<p><strong>ನವದೆಹಲಿ</strong>: ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ (ಎಫ್ಎನ್ಟಿಎ) ರಚನೆಗೆ ತ್ರಿಪಕ್ಷೀಯ ಒಪ್ಪಂದವು ಐತಿಹಾಸಿಕವಾಗಿದ್ದು, ಈಶಾನ್ಯ ಭಾಗದಲ್ಲಿ ಶಾಂತಿ ಮತ್ತು ಸಮಗ್ರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಅಭಿಪ್ರಾಯಪಟ್ಟಿದ್ದಾರೆ.</p><p>ಈ ಐತಿಹಾಸಿಕ ಒಪ್ಪಂದದಿಂದ ಪೂರ್ವ ನಾಗಾಲ್ಯಾಂಡ್ನಲ್ಲಿ ಅಭಿವೃದ್ಧಿಯ ವೇಗ ಹೆಚ್ಚಾಗಲಿದೆ ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ಪೂರ್ವ ನಾಗಾಲ್ಯಾಂಡ್ನ ಬೇಡಿಕೆಗಳನ್ನು ಪರಿಹರಿಸುವ ಗುರಿಯನ್ನು ಈಡೇರಿಸುವ ನಿಟ್ಟಿನಲ್ಲಿ ’ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚಿಸಲಾಗಿದೆ. ಈ ಒಪ್ಪಂದ ಕೇಂದ್ರ ಸರ್ಕಾರ, ನಾಗಾಲ್ಯಾಂಡ್ ಸರ್ಕಾರ ಮತ್ತು ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ನೊಂದಿಗೆ ನಡೆದಿದೆ.</p>.ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ: ಡಿಕೆಶಿ.1,500 ಕಾಗೆಗಳ ಹಠಾತ್ ಸಾವು: ತಮಿಳುನಾಡಿನಲ್ಲಿ ಹಕ್ಕಿ ಜ್ವರ ಭೀತಿ, ‘ಹೈ ಅಲರ್ಟ್’. <p>ಈ ಒಪ್ಪಂದ ಜನರಿಗೆ ಅವಕಾಶ ಮತ್ತು ಸಮೃದ್ಧಿಯ ಮಾರ್ಗ ಒದಗಿಸುತ್ತದೆ. ಈಶಾನ್ಯದಲ್ಲಿ ಶಾಂತಿ, ಪ್ರಗತಿ ಮತ್ತು ಸಮಗ್ರ ಬೆಳವಣಿಗೆಗೆ ನಮ್ಮ ಸರ್ಕಾರದ ಬದ್ಧತೆಯನ್ನು ಈ ಒಪ್ಪಂದ ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.</p><p>ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೊ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.</p><p>ಈ ಒಪ್ಪಂದವು ನಾಗಾಲ್ಯಾಂಡ್ನ ಆರು ಜಿಲ್ಲೆಗಳಾದ ಟ್ಯೂನ್ಸಾಂಗ್, ಮಾನ್, ಕಿಫೈರ್, ಲಾಂಗ್ಲೆಂಗ್, ನೋಕ್ಲಾಕ್ ಮತ್ತು ಶಮಾಟರ್ಗಳಿಗೆ ಸಹಕಾರಿಯಾಗಲಿದೆ. ಎಫ್ಎನ್ಟಿಎಗೆ 46 ವಿಷಯಗಳು ಒಳಪಡಲಿದ್ದು ಅಧಿಕಾರ ವಿಕೇಂದ್ರೀಕರಣಕ್ಕೆ ದಾರಿ ಮಾಡಿಕೊಡಲಿದೆ ಎನ್ನಲಾಗಿದೆ.</p>.Ranji| ಕನ್ನಡಿಗರ ವೇಗದ ದಾಳಿಗೆ ತತ್ತರಿಸಿದ ಮುಂಬೈ: ಅಲ್ಪಮೊತ್ತಕ್ಕೆ ಅಲೌಟ್.ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಓಂ ಬಿರ್ಲಾ ಅಸಮಾಧಾನ.