<p><strong>ಪುದುಚೆರಿ:</strong> 2026ರ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಎಐಎನ್ಆರ್ಸಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ್ದು, ಎಐಎನ್ಆರ್ಸಿ ಮುಖ್ಯಸ್ಥ ಎನ್.ರಂಗಸಾಮಿ ಅವರು ಐದನೇ ಬಾರಿಗೆ ಪುದುಚೆರಿಯನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.</p> <p>ಇಂದು (ಶುಕ್ರವಾರ) ನಡೆದ ಸಭೆಯಲ್ಲಿ ಎನ್ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಎನ್.ರಂಗಸಾಮಿ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಅಲ್ಲದೇ ಎ.ನಮಸ್ಸಿವಾಯಂ ಅವರು ಪಕ್ಷದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.</p> <p>ಪುದುಚೆರಿಯ 15ನೇ ವಿಧಾನಸಭೆಯನ್ನು ಮೇ 5ರಿಂದ ಜಾರಿಗೆ ಬರುವಂತೆ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್ನಾಥನ್ ಅವರು ಗುರುವಾರ ವಿಸರ್ಜಿಸಿದ್ದಾರೆ.</p> <p>30 ಸದಸ್ಯ ಬಲದ ಪುದುಚೆರಿ ವಿಧಾನಸಭೆಗೆ ಏಪ್ರಿಲ್ 9 ರಂದು ಚುನಾವಣೆ ನಡೆದಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಿತ್ತು. ಎಐಎನ್ಆರ್ಸಿ 12 ಸ್ಥಾನಗಳನ್ನು ಮತ್ತು ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆದ್ದಿದೆ.</p> <p>ಕಾಂಗ್ರೆಸ್ ಮತ್ತು ಎಐಎಡಿಎಂಕೆ ತಲಾ ಒಂದು ಸ್ಥಾನ, ಡಿಎಂಕೆ ಐದು ಸ್ಥಾನಗಳಲ್ಲಿ ಜಯ ಗಳಿಸಿತ್ತು. ತಮಿಳುನಾಡಿನಲ್ಲಿ ಚೊಚ್ಚಲ ಪ್ರಯತ್ನದಲ್ಲೇ ಅಭೂತಪೂರ್ವ ಸಾಧನೆ ಮಾಡಿರುವ ಟಿವಿಕೆ ಕೂಡ ಇಲ್ಲಿ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆದಿದೆ</p>.2 ಕ್ಷೇತ್ರಗಳಲ್ಲೂ ಗೆಲುವು: 5ನೇ ಬಾರಿ ಪುದುಚೆರಿ ಸಿಎಂ ಆಗಲಿರುವ ರಂಗಸ್ವಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುದುಚೆರಿ:</strong> 2026ರ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಎಐಎನ್ಆರ್ಸಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ್ದು, ಎಐಎನ್ಆರ್ಸಿ ಮುಖ್ಯಸ್ಥ ಎನ್.ರಂಗಸಾಮಿ ಅವರು ಐದನೇ ಬಾರಿಗೆ ಪುದುಚೆರಿಯನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.</p> <p>ಇಂದು (ಶುಕ್ರವಾರ) ನಡೆದ ಸಭೆಯಲ್ಲಿ ಎನ್ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಎನ್.ರಂಗಸಾಮಿ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಅಲ್ಲದೇ ಎ.ನಮಸ್ಸಿವಾಯಂ ಅವರು ಪಕ್ಷದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.</p> <p>ಪುದುಚೆರಿಯ 15ನೇ ವಿಧಾನಸಭೆಯನ್ನು ಮೇ 5ರಿಂದ ಜಾರಿಗೆ ಬರುವಂತೆ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್ನಾಥನ್ ಅವರು ಗುರುವಾರ ವಿಸರ್ಜಿಸಿದ್ದಾರೆ.</p> <p>30 ಸದಸ್ಯ ಬಲದ ಪುದುಚೆರಿ ವಿಧಾನಸಭೆಗೆ ಏಪ್ರಿಲ್ 9 ರಂದು ಚುನಾವಣೆ ನಡೆದಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಿತ್ತು. ಎಐಎನ್ಆರ್ಸಿ 12 ಸ್ಥಾನಗಳನ್ನು ಮತ್ತು ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆದ್ದಿದೆ.</p> <p>ಕಾಂಗ್ರೆಸ್ ಮತ್ತು ಎಐಎಡಿಎಂಕೆ ತಲಾ ಒಂದು ಸ್ಥಾನ, ಡಿಎಂಕೆ ಐದು ಸ್ಥಾನಗಳಲ್ಲಿ ಜಯ ಗಳಿಸಿತ್ತು. ತಮಿಳುನಾಡಿನಲ್ಲಿ ಚೊಚ್ಚಲ ಪ್ರಯತ್ನದಲ್ಲೇ ಅಭೂತಪೂರ್ವ ಸಾಧನೆ ಮಾಡಿರುವ ಟಿವಿಕೆ ಕೂಡ ಇಲ್ಲಿ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆದಿದೆ</p>.2 ಕ್ಷೇತ್ರಗಳಲ್ಲೂ ಗೆಲುವು: 5ನೇ ಬಾರಿ ಪುದುಚೆರಿ ಸಿಎಂ ಆಗಲಿರುವ ರಂಗಸ್ವಾಮಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>