<p><strong>ಕೋಲ್ಕತ್ತ: </strong>ಬಿಜೆಪಿಯ ಹಿರಿಯ ನಾಯಕರಾದ ಜೆ.ಪಿ. ನಡ್ಡಾ ಮತ್ತು ಅಮಿತ್ ಶಾ ಅವರು ಮಂಗಳವಾರ ಪಶ್ಚಿಮಬಂಗಾಳಕ್ಕೆ ಭೇಟಿ ನೀಡಿ, ಸರಣಿ ಸಭೆಗಳು ಮತ್ತು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಇದರೊಂದಿಗೆ ರಾಜ್ಯದಲ್ಲಿ ಲೋಕಸಭೆ ಚುನಾವಣೆಗಾಗಿ ಪಕ್ಷದ ಸಿದ್ಧತೆಗಳಿಗೆ ಚಾಲನೆ ನೀಡಿದರು.</p><p>ಸೋಮವಾರ ತಡರಾತ್ರಿಯೇ ಇಲ್ಲಿಗೆ ಬಂದ ಈ ಇಬ್ಬರು ನಾಯಕರು ಮಂಗಳವಾರ ಗುರುದ್ವಾರ ಮತ್ತು ಕಾಲಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ಒಂದರ ಮೇಲೆ ಒಂದರಂತೆ ಸಂಘಟನಾ ಸಭೆಗಳನ್ನು ನಡೆಸಿದರು.</p> <p>ಮುಂಬರುವ ಚುನಾವಣೆಗಾಗಿ ಸಿದ್ಧತೆ ಕೈಗೊಳ್ಳಲು 15 ಸದಸ್ಯರ ತಂಡವನ್ನು ರಚಿಸಲಾಗಿದೆ. ಈ ತಂಡದಲ್ಲಿ ರಾಜ್ಯದ ನಾಲ್ವರು ಕೇಂದ್ರ ಸಚಿವರ ಹೆಸರುಗಳು ಇಲ್ಲ ಎಂದು ಪಕ್ಷದ ಮೂಲಗಳು ಹೇಳಿವೆ.</p><p>ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ರಾಜ್ಯದಲ್ಲಿನ 42 ಸ್ಥಾನಗಳ ಪೈಕಿ 18 ಸ್ಥಾನಗಳನ್ನು ಪಡೆದಿತ್ತು. ಮುಂಬರುವ ಚುನಾವಣೆಯಲ್ಲಿ 35 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕೆಂಬ ಗುರಿಯನ್ನು ಅಮಿತ್ ಶಾ ಅವರು ರಾಜ್ಯ ಘಟಕಕ್ಕೆ ನಿಗದಿಪಡಿಸಿದ್ದಾರೆ.</p><p> ರಾಷ್ಟ್ರೀಯ ಗ್ರಂಥಾಲಯಲ್ಲಿ ನಡ್ಡಾ ಮತ್ತು ಶಾ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡಲು 1500 ಮಂದಿ ಮುಂದೆ ಬಂದಿದ್ದಾರೆ. </p>.<p>ಭ್ರಷ್ಟಾಚಾರ, ರಾಜಕೀಯದಲ್ಲಿ ಕುಟುಂಬ ಸದಸ್ಯರಿಗೆ ಉತ್ತೇಜನ ಮತ್ತು ನಿರುದ್ಯೋಗದಂತಹ ವಿಷಯಗಳನ್ನು ರಾಜ್ಯದ ಬಿಜೆಪಿ ನಾಯಕರು ಚರ್ಚಿಸಿದರು. ಮುಂದೆ ಚುನಾವಣಾ ಪ್ರಚಾರದ ವೇಳೆಯೂ ಈ ವಿಷಯಗಳು ಪ್ರಧಾನವಾಗಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.</p>.<p>ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 35 ಸ್ಥಾನಗಳನ್ನು ಪಡೆಯುವುದು ದೂರದ ಮಾತು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.</p>.<p>ಬಿಜೆಪಿ ನಾಯಕರನ್ನು ‘ನಿತ್ಯ ಪ್ರಯಾಣಿಸುವ ಪ್ರಯಾಣಿಕರು‘ ಎಂದು ಬಣ್ಣಿಸಿದ ಅವರು, ರಾಜ್ಯಕ್ಕೆ ಹೆಚ್ಚು ನಾಯಕರು ಭೇಟಿ ನೀಡಿದಷ್ಟೂ ಬಿಜೆಪಿಯು ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದಿದ್ದಾರೆ. </p>.<p>* 15 ಸದಸ್ಯರ ತಂಡ ರಚನೆ </p><p>* ರಾಜ್ಯದ 42 ಕ್ಷೇತ್ರಗಳ ಪೈಕಿ 35ರಲ್ಲಿ ಗೆಲ್ಲುವ ಗುರಿ </p>.<p>ಪಶ್ಚಿಮಬಂಗಾಳದಲ್ಲಿ ಬಿಜೆಪಿಯು ಮೂರರಿಂದ ಐದು ಸ್ಥಾನಗಳಲ್ಲಿ ಗೆಲ್ಲುವ ಸಾಮರ್ಥ್ಯವನ್ನು ಮೊದಲು ಪ್ರದರ್ಶಿಸಲಿ </p><p>-ಕುನಾಲ್ ಘೋಷ್, ಟಿಎಂಸಿ ವಕ್ತಾರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಬಿಜೆಪಿಯ ಹಿರಿಯ ನಾಯಕರಾದ ಜೆ.