ಮೃಗಾಲಯಗಳ ಸಮಗ್ರ ಅಭಿವೃದ್ಧಿಗಾಗಿ CSR ನಿಧಿ: ವರದಿ ನೀಡಲು ಉಪ ಸಮಿತಿ ರಚಿಸಿದ CZA.15 ಬೌಂಡರಿ, 15 ಸಿಕ್ಸರ್: ಆಂಗ್ಲರ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಸೂರ್ಯವಂಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ (ಎಫ್ಎನ್ಟಿಎ) ರಚನೆಗೆ ತ್ರಿಪಕ್ಷೀಯ ಒಪ್ಪಂದವು ಐತಿಹಾಸಿಕವಾಗಿದ್ದು, ಈಶಾನ್ಯ ಭಾಗದಲ್ಲಿ ಶಾಂತಿ ಮತ್ತು ಸಮಗ್ರ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಅಭಿಪ್ರಾಯಪಟ್ಟಿದ್ದಾರೆ.</p><p>ಈ ಐತಿಹಾಸಿಕ ಒಪ್ಪಂದದಿಂದ ಪೂರ್ವ ನಾಗಾಲ್ಯಾಂಡ್ನಲ್ಲಿ ಅಭಿವೃದ್ಧಿಯ ವೇಗ ಹೆಚ್ಚಾಗಲಿದೆ ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.</p><p>ಪೂರ್ವ ನಾಗಾಲ್ಯಾಂಡ್ನ ಬೇಡಿಕೆಗಳನ್ನು ಪರಿಹರಿಸುವ ಗುರಿಯನ್ನು ಈಡೇರಿಸುವ ನಿಟ್ಟಿನಲ್ಲಿ ’ಗಡಿನಾಡು ನಾಗಾಲ್ಯಾಂಡ್ ಪ್ರಾದೇಶಿಕ ಪ್ರಾಧಿಕಾರ ರಚಿಸಲಾಗಿದೆ. ಈ ಒಪ್ಪಂದ ಕೇಂದ್ರ ಸರ್ಕಾರ, ನಾಗಾಲ್ಯಾಂಡ್ ಸರ್ಕಾರ ಮತ್ತು ಪೂರ್ವ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಶನ್ನೊಂದಿಗೆ ನಡೆದಿದೆ.</p>.ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ: ಡಿಕೆಶಿ.1,500 ಕಾಗೆಗಳ ಹಠಾತ್ ಸಾವು: ತಮಿಳುನಾಡಿನಲ್ಲಿ ಹಕ್ಕಿ ಜ್ವರ ಭೀತಿ, ‘ಹೈ ಅಲರ್ಟ್’. <p>ಈ ಒಪ್ಪಂದ ಜನರಿಗೆ ಅವಕಾಶ ಮತ್ತು ಸಮೃದ್ಧಿಯ ಮಾರ್ಗ ಒದಗಿಸುತ್ತದೆ. ಈಶಾನ್ಯದಲ್ಲಿ ಶಾಂತಿ, ಪ್ರಗತಿ ಮತ್ತು ಸಮಗ್ರ ಬೆಳವಣಿಗೆಗೆ ನಮ್ಮ ಸರ್ಕಾರದ ಬದ್ಧತೆಯನ್ನು ಈ ಒಪ್ಪಂದ ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.</p><p>ನಾಗಾಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೊ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು.</p><p>ಈ ಒಪ್ಪಂದವು ನಾಗಾಲ್ಯಾಂಡ್ನ ಆರು ಜಿಲ್ಲೆಗಳಾದ ಟ್ಯೂನ್ಸಾಂಗ್, ಮಾನ್, ಕಿಫೈರ್, ಲಾಂಗ್ಲೆಂಗ್, ನೋಕ್ಲಾಕ್ ಮತ್ತು ಶಮಾಟರ್ಗಳಿಗೆ ಸಹಕಾರಿಯಾಗಲಿದೆ. ಎಫ್ಎನ್ಟಿಎಗೆ 46 ವಿಷಯಗಳು ಒಳಪಡಲಿದ್ದು ಅಧಿಕಾರ ವಿಕೇಂದ್ರೀಕರಣಕ್ಕೆ ದಾರಿ ಮಾಡಿಕೊಡಲಿದೆ ಎನ್ನಲಾಗಿದೆ.</p>.Ranji| ಕನ್ನಡಿಗರ ವೇಗದ ದಾಳಿಗೆ ತತ್ತರಿಸಿದ ಮುಂಬೈ: ಅಲ್ಪಮೊತ್ತಕ್ಕೆ ಅಲೌಟ್.ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಓಂ ಬಿರ್ಲಾ ಅಸಮಾಧಾನ.ಮೃಗಾಲಯಗಳ ಸಮಗ್ರ ಅಭಿವೃದ್ಧಿಗಾಗಿ CSR ನಿಧಿ: ವರದಿ ನೀಡಲು ಉಪ ಸಮಿತಿ ರಚಿಸಿದ CZA.15 ಬೌಂಡರಿ, 15 ಸಿಕ್ಸರ್: ಆಂಗ್ಲರ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಸೂರ್ಯವಂಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>