<p><strong>ಪುದುಚೆರಿ:</strong> ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೆರಿಯಲ್ಲಿ ಸತತ ಎರಡನೇ ಅವಧಿಗೆ ಎನ್ಡಿಎ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಆಗಿರುವ ಎನ್. ರಂಗಸಾಮಿ ಅವರು ತಟ್ಟಂಚವಾಡಿ ವಿಧಾನಸಭಾ ಕ್ಷೇತ್ರದಲ್ಲಿ 4,441 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಆ ಮೂಲಕ ಅವರು 5ನೇ ಬಾರಿ ಸಿಎಂ ಆಗಿ ಆಯ್ಕೆಯಾಗುವ ನಿರೀಕ್ಷೆಯಿದೆ.</p><p>30 ಶಾಸಕರ ಸದಸ್ಯ ಬಲ ಹೊಂದಿರುವ ಪುದುಚೆರಿ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಕನಿಷ್ಠ 16 ಸ್ಥಾನ ಗೆಲ್ಲಬೇಕಿದೆ. ಸದ್ಯ, 17 ಕ್ಷೇತ್ರಗಳಲ್ಲಿ ಎನ್ಡಿಎ ಗೆಲುವು ಸಾಧಿಸಿದೆ. </p><p>ಪುದುಚೆರಿಯಲ್ಲಿ ಎನ್ಡಿಎ ಮೈತ್ರಿಕೂಟವನ್ನು ರಂಗಸ್ವಾಮಿ ಅವರ ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ (ಎಐಎನ್ಆರ್ಸಿ) ಮುನ್ನಡೆಸುತ್ತಿದೆ. ಇದರ ಜೊತೆಗೆ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಇತರ ಮಿತ್ರಪಕ್ಷಗಳಾಗಿವೆ. </p><p>ಎನ್. ರಂಗಸಾಮಿ ಅವರು ಪ್ರಾಯೋಗಿಕ ಆಡಳಿತ, ಕಲ್ಯಾಣ ಕಾರ್ಯಕ್ರಮಗಳಿಂದ ಮತ್ತು ಜನಸಾಮಾನ್ಯರ ಜೊತೆ ವ್ಯವಹರಿಸುವ ರೀತಿಯಿಂದಾಗಿ ಅವರು ತಮ್ಮ 75ನೇ ವಯಸ್ಸಿನಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಗಾಧಿಗೆ ಏರುವುದು ಬಹುತೇಕ ಖಚಿತವಾಗಿದೆ. </p><p>ರಂಗಸಾಮಿ ಅವರು ಟ್ಯಾಗೋರ್ ಕಲಾ ಕಾಲೇಜಿನಲ್ಲಿ ವಾಣಿಜ್ಯ ಪದವಿಯನ್ನು ಪೂರ್ಣಗೊಳಿಸಿದರು. ಬಳಿಕ ಡಾ. ಅಂಬೇಡ್ಕರ್ ಸರ್ಕಾರಿ ಕಾನೂನು ಕಾಲೇಜಿನಿಂದ ಕಾನೂನು ಪದವಿಯನ್ನು ಪಡೆದುಕೊಂಡರು. </p><p>ಅವರು 1990ರ ದಶಕದಲ್ಲಿ ಮೊದಲ ಬಾರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಂದಿಗೆ ರಾಜಕೀಯ ಪ್ರವೇಶಿಸಿದರು. 2001 ರಲ್ಲಿ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ತಮ್ಮ ಮೊದಲ ಅಧಿಕಾರಾವಧಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಕಾರೈಕಲ್ನಲ್ಲಿ ಕಣ್ಣಿನ ಆಸ್ಪತ್ರೆ ಮತ್ತು ಪುದುಚೆರಿಯಾದ್ಯಂತ ಉತ್ತಮ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಯಶಸ್ವಿಯಾದರು. </p><p>2006ರಲ್ಲಿ ಮತ್ತೆ ಮುಖ್ಯಮಂತ್ರಿಯಾದರು. ಬಳಿಕ ಕಾಂಗ್ರೆಸ್ ಜೊತೆ ಸಂಘರ್ಷದ ಬಳಿಕ ಅವರು 2008ರಲ್ಲಿ ರಾಜೀನಾಮೆ ನೀಡಿ ಫೆಬ್ರವರಿ 2011 ರಲ್ಲಿ ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ (ಎಐಎನ್ಆರ್ಸಿ) ಅನ್ನು ಸ್ಥಾಪಿಸಿದರು. ಅವರ ಹೊಸ ಪಕ್ಷವು ಮಿತ್ರಪಕ್ಷಗಳೊಂದಿಗೆ ಅಧಿಕಾರಕ್ಕೆ ಬಂದಿತು ಮತ್ತು ಅವರು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.</p><p>ಅವರು 2021 ರಲ್ಲಿ ಬಿಜೆಪಿಯೊಂದಿಗೆ NDA ಮೈತ್ರಿಕೂಟಕ್ಕೆ ಸೇರಿದರು. ಅವರು ಪೆರುಂತಲೈವರ್ ಕಾಮರಾಜರ್ ವಸತಿ ಯೋಜನೆ ಸೇರಿದಂತೆ ಹಲವಾರು ಪ್ರಮುಖ ಕಲ್ಯಾಣ ಕಾರ್ಯಕ್ರಮಗಳನ್ನು ಆರಂಭಿಸಿದರು. ಆ ಮೂಲಕ ಅನೇಕ ಕುಟುಂಬಗಳಿಗೆ ಸಬ್ಸಿಡಿ ಸಹಾಯದಿಂದ ಗುಡಿಸಲು ಮನೆಯಿಂದ ಕಾಂಕ್ರೀಟ್ ಮನೆಗಳಿಗೆ ಬದಲಾಯಿಸಲು ನೆರವಾದರು.</p><p>ಸದ್ಯ, ಈಗಾಗಲೆ 4 ಬಾರಿ ಸಿಎಂ ಆಗಿರುವ ಅವರು ಈ ಬಾರಿಯು ಕೂಡ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದ್ದು, ಆ ಮೂಲಕ ಐದನೇ ಬಾರಿ ಮುಖ್ಯಮಂತ್ರಿ ಗಾಧಿಗೆ ಏರುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುದುಚೆರಿ:</strong> ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೆರಿಯಲ್ಲಿ ಸತತ ಎರಡನೇ ಅವಧಿಗೆ ಎನ್ಡಿಎ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಹಾಲಿ ಮುಖ್ಯಮಂತ್ರಿ ಆಗಿರುವ ಎನ್. ರಂಗಸಾಮಿ ಅವರು ತಟ್ಟಂಚವಾಡಿ ವಿಧಾನಸಭಾ ಕ್ಷೇತ್ರದಲ್ಲಿ 4,441 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ. ಆ ಮೂಲಕ ಅವರು 5ನೇ ಬಾರಿ ಸಿಎಂ ಆಗಿ ಆಯ್ಕೆಯಾಗುವ ನಿರೀಕ್ಷೆಯಿದೆ.</p><p>30 ಶಾಸಕರ ಸದಸ್ಯ ಬಲ ಹೊಂದಿರುವ ಪುದುಚೆರಿ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಕನಿಷ್ಠ 16 ಸ್ಥಾನ ಗೆಲ್ಲಬೇಕಿದೆ. ಸದ್ಯ, 17 ಕ್ಷೇತ್ರಗಳಲ್ಲಿ ಎನ್ಡಿಎ ಗೆಲುವು ಸಾಧಿಸಿದೆ. </p><p>ಪುದುಚೆರಿಯಲ್ಲಿ ಎನ್ಡಿಎ ಮೈತ್ರಿಕೂಟವನ್ನು ರಂಗಸ್ವಾಮಿ ಅವರ ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ (ಎಐಎನ್ಆರ್ಸಿ) ಮುನ್ನಡೆಸುತ್ತಿದೆ. ಇದರ ಜೊತೆಗೆ ಬಿಜೆಪಿ ಮತ್ತು ಎಐಎಡಿಎಂಕೆ ಪಕ್ಷಗಳು ಇತರ ಮಿತ್ರಪಕ್ಷಗಳಾಗಿವೆ. </p><p>ಎನ್. ರಂಗಸಾಮಿ ಅವರು ಪ್ರಾಯೋಗಿಕ ಆಡಳಿತ, ಕಲ್ಯಾಣ ಕಾರ್ಯಕ್ರಮಗಳಿಂದ ಮತ್ತು ಜನಸಾಮಾನ್ಯರ ಜೊತೆ ವ್ಯವಹರಿಸುವ ರೀತಿಯಿಂದಾಗಿ ಅವರು ತಮ್ಮ 75ನೇ ವಯಸ್ಸಿನಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಗಾಧಿಗೆ ಏರುವುದು ಬಹುತೇಕ ಖಚಿತವಾಗಿದೆ. </p><p>ರಂಗಸಾಮಿ ಅವರು ಟ್ಯಾಗೋರ್ ಕಲಾ ಕಾಲೇಜಿನಲ್ಲಿ ವಾಣಿಜ್ಯ ಪದವಿಯನ್ನು ಪೂರ್ಣಗೊಳಿಸಿದರು. ಬಳಿಕ ಡಾ. ಅಂಬೇಡ್ಕರ್ ಸರ್ಕಾರಿ ಕಾನೂನು ಕಾಲೇಜಿನಿಂದ ಕಾನೂನು ಪದವಿಯನ್ನು ಪಡೆದುಕೊಂಡರು. </p><p>ಅವರು 1990ರ ದಶಕದಲ್ಲಿ ಮೊದಲ ಬಾರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನೊಂದಿಗೆ ರಾಜಕೀಯ ಪ್ರವೇಶಿಸಿದರು. 2001 ರಲ್ಲಿ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದರು. ತಮ್ಮ ಮೊದಲ ಅಧಿಕಾರಾವಧಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಕಾರೈಕಲ್ನಲ್ಲಿ ಕಣ್ಣಿನ ಆಸ್ಪತ್ರೆ ಮತ್ತು ಪುದುಚೆರಿಯಾದ್ಯಂತ ಉತ್ತಮ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಯಶಸ್ವಿಯಾದರು. </p><p>2006ರಲ್ಲಿ ಮತ್ತೆ ಮುಖ್ಯಮಂತ್ರಿಯಾದರು. ಬಳಿಕ ಕಾಂಗ್ರೆಸ್ ಜೊತೆ ಸಂಘರ್ಷದ ಬಳಿಕ ಅವರು 2008ರಲ್ಲಿ ರಾಜೀನಾಮೆ ನೀಡಿ ಫೆಬ್ರವರಿ 2011 ರಲ್ಲಿ ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ (ಎಐಎನ್ಆರ್ಸಿ) ಅನ್ನು ಸ್ಥಾಪಿಸಿದರು. ಅವರ ಹೊಸ ಪಕ್ಷವು ಮಿತ್ರಪಕ್ಷಗಳೊಂದಿಗೆ ಅಧಿಕಾರಕ್ಕೆ ಬಂದಿತು ಮತ್ತು ಅವರು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.</p><p>ಅವರು 2021 ರಲ್ಲಿ ಬಿಜೆಪಿಯೊಂದಿಗೆ NDA ಮೈತ್ರಿಕೂಟಕ್ಕೆ ಸೇರಿದರು. ಅವರು ಪೆರುಂತಲೈವರ್ ಕಾಮರಾಜರ್ ವಸತಿ ಯೋಜನೆ ಸೇರಿದಂತೆ ಹಲವಾರು ಪ್ರಮುಖ ಕಲ್ಯಾಣ ಕಾರ್ಯಕ್ರಮಗಳನ್ನು ಆರಂಭಿಸಿದರು. ಆ ಮೂಲಕ ಅನೇಕ ಕುಟುಂಬಗಳಿಗೆ ಸಬ್ಸಿಡಿ ಸಹಾಯದಿಂದ ಗುಡಿಸಲು ಮನೆಯಿಂದ ಕಾಂಕ್ರೀಟ್ ಮನೆಗಳಿಗೆ ಬದಲಾಯಿಸಲು ನೆರವಾದರು.</p><p>ಸದ್ಯ, ಈಗಾಗಲೆ 4 ಬಾರಿ ಸಿಎಂ ಆಗಿರುವ ಅವರು ಈ ಬಾರಿಯು ಕೂಡ ಮುಖ್ಯಮಂತ್ರಿಯಾಗುವ ಸಾಧ್ಯತೆ ಹೆಚ್ಚಿದ್ದು, ಆ ಮೂಲಕ ಐದನೇ ಬಾರಿ ಮುಖ್ಯಮಂತ್ರಿ ಗಾಧಿಗೆ ಏರುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>