<p><strong>ನೆಲ್ಲೂರು(ಆಂಧ್ರಪ್ರದೇಶ):</strong> ಆಂಧ್ರ ಪ್ರದೇಶದಲ್ಲಿ ಬಿಜೆಪಿ, ಟಿಡಿಪಿ ಮತ್ತು ಜನಸೇನಾ ನೇತೃತ್ವದ ಸರ್ಕಾರ ರಚನೆಯಾದರೆ ಮುಸ್ಲಿಮರು ಮೆಕ್ಕಾಗೆ ಯಾತ್ರೆ ಕೈಗೊಳ್ಳಲು ₹1 ಲಕ್ಷ ಹಣಕಾಸಿನ ನೆರವು ನೀಡಲಾಗುವುದು ಎಂದು ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಹೇಳಿದ್ದಾರೆ.</p><p>ನೆಲ್ಲೂರು ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದವರ ಜೊತೆಗಿನ ಸಂವಾದದ ವೇಳೆ ನಾಯ್ಡು ಈ ಭರವಸೆ ನೀಡಿದ್ದಾರೆ.</p><p>‘ರಾಜ್ಯದಲ್ಲಿ ಎನ್ಡಿಎ ಮೈತ್ರಿಯು ಅಧಿಕಾರಕ್ಕೆ ಬಂದ ಕೂಡಲೇ ಪ್ರತಿಯೊಬ್ಬ ಮುಸ್ಲಿಂ ಮೆಕ್ಕಾಗೆ ಹಜ್ ಯಾತ್ರೆ ಕೈಗೊಳ್ಳಲು ತಲಾ ₹1 ಲಕ್ಷ ಹಣಕಾಸಿನ ನೆರವು ನೀಡಲಾಗುವುದು. ಮುಸ್ಲಿಮರ ರೊಟಿಯಯಾನ್ ಕಿ ಈದ್ ಅನ್ನು ನಾಡಿನ ಹಬ್ಬವೆಂದು ಘೋಷಿಸಲಾಗುವುದು, ಬೇರೆ ಸ್ಥಳಗಳಿಗೆ ಹೋಲಿಸಿದರೆ ಹೈದರಾಬಾದ್ ಮುಸ್ಲಿಮರು ಬಹಳ ಮುಂದಿದ್ದಾರೆ’ ಎಂದು ನಾಯ್ಡು ಹೇಳಿದ್ದಾರೆ.</p><p>ಈ ಹಿಂದೆ, ಕೇಂದ್ರದಲ್ಲಿ ಎನ್ಡಿಎ ಸರ್ಕಾರದ ಭಾಗವಾಗಿದ್ದ ಟಿಡಿಪಿ, ಮುಸ್ಲಿಮರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಂಡಿತ್ತು ಎಂದು ಹೇಳಿದ್ದಾರೆ.</p><p>ಟಿಡಿಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಹೈದರಾಬಾದ್ನಲ್ಲಿ ಉರ್ದು ವಿಶ್ವವಿದ್ಯಾಲಯ ಮತ್ತು ಹಜ್ ಭವನ ನಿರ್ಮಾಣ ಮಾಡಿದೆ. ಕಳೆದ 5 ವರ್ಷಗಳಲ್ಲಿ ಸಿಎಂ ಜಗನ್ ಒಂದು ಮಸೀದಿಯನ್ನೂ ಕಟ್ಟುವ ಪ್ರಯತ್ನ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಎನ್ಆರ್ಸಿಗೆ ವೈಎಸ್ಆರ್ಸಿಪಿ ಬೆಂಬಲ ಸೂಚಿಸಿದೆ ಎಂದು ಟೀಕಿಸಿದ್ದಾರೆ.</p><p>175 ವಿಧಾನಸಭಾ ಕ್ಷೇತ್ರಗಳು ಮತ್ತು 25 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಆಂಧ್ರಪ್ರದೇಶದಲ್ಲಿ ಮೇ 13ರಂದು ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಹೊರಬೀಳಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲ್ಲೂರು(ಆಂಧ್ರಪ್ರದೇಶ):</strong> ಆಂಧ್ರ ಪ್ರದೇಶದಲ್ಲಿ ಬಿಜೆಪಿ, ಟಿಡಿಪಿ ಮತ್ತು ಜನಸೇನಾ ನೇತೃತ್ವದ ಸರ್ಕಾರ ರಚನೆಯಾದರೆ ಮುಸ್ಲಿಮರು ಮೆಕ್ಕಾಗೆ ಯಾತ್ರೆ ಕೈಗೊಳ್ಳಲು ₹1 ಲಕ್ಷ ಹಣಕಾಸಿನ ನೆರವು ನೀಡಲಾಗುವುದು ಎಂದು ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಹೇಳಿದ್ದಾರೆ.</p><p>ನೆಲ್ಲೂರು ಜಿಲ್ಲೆಯಲ್ಲಿ ಮುಸ್ಲಿಂ ಸಮುದಾಯದವರ ಜೊತೆಗಿನ ಸಂವಾದದ ವೇಳೆ ನಾಯ್ಡು ಈ ಭರವಸೆ ನೀಡಿದ್ದಾರೆ.</p><p>‘ರಾಜ್ಯದಲ್ಲಿ ಎನ್ಡಿಎ ಮೈತ್ರಿಯು ಅಧಿಕಾರಕ್ಕೆ ಬಂದ ಕೂಡಲೇ ಪ್ರತಿಯೊಬ್ಬ ಮುಸ್ಲಿಂ ಮೆಕ್ಕಾಗೆ ಹಜ್ ಯಾತ್ರೆ ಕೈಗೊಳ್ಳಲು ತಲಾ ₹1 ಲಕ್ಷ ಹಣಕಾಸಿನ ನೆರವು ನೀಡಲಾಗುವುದು. ಮುಸ್ಲಿಮರ ರೊಟಿಯಯಾನ್ ಕಿ ಈದ್ ಅನ್ನು ನಾಡಿನ ಹಬ್ಬವೆಂದು ಘೋಷಿಸಲಾಗುವುದು, ಬೇರೆ ಸ್ಥಳಗಳಿಗೆ ಹೋಲಿಸಿದರೆ ಹೈದರಾಬಾದ್ ಮುಸ್ಲಿಮರು ಬಹಳ ಮುಂದಿದ್ದಾರೆ’ ಎಂದು ನಾಯ್ಡು ಹೇಳಿದ್ದಾರೆ.</p><p>ಈ ಹಿಂದೆ, ಕೇಂದ್ರದಲ್ಲಿ ಎನ್ಡಿಎ ಸರ್ಕಾರದ ಭಾಗವಾಗಿದ್ದ ಟಿಡಿಪಿ, ಮುಸ್ಲಿಮರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಂಡಿತ್ತು ಎಂದು ಹೇಳಿದ್ದಾರೆ.</p><p>ಟಿಡಿಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಹೈದರಾಬಾದ್ನಲ್ಲಿ ಉರ್ದು ವಿಶ್ವವಿದ್ಯಾಲಯ ಮತ್ತು ಹಜ್ ಭವನ ನಿರ್ಮಾಣ ಮಾಡಿದೆ. ಕಳೆದ 5 ವರ್ಷಗಳಲ್ಲಿ ಸಿಎಂ ಜಗನ್ ಒಂದು ಮಸೀದಿಯನ್ನೂ ಕಟ್ಟುವ ಪ್ರಯತ್ನ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಎನ್ಆರ್ಸಿಗೆ ವೈಎಸ್ಆರ್ಸಿಪಿ ಬೆಂಬಲ ಸೂಚಿಸಿದೆ ಎಂದು ಟೀಕಿಸಿದ್ದಾರೆ.</p><p>175 ವಿಧಾನಸಭಾ ಕ್ಷೇತ್ರಗಳು ಮತ್ತು 25 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಆಂಧ್ರಪ್ರದೇಶದಲ್ಲಿ ಮೇ 13ರಂದು ಏಕಕಾಲದಲ್ಲಿ ಚುನಾವಣೆ ನಡೆಯಲಿದೆ. ಜೂನ್ 4ಕ್ಕೆ ಫಲಿತಾಂಶ ಹೊರಬೀಳಲಿದೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>