ಪಿ. ನಡ್ಡಾ ಮತ್ತು ಅಮಿತ್ ಶಾ ಅವರು ಮಂಗಳವಾರ ಪಶ್ಚಿಮಬಂಗಾಳಕ್ಕೆ ಭೇಟಿ ನೀಡಿ, ಸರಣಿ ಸಭೆಗಳು ಮತ್ತು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಇದರೊಂದಿಗೆ ರಾಜ್ಯದಲ್ಲಿ ಲೋಕಸಭೆ ಚುನಾವಣೆಗಾಗಿ ಪಕ್ಷದ ಸಿದ್ಧತೆಗಳಿಗೆ ಚಾಲನೆ ನೀಡಿದರು.</p><p>ಸೋಮವಾರ ತಡರಾತ್ರಿಯೇ ಇಲ್ಲಿಗೆ ಬಂದ ಈ ಇಬ್ಬರು ನಾಯಕರು ಮಂಗಳವಾರ ಗುರುದ್ವಾರ ಮತ್ತು ಕಾಲಿಘಾಟ್ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ಒಂದರ ಮೇಲೆ ಒಂದರಂತೆ ಸಂಘಟನಾ ಸಭೆಗಳನ್ನು ನಡೆಸಿದರು.</p> <p>ಮುಂಬರುವ ಚುನಾವಣೆಗಾಗಿ ಸಿದ್ಧತೆ ಕೈಗೊಳ್ಳಲು 15 ಸದಸ್ಯರ ತಂಡವನ್ನು ರಚಿಸಲಾಗಿದೆ. ಈ ತಂಡದಲ್ಲಿ ರಾಜ್ಯದ ನಾಲ್ವರು ಕೇಂದ್ರ ಸಚಿವರ ಹೆಸರುಗಳು ಇಲ್ಲ ಎಂದು ಪಕ್ಷದ ಮೂಲಗಳು ಹೇಳಿವೆ.</p><p>ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ರಾಜ್ಯದಲ್ಲಿನ 42 ಸ್ಥಾನಗಳ ಪೈಕಿ 18 ಸ್ಥಾನಗಳನ್ನು ಪಡೆದಿತ್ತು. ಮುಂಬರುವ ಚುನಾವಣೆಯಲ್ಲಿ 35 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕೆಂಬ ಗುರಿಯನ್ನು ಅಮಿತ್ ಶಾ ಅವರು ರಾಜ್ಯ ಘಟಕಕ್ಕೆ ನಿಗದಿಪಡಿಸಿದ್ದಾರೆ.</p><p> ರಾಷ್ಟ್ರೀಯ ಗ್ರಂಥಾಲಯಲ್ಲಿ ನಡ್ಡಾ ಮತ್ತು ಶಾ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡಲು 1500 ಮಂದಿ ಮುಂದೆ ಬಂದಿದ್ದಾರೆ. </p>.<p>ಭ್ರಷ್ಟಾಚಾರ, ರಾಜಕೀಯದಲ್ಲಿ ಕುಟುಂಬ ಸದಸ್ಯರಿಗೆ ಉತ್ತೇಜನ ಮತ್ತು ನಿರುದ್ಯೋಗದಂತಹ ವಿಷಯಗಳನ್ನು ರಾಜ್ಯದ ಬಿಜೆಪಿ ನಾಯಕರು ಚರ್ಚಿಸಿದರು. ಮುಂದೆ ಚುನಾವಣಾ ಪ್ರಚಾರದ ವೇಳೆಯೂ ಈ ವಿಷಯಗಳು ಪ್ರಧಾನವಾಗಿ ಪ್ರಸ್ತಾಪವಾಗುವ ಸಾಧ್ಯತೆ ಇದೆ.</p>.<p>ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 35 ಸ್ಥಾನಗಳನ್ನು ಪಡೆಯುವುದು ದೂರದ ಮಾತು ಟಿಎಂಸಿ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.</p>.<p>ಬಿಜೆಪಿ ನಾಯಕರನ್ನು ‘ನಿತ್ಯ ಪ್ರಯಾಣಿಸುವ ಪ್ರಯಾಣಿಕರು‘ ಎಂದು ಬಣ್ಣಿಸಿದ ಅವರು, ರಾಜ್ಯಕ್ಕೆ ಹೆಚ್ಚು ನಾಯಕರು ಭೇಟಿ ನೀಡಿದಷ್ಟೂ ಬಿಜೆಪಿಯು ಹೆಚ್ಚು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದಿದ್ದಾರೆ. </p>.<p>* 15 ಸದಸ್ಯರ ತಂಡ ರಚನೆ </p><p>* ರಾಜ್ಯದ 42 ಕ್ಷೇತ್ರಗಳ ಪೈಕಿ 35ರಲ್ಲಿ ಗೆಲ್ಲುವ ಗುರಿ </p>.<p>ಪಶ್ಚಿಮಬಂಗಾಳದಲ್ಲಿ ಬಿಜೆಪಿಯು ಮೂರರಿಂದ ಐದು ಸ್ಥಾನಗಳಲ್ಲಿ ಗೆಲ್ಲುವ ಸಾಮರ್ಥ್ಯವನ್ನು ಮೊದಲು ಪ್ರದರ್ಶಿಸಲಿ </p><p>-ಕುನಾಲ್ ಘೋಷ್, ಟಿಎಂಸಿ ವಕ್ತಾರ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>