<p><strong>ಕೊಟ್ಟಾಯಂ, ಕೇರಳ:</strong> ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ (ಎಸ್ಎನ್ಡಿಪಿ) ಜೊತೆಗಿನ ಮೈತ್ರಿಯಿಂದ ಹೊರ ನಡೆಯುವುದಾಗಿ ನಾಯರ್ ಸರ್ವೀಸ್ ಸೊಸೈಟಿ(ಎನ್ಎಸ್ಎಸ್) ಘೋಷಿಸಿದೆ. ಆ ಮೂಲಕ ಪ್ರಸ್ತಾವಿತ ಏಕತೆಯ ಹೋರಾಟವು ಆರಂಭದಲ್ಲಿಯೇ ಮುರಿದುಬಿದ್ದಿದೆ.</p>.<p>ಪೆರುನ್ನಾದಲ್ಲಿ ನಡೆದ ಎನ್ಎಸ್ಎಸ್ ನಿರ್ದೇಶಕರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಸಂಬಂಧ ಎನ್ಎಸ್ಎಸ್ನ ಪ್ರಧಾನ ಕಾರ್ಯದರ್ಶಿ ಜಿ.ಸುಕುಮಾರನ್ ನಾಯರ್ ಅವರ ಸಹಿ ಇರುವ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ.</p>.<p>‘ಈ ಹಿಂದೆ ನಿರ್ಧರಿಸಿದ್ದ ಎಸ್ಎನ್ಡಿಪಿ ಹಾಗೂ ಎನ್ಎಸ್ಎಸ್ ನಡುವಿನ ಏಕತೆಯು ಹಲವು ಕಾರಣಗಳಿಂದ ಯಶಸ್ವಿಯಾಗುತ್ತಿಲ್ಲ. ಸದ್ಯದ ರಾಜಕೀಯ ಪರಿಸ್ಥಿತಿಯೂ ಅನುಕೂಲಕರವಾಗಿಲ್ಲ’ ಎಂದು ತಿಳಿಸಲಾಗಿದೆ.</p>.<p class="title">ಎನ್ಎಸ್ಎಸ್ ಸಂಘಟನೆಯು ನಾಯರ್ ಸಮುದಾಯವನ್ನು ಪ್ರತಿನಿಧಿಸಿದರೆ, ಎಸ್ಎನ್ಡಿಪಿಯು ಈಳವ ಸಮುದಾಯವನ್ನು ಪ್ರತಿನಿಧಿಸುತ್ತದೆ. </p>.<p class="title">‘ಇಂತಹ ಏಕತೆಯು ಅಪ್ರಾಯೋಗಿಕವಾಗಿದೆ. ಎನ್ಎಸ್ಎಸ್ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳಿಂದಲೂ ಸಮಾನ ಅಂತರ ಕಾಯ್ದುಕೊಂಡಿದೆ. ಎಲ್ಲ ಸಮುದಾಯಗಳ ಜೊತೆಗಿರುವ ಸ್ನೇಹಪರ ಸಂಬಂಧವು ಎಸ್ಎನ್ಡಿಪಿ ಜೊತೆಗೂ ಮುಂದುವರಿಯಲಿದೆ’ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟಾಯಂ, ಕೇರಳ:</strong> ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ (ಎಸ್ಎನ್ಡಿಪಿ) ಜೊತೆಗಿನ ಮೈತ್ರಿಯಿಂದ ಹೊರ ನಡೆಯುವುದಾಗಿ ನಾಯರ್ ಸರ್ವೀಸ್ ಸೊಸೈಟಿ(ಎನ್ಎಸ್ಎಸ್) ಘೋಷಿಸಿದೆ. ಆ ಮೂಲಕ ಪ್ರಸ್ತಾವಿತ ಏಕತೆಯ ಹೋರಾಟವು ಆರಂಭದಲ್ಲಿಯೇ ಮುರಿದುಬಿದ್ದಿದೆ.</p>.<p>ಪೆರುನ್ನಾದಲ್ಲಿ ನಡೆದ ಎನ್ಎಸ್ಎಸ್ ನಿರ್ದೇಶಕರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಸಂಬಂಧ ಎನ್ಎಸ್ಎಸ್ನ ಪ್ರಧಾನ ಕಾರ್ಯದರ್ಶಿ ಜಿ.ಸುಕುಮಾರನ್ ನಾಯರ್ ಅವರ ಸಹಿ ಇರುವ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ.</p>.<p>‘ಈ ಹಿಂದೆ ನಿರ್ಧರಿಸಿದ್ದ ಎಸ್ಎನ್ಡಿಪಿ ಹಾಗೂ ಎನ್ಎಸ್ಎಸ್ ನಡುವಿನ ಏಕತೆಯು ಹಲವು ಕಾರಣಗಳಿಂದ ಯಶಸ್ವಿಯಾಗುತ್ತಿಲ್ಲ. ಸದ್ಯದ ರಾಜಕೀಯ ಪರಿಸ್ಥಿತಿಯೂ ಅನುಕೂಲಕರವಾಗಿಲ್ಲ’ ಎಂದು ತಿಳಿಸಲಾಗಿದೆ.</p>.<p class="title">ಎನ್ಎಸ್ಎಸ್ ಸಂಘಟನೆಯು ನಾಯರ್ ಸಮುದಾಯವನ್ನು ಪ್ರತಿನಿಧಿಸಿದರೆ, ಎಸ್ಎನ್ಡಿಪಿಯು ಈಳವ ಸಮುದಾಯವನ್ನು ಪ್ರತಿನಿಧಿಸುತ್ತದೆ. </p>.<p class="title">‘ಇಂತಹ ಏಕತೆಯು ಅಪ್ರಾಯೋಗಿಕವಾಗಿದೆ. ಎನ್ಎಸ್ಎಸ್ ಮೊದಲಿನಿಂದಲೂ ಎಲ್ಲ ರಾಜಕೀಯ ಪಕ್ಷಗಳಿಂದಲೂ ಸಮಾನ ಅಂತರ ಕಾಯ್ದುಕೊಂಡಿದೆ. ಎಲ್ಲ ಸಮುದಾಯಗಳ ಜೊತೆಗಿರುವ ಸ್ನೇಹಪರ ಸಂಬಂಧವು ಎಸ್ಎನ್ಡಿಪಿ ಜೊತೆಗೂ ಮುಂದುವರಿಯಲಿದೆ’ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>