ದೆಹಲಿ ಸಮೀಪದ ಗೌತಮ್ಬುದ್ಧ ನಗರ ಜಿಲ್ಲೆಯ ಪಶ್ಚಿಮ ಉತ್ತರ ಪ್ರದೇಶಕ್ಕೆ ಸೇರಿದ ಛಾಪುರಲಿ ಹಳ್ಳಿಯಲ್ಲಿ ಈ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ’ಸೆಪ್ಟಂಬರ್ 17ಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ 70 ವರ್ಷಗಳು ತುಂಬುತ್ತವೆ. ಅವರು ತಮ್ಮ ಜೀವನವನ್ನು ದೇಶದ ಜನರ ಸೇವೆಗಾಗಿ ಮೀಸಲಿಟ್ಟಿದ್ದಾರೆ. ಹೀಗಾಗಿ ಬಿಜೆಪಿ, ಸೆಪ್ಟೆಂಬರ್ 14 ರಿಂದ 20ರವರೆಗೆ ’ಸೇವಾ ಸಪ್ತಾಹ’ ಅಭಿಯಾನವಾಗಿ ಆಚರಿಸಲು ನಿರ್ಧರಿಸಿದೆ’ ಎಂದು ನಡ್ಡಾ ಈ ಸಂದರ್ಭದಲ್ಲಿ ತಿಳಿಸಿದರು.