವಿಶೇಷ ಅಧಿವೇಶನ ಕರೆದು ಮಸೂದೆ ಮಂಡಿಸುವ ತುರ್ತು ಏನಿತ್ತು? ಇದು ನೀತಿಸಂಹಿತೆ ಉಲ್ಲಂಘನೆ ಆಗುವುದಿಲ್ಲವೇ?’ ಎಂದು ಕೇಳಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-39-409868081</